AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಎಂಟರ್​ಪ್ರೈಸಸ್, ಉಮೇಶ್ ಮನೆ ಮೇಲಿನ ಐಟಿ ದಾಳಿ ಅಂತ್ಯ; ಹಲವು ಕಡತಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು

IT Raids in Bengaluru: ಆದಾಯ ತೆರಿಗೆ ಅಧಿಕಾರಿಗಳು ನಿನ್ನೆ (ಅಕ್ಟೋಬರ್ 7) ಬೆಂಗಳೂರಿನಲ್ಲಿ ಹಲವೆಡೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಇಂದು ಮುಂಜಾನೆ ಪರಿಶೀಲನೆ ಮುಗಿದಿದ್ದು, ಹಲವು ಕಡತಗಳನ್ನು ವಶಪಡಿಸಿಕೊಂಡು ಅಧಿಕಾರಿಗಳು ಮರಳಿದ್ದಾರೆ.

ರಾಹುಲ್ ಎಂಟರ್​ಪ್ರೈಸಸ್, ಉಮೇಶ್ ಮನೆ ಮೇಲಿನ ಐಟಿ ದಾಳಿ ಅಂತ್ಯ; ಹಲವು ಕಡತಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 08, 2021 | 9:32 AM

Share

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಉಮೇಶ್ ಮನೆ ಮೇಲೆ ನಿನ್ನೆ (ಅಕ್ಟೋಬರ್ 7) ಐಟಿ ದಾಳಿ ನಡೆಸಲಾಗಿತ್ತು. ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಭಾಷ್ಯಂ ಸರ್ಕಲ್‌ನಲ್ಲಿರುವ ಅವರ ಮನೆಯಲ್ಲಿ ತಡರಾತ್ರಿಯವರೆಗೂ ಪರಿಶೀಲನೆ ನಡೆದಿತ್ತು. ನೀರಾವರಿ ಕುರಿತ ಟೆಂಡರ್, ಇತರ ಕಡತಗಳನ್ನು ವಶಕ್ಕೆ ಪಡೆಯಲಾಗಿದ್ದು, ದಾಖಲೆಗಳ ಜೊತೆಗೆ ಐಟಿ ಮೂವರು ಐಟಿ ಅಧಿಕಾರಿಗಳು ಮರಳಿದ್ದಾರೆ.

ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿತ್ತು. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು. ರಾಘವೇಂದ್ರ ಬೆಂಗಳೂರಿಗೆ ಬಂದಾಗ ಅವರ ಕೆಲಸಗಳ ನಿರ್ವಹಣೆ ಮಾಡುತ್ತಿದ್ದರು. ಯಡಿಯೂರಪ್ಪ ವಿಪಕ್ಷ ನಾಯಕರಾಗಿದ್ದಾಗ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಉಮೇಶ್ ಪಿಎ ಆಗಿದ್ದರು. ಉಮೇಶ್ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಾರಣ, ಇದರಿಂದ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಅವರಲ್ಲಿತ್ತು. ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮತ್ತು ಸೋದರ ಪ್ರಭಾಕರ್ ಶೆಟ್ಟಿ ವಾಸವಿದ್ದ ಮನೆಯಲ್ಲಿ ಅವರು ವಾಸವಿದ್ದರು.

 ರಾಹುಲ್ ಎಂಟರ್​​ಪ್ರೈಸಸ್ ಮೇಲಿನ ದಾಳಿ ಅಂತ್ಯ: ರಾಹುಲ್‌ ಎಂಟರ್‌ಪ್ರೈಸಸ್ ಮೇಲಿನ ಐಟಿ ದಾಳಿ ಅಂತ್ಯವಾಗಿದ್ದು, ರಾತ್ರಿ 11 ಗಂಟೆ ವೇಳೆಗೆ ತಂಡ ಮರಳಿದೆ. ದಾಳಿಯ ವೇಳೆ, ನೀರಾವರಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು, ಹಾರ್ಡ್ ಡಿಸ್ಕ್, ಬ್ಯಾಂಕ್ ದಾಖಲೆಗಳನ್ನು  ವಶಕ್ಕೆ ಪಡೆಯಲಾಗಿದೆ. ಒಟ್ಟು 10 ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಸಲಾಗಿತ್ತು.

ಕೊಡಿಗೇಹಳ್ಳಿ ಸಹಕಾರ ನಗರದಲ್ಲಿರುವ ರಾಹುಲ್ ಎಂಟರ್‌ ಪ್ರೈಸಸ್ ಮೇಲೆ ನಿನ್ನೆ (ಅಕ್ಟೋಬರ್ 7) ಐಟಿ ದಾಳಿ ನಡೆದಿತ್ತು. ರಾಹುಲ್ ಎಂಟರ್‌ಪ್ರೈಸಸ್ ಸಿಮೆಂಟ್, ಸ್ಟೀಲ್ ಡೀಲರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ಮೂರು ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದರು. ಇದೀಗ ದಾಳಿ ಅಂತ್ಯವಾಗಿದ್ದು, ಅಧಿಕಾರಿಗಳು ಮರಳಿದ್ದಾರೆ.

ಡಿ.ವೈ.ಉಪ್ಪಾರ್ ಕಚೇರಿ ಮೇಲಿನ ದಾಳಿ ಅಂತ್ಯ: ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಆರ್.ಉಪ್ಪಾರ್ ಕಚೇರಿ ಮೇಲಿನ ದಾಳಿ ಕೂಡ  ಅಂತ್ಯವಾಗಿದೆ. ಜೊತೆಗೆ ಐಟಿ ಅಧಿಕಾರಿಗಳು ಬಾಗಲಕೋಟೆ ನಗರಕ್ಕೆ ತೆರಳಿ ಅಲ್ಲಿ ಡಿ.ಆರ್.ಉಪ್ಪಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಕೆಟಗರಿ ಒನ್ ಕಂಟ್ರಾಕ್ಟರ್ ಆಗಿರುವ ಉಪ್ಪಾರ್, ವಿಜಯಪುರ ಮೂಲದ ಗುತ್ತಿಗೆದಾರರಾಗಿದ್ದಾರೆ. ಇದೀಗ ಅವರ ಮನೆಯಲ್ಲೂ ಪರಿಶೀಲನೆ ಮುಗಿದಿದ್ದು, ಅಧಿಕಾರಿಗಳ ತಂಡ ಮರಳಿದೆ.

ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆದಾರ ಶ್ರೀನಿವಾಸ ಮನೆ ಮೇಲೆ IT ದಾಳಿ: ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆದಾರ ಶ್ರೀನಿವಾಸ ಮನೆ ಮೇಲೆ ಐಟಿ ದಾಳಿ ಮುಂದುವರೆದಿದೆ. ಬೆಂಗಳೂರಿನಲ್ಲಿ ವಾಸವಿರುವ ಗುತ್ತಿಗೆದಾರ ಎಂ.ಶ್ರೀನಿವಾಸ ಅವರಿಗೆ ಗಂಗಾವತಿ ತಾಲೂಕಿನ ಕೋಟಯ್ಯ ಕ್ಯಾಂಪ್​​ನಲ್ಲಿರುವ ಮನೆ ಇದೆ. ಅಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ 6 ಜನ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಹಲವು ದಾಖಲೆ ಪತ್ರವನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ಬೆಂಗಳೂರು ನಗರ ಹಾಗೂ ವಿವಿದೆಡೆ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆದಿತ್ತು. ಕರ್ನಾಟಕ, ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. 300ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು 120 ವಾಹನಗಳಲ್ಲಿ ಆಗಮಿಸಿದ್ದರು.

ಇದನ್ನೂ ಓದಿ:

ಯಡಿಯೂರಪ್ಪ ಆಪ್ತ ಉಮೇಶ್ ಕೆಲವೇ ವರ್ಷಗಳಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದು ಸೋಜಿಗ ಹುಟ್ಟಿಸುತ್ತದೆ!

ನೀರಾವರಿ ಗುತ್ತಿಗೆದಾರರ ಮನೆಗಳ ಮೇಲೆ ಐಟಿ ದಾಳಿ: ಮುಸುಕಿನ ಗುದ್ದಾಟದಿಂದ ಹೊರಬಂತೆ ಹುಳುಕು

ಯಾರೇ ತಪ್ಪು ಮಾಡಿದ್ರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ; ರಾಜಕೀಯ ಪ್ರೇರಿತ ದಾಳಿ ಅಲ್ಲ ಎಂದ ಬಿಎಸ್ ಯಡಿಯೂರಪ್ಪ

Published On - 8:00 am, Fri, 8 October 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ