ರಾಜ್ಯದಲ್ಲಿ ಕೊವಿಡ್​​-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್​ ಜಾರಿ

ಜಪಾನ್ ಮತ್ತು ಥೈಲ್ಯಾಂಡ್​ನಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೊತ್ತುಪಡಿಸಿದ ದೇಶಗಳಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿದೆ.

ರಾಜ್ಯದಲ್ಲಿ ಕೊವಿಡ್​​-19 ಪ್ರಕರಣಗಳು ಹೆಚ್ಚಳ ಹಿನ್ನೆಲೆ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್​ ಜಾರಿ
Covid-19
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 30, 2022 | 5:00 PM

ಬೆಂಗಳೂರು: ರಾಜ್ಯದಲ್ಲಿ ಕೊವಿಡ್​​-19 (Covid-19) ಪ್ರಕರಣಗಳು ಹೆಚ್ಚಳ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರದಿಂದ ಗೈಡ್​ಲೈನ್ಸ್ ಜಾರಿ ಮಾಡಿಲಾಗಿದೆ. ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರದಿಂದ ಟೈಟ್​​ ರೂಲ್ಸ್ ಜಾರಿ ಮಾಡಿದ್ದು, ಏರ್​ಪೋರ್ಟ್​ಗಳಲ್ಲಿ ರ್ಯಾಂಡಮ್​ ಟೆಸ್ಟ್​ ನಡೆಸಲು ಮತ್ತು ವಿದೇಶಗಳಿಂದ ಬರುವವರ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ. ಜಪಾನ್​, ಥೈಲ್ಯಾಂಡ್​​ನಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಸ್ಕ್ರೀನಿಂಗ್​ ಮಾಡಲಾಗುವುದು. ಲಕ್ಷಣ ಕಂಡುಬಂದವರಿಗೆ ಏರ್​ಪೋರ್ಟ್​​ನಲ್ಲೇ RTPCR ಪರೀಕ್ಷೆ ಮಾಡಿ ಜಿನೋಮಿಕ್​ ಸೀಕ್ವೆನ್ಸಿಂಗ್​ಗೆ ಕಳುಹಿಸಬೇಕು. ಕೊರೊನಾ ದೃಢಪಟ್ಟವರಿಗೆ ಈಗಿರುವ ಶಿಷ್ಟಾಚಾರದಂತೆ ಚಿಕಿತ್ಸೆ ನೀಡಲಾಗುವುದು.

ಜಪಾನ್ ಮತ್ತು ಥೈಲ್ಯಾಂಡ್​ನಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೊತ್ತುಪಡಿಸಿದ ದೇಶಗಳಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನೀಡಿದೆ. 2% ಪ್ರಯಾಣಿಕರನ್ನ ರ್ಯಾಂಡಮ್ ಪರೀಕ್ಷೆ ಒಳಪಡಿಸಲು ಸರ್ಕಾರ ಮುಂದಾಗಿದೆ. ಜಪಾನ್ ಮತ್ತು ಥೈಲ್ಯಾಂಡ್‌ನಿಂದ ಬೆಂಗಳೂರು ಮತ್ತು ಮಂಗಳೂರು ಉದ್ದೇಶಿತ ವಿಮಾನ ನಿಲ್ದಾಣಗಳಿಗೆ ನೇರ ವಿಮಾನಗಳನ್ನು ಹೊಂದಿರುವ ಪ್ರಯಾಣಿಕರಿಗೆ ಟೆಲಿ ಮಾನಿಟರಿಂಗ್​ ಮತ್ತು ಕಡ್ಡಾಯ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಹಲವು ದೇಶಗಳಲ್ಲಿ ಕೊರೋನಾ ಕೇಸ್ ಹೆಚ್ಚಳ ಹಿನ್ನೆಲೆ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್ ಲೈನ್ಸ್ ಜಾರಿ ಮಾಡಲಾಗಿದೆ. ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಆಸ್ಟ್ರೇಲಿಯಾ, ವಿಯೆಟ್ನಾಂ, ನ್ಯೂಜಿಲೆಂಡ್​ಗಳಲ್ಲಿ ಕೇಸ್ ಹೆಚ್ಚಳವಾಗಿದ್ದು, ಜಪಾನ್ ಹಾಗೂ ಥೈಲ್ಯಾಂಡ್ ಇಂದ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

1. ಜಪಾನ್‌, ಥೈಲ್ಯಾಂಡ್ ಇಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ 2. ಕೋವಿಡ್ ಲಕ್ಷಣಗಳಿರುವ ಪ್ರಯಾಣಿಕರ ಸ್ಯಾಂಪಲ್ ಏರ್ ಪೋರ್ಟ್ ಲ್ಯಾಬ್​ನಲ್ಲೇ ಪರೀಕ್ಷೆ ಮಾಡುವುದು. ಪಾಸಿಟಿವ್ ಬಂದರೆ ಜೀನೋಮ್ ಸೀಕ್ವೆನ್ಸಿಂಗ್ ಕಳಿಸುವುದು. 3. ಜಪಾನ್, ಥೈಲ್ಯಾಂಡ್ ಇಂದ ಬರುವ ಪ್ರಯಾಣಿಕರನ್ನ 14 ದಿನಗಳ ಕಾಲ ಟೆಲಿ ಮಾನಿಟರಿಂಗ್ ಮಾಡುವುದು ಕಡ್ಡಾಯ.

ಆಯಕಟ್ಟಿನ ಜಾಗಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿ ಫಿಕ್ಸ್​ ಮಾಡಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಸೋಂಕು ತನ್ನ ನಾಲ್ಕನೆಯ ಅಲೆಯಲ್ಲಿ ಇನ್ನೂ ಭಾರತವನ್ನು ಅಷ್ಟಾಗಿ ತಾಕಿಲ್ಲ ಎಂದು ಹೇಳುತ್ತಿರುವಾಗಲೇ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್​ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು ಶುಕ್ರವಾರ 133 ಜನರಿಗೆ ಕೊರೊನಾ ಅಟ್ಯಾಕ್​ ಆಗಿದ್ದರೆ ಬೆಂಗಳೂರಿನಲ್ಲಿ ಇಂದು 127 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 1,737 ಇದೆ. ಬೆಂಗಳೂರಲ್ಲಿ ಕೊರೊನಾ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 1,667 ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.16ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮಧ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಕೊವಿಡ್​​ ಗೈಡ್​ಲೈನ್ಸ್​ ಬಿಡುಗಡೆ ಮಾಡಿದೆ. ಮುಖ್ಯವಾಗಿ ಆಯಕಟ್ಟಿನ ಜಾಗಗಳಾದ ಆಸ್ಪತ್ರೆಗಳಿಗೆ, ಥಿಯೇಟರ್ ಹಾಗೂ ಹೋಟೆಲ್, ಮಾಲ್ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಕೊವಿಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. OPDಗಳಲ್ಲಿ ಎಲ್ಲಾ ILI/ SARI ಪ್ರಕರಣ ಪರೀಕ್ಷಿಸಬೇಕು. ಒಳರೋಗಿಗಳಿಗೆ ಕೊವಿಡ್-19 ಪರೀಕ್ಷೆ ಮಾಡಬೇಕು ಎಂದು ಸೂಚಿಸಿದೆ. ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ.

ಇದನ್ನೂ ಓದಿ;

‘ಕೆಜಿಎಫ್ 2’ ಚಿತ್ರದ 16ನೇ ದಿನದ ಕಲೆಕ್ಷನ್ ಹಿಂದಿಕ್ಕಲು ಒದ್ದಾಡಿದ ಅಜಯ್ ದೇವಗನ್ ಹೊಸ ಸಿನಿಮಾ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!