ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಏಡಾಟ ಹೆಚ್ಚಾಗ್ತೀದೆ.. ನಿರಂತರ ವಾಹನಗಳ ಓಡಾಟ ವೇಗವಾಗಿ ಸಂಚರಿಸುವ ವಾಹನಗಳಿಂದ ಬೆಂಗಳೂರು ವಿವಿ ಆಕ್ಸಿಡೆಂಟ್ ಹಬ್ ಆಗ್ತಿದ್ದು ವಿದ್ಯಾರ್ಥಿಗಳು ಶಿಕ್ಷಕಯರು ಪರದಾಡುವಂತಾಗಿದ್ದು ಈಗ ಮತ್ತೆ ಬೆಂಗಳೂರು ಜ್ಞಾನ ಭಾರತಿ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣಕ್ಕೆ ಒತ್ತಾಯ ಕೇಳಿ ಬರ್ತಿದೆ.

ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ
Follow us
| Updated By: ಆಯೇಷಾ ಬಾನು

Updated on: Jun 19, 2024 | 6:51 AM

ಬೆಂಗಳೂರು, ಜೂನ್.19: ಬೆಂಗಳೂರು ಯೂನಿವರ್ಸಿಟಿಯಲ್ಲಿ (Bangalore University) ಕಳೆದ ಕೆಲವು ದಿನಗಳಿಂದ ವಾಹನಗಳ ಸಂಚಾರ ಏರಿಕೆಯಾಗ್ತಲೇ ಇದೆ. ಇದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೈಯಲ್ಲಿ ಜೀವ ಹಿಡ್ಕೊಂಡೇ ಕ್ಯಾಂಪಸ್ ನಲ್ಲಿ ಓಡಾಡಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು (Student) ಹಾಗೂ ಶಿಕ್ಷಕರು (Teacher) ಕಳೆದ ಕೆಲ ವರ್ಷಗಳಿಂದ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ರು. ಇದೀಗ ಪಬ್ಲಿಕ್ ವಾಹನ ಓಡಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಮತ್ತೆ ಒತ್ತಡ ಹೆಚ್ಚಾಗಿದೆ. ಜ್ಞಾನಭಾರತಿ ಆವರಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆ ವಾಹನಗಳ ಕಡಿವಾಣಕ್ಕೆ ಡಿಮ್ಯಾಂಡ್ ಕೇಳಿ ಬಂದಿದೆ. ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಸಹ ಹೆಚ್ಚಾದ ಹಿನ್ನೆಲೆ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ

ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರಬಾವಿಯಿಂದ ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೆಚ್ಚಾಗಿ ಜನರ ಸಂಚಾರ ಕಂಡುಬರ್ತಿದೆ. ಹೀಗಾಗಿ ಅಪಘಾತ ಹೆಚ್ಚಾಗಿ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ವಾಹನಗಳ ಆರ್ಭಟ ಹೆಚ್ಚಾಗಿರುವ ಹಿನ್ನಲೆ ನಿತ್ಯ ಸಾವಿರಾರು ಬೈಕ್ ಕಾರು ಆಟೋ ಬಸ್ ಕ್ಯಾಂಪಸ್ ನಲ್ಲಿ ಸಂಚಾರ ಮಾಡ್ತೀದ್ದು ಕ್ಯಾಂಪಸನಲ್ಲಿ ಓಡಾಡುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯದಲ್ಲಿಯೇ ಓಡಾಡಬೇಕಿದೆ. ನಿತ್ಯ ಹಾಸ್ಟೇಲ್, ಕ್ಯಾಂಪಸ್ ನಲ್ಲಿ ರೋಡ್ ಕ್ರಾಸ್ ಮಾಡಲು ಪರದಾಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಕ್ಯಾಂಪಸ್ ಭಾಗದಲ್ಲಿ ಸಮಯ ನಿರ್ಬಂಧ ಪ್ರಯೋಜನ ಇಲ್ಲವಾಗಿದೆ. ಹೀಗಾಗಿ ಕ್ಯಾಂಪಸ್ ನಲ್ಲಿ ಮೀತಿ ಮಿರಿದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕುವಂತೆ ವಿವಿಯ ಶಿಕ್ಷಕರು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

ಇನ್ನೂ ಈ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ. ಕ್ಯಾಂಪಸ್ ನಲ್ಲಿ ಸಾರ್ವಜನಿಕೆ ಓಡಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದು ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ವಿವಿ ಕೂಡಾ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಪ್ಲಾನ್ ಮಾಡಿದೆ.

ಒಟ್ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟ ಹೆಚ್ಚಾಗಿರೊದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರ ವಲಯಕ್ಕೆ ಕಿರಿಕಿರಿ ಎದುರಾಗಿದೆ. ಕಳೆದ ವರ್ಷವಷ್ಟೇ ವಾಹನಗಳ ಆರ್ಭಟದಿಂದ ವಿದ್ಯಾರ್ಥಿನಿ ಬಲಿಯಾಗಿದ್ದು ಘಟನೆ ಮಾಸುವ ಮುನ್ನವೇ ಮತ್ತೆ ವಾಹನಗಳ ಸಂಚಾರ ಏರಿಕೆ ಸಮಸ್ಯೆ ತಂದೊಡಿದೆ. ಹೀಗಾಗಿ ಸರ್ಕಾರಕ್ಕೆ ಈ ಬಗ್ಗೆ ಮತ್ತೆ ಒತ್ತಾಯ ಕೇಳಿ ಬಂದಿದ್ದು ಈ ಸಾರಿಯಾದ್ರೂ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಬ್ರೇಕ್ ಬೀಳುತ್ತಾ ಅಂತಾ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು