AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಏಡಾಟ ಹೆಚ್ಚಾಗ್ತೀದೆ.. ನಿರಂತರ ವಾಹನಗಳ ಓಡಾಟ ವೇಗವಾಗಿ ಸಂಚರಿಸುವ ವಾಹನಗಳಿಂದ ಬೆಂಗಳೂರು ವಿವಿ ಆಕ್ಸಿಡೆಂಟ್ ಹಬ್ ಆಗ್ತಿದ್ದು ವಿದ್ಯಾರ್ಥಿಗಳು ಶಿಕ್ಷಕಯರು ಪರದಾಡುವಂತಾಗಿದ್ದು ಈಗ ಮತ್ತೆ ಬೆಂಗಳೂರು ಜ್ಞಾನ ಭಾರತಿ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣಕ್ಕೆ ಒತ್ತಾಯ ಕೇಳಿ ಬರ್ತಿದೆ.

ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬೆಂಗಳೂರು ಯೂನಿವರ್ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಳ
Vinay Kashappanavar
| Edited By: |

Updated on: Jun 19, 2024 | 6:51 AM

Share

ಬೆಂಗಳೂರು, ಜೂನ್.19: ಬೆಂಗಳೂರು ಯೂನಿವರ್ಸಿಟಿಯಲ್ಲಿ (Bangalore University) ಕಳೆದ ಕೆಲವು ದಿನಗಳಿಂದ ವಾಹನಗಳ ಸಂಚಾರ ಏರಿಕೆಯಾಗ್ತಲೇ ಇದೆ. ಇದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೈಯಲ್ಲಿ ಜೀವ ಹಿಡ್ಕೊಂಡೇ ಕ್ಯಾಂಪಸ್ ನಲ್ಲಿ ಓಡಾಡಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು (Student) ಹಾಗೂ ಶಿಕ್ಷಕರು (Teacher) ಕಳೆದ ಕೆಲ ವರ್ಷಗಳಿಂದ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ರು. ಇದೀಗ ಪಬ್ಲಿಕ್ ವಾಹನ ಓಡಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಮತ್ತೆ ಒತ್ತಡ ಹೆಚ್ಚಾಗಿದೆ. ಜ್ಞಾನಭಾರತಿ ಆವರಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆ ವಾಹನಗಳ ಕಡಿವಾಣಕ್ಕೆ ಡಿಮ್ಯಾಂಡ್ ಕೇಳಿ ಬಂದಿದೆ. ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಸಹ ಹೆಚ್ಚಾದ ಹಿನ್ನೆಲೆ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ

ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರಬಾವಿಯಿಂದ ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೆಚ್ಚಾಗಿ ಜನರ ಸಂಚಾರ ಕಂಡುಬರ್ತಿದೆ. ಹೀಗಾಗಿ ಅಪಘಾತ ಹೆಚ್ಚಾಗಿ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ವಾಹನಗಳ ಆರ್ಭಟ ಹೆಚ್ಚಾಗಿರುವ ಹಿನ್ನಲೆ ನಿತ್ಯ ಸಾವಿರಾರು ಬೈಕ್ ಕಾರು ಆಟೋ ಬಸ್ ಕ್ಯಾಂಪಸ್ ನಲ್ಲಿ ಸಂಚಾರ ಮಾಡ್ತೀದ್ದು ಕ್ಯಾಂಪಸನಲ್ಲಿ ಓಡಾಡುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯದಲ್ಲಿಯೇ ಓಡಾಡಬೇಕಿದೆ. ನಿತ್ಯ ಹಾಸ್ಟೇಲ್, ಕ್ಯಾಂಪಸ್ ನಲ್ಲಿ ರೋಡ್ ಕ್ರಾಸ್ ಮಾಡಲು ಪರದಾಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಕ್ಯಾಂಪಸ್ ಭಾಗದಲ್ಲಿ ಸಮಯ ನಿರ್ಬಂಧ ಪ್ರಯೋಜನ ಇಲ್ಲವಾಗಿದೆ. ಹೀಗಾಗಿ ಕ್ಯಾಂಪಸ್ ನಲ್ಲಿ ಮೀತಿ ಮಿರಿದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕುವಂತೆ ವಿವಿಯ ಶಿಕ್ಷಕರು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

ಇನ್ನೂ ಈ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ. ಕ್ಯಾಂಪಸ್ ನಲ್ಲಿ ಸಾರ್ವಜನಿಕೆ ಓಡಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದು ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ವಿವಿ ಕೂಡಾ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಪ್ಲಾನ್ ಮಾಡಿದೆ.

ಒಟ್ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ವಾಹನಗಳ ಓಡಾಟ ಹೆಚ್ಚಾಗಿರೊದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರ ವಲಯಕ್ಕೆ ಕಿರಿಕಿರಿ ಎದುರಾಗಿದೆ. ಕಳೆದ ವರ್ಷವಷ್ಟೇ ವಾಹನಗಳ ಆರ್ಭಟದಿಂದ ವಿದ್ಯಾರ್ಥಿನಿ ಬಲಿಯಾಗಿದ್ದು ಘಟನೆ ಮಾಸುವ ಮುನ್ನವೇ ಮತ್ತೆ ವಾಹನಗಳ ಸಂಚಾರ ಏರಿಕೆ ಸಮಸ್ಯೆ ತಂದೊಡಿದೆ. ಹೀಗಾಗಿ ಸರ್ಕಾರಕ್ಕೆ ಈ ಬಗ್ಗೆ ಮತ್ತೆ ಒತ್ತಾಯ ಕೇಳಿ ಬಂದಿದ್ದು ಈ ಸಾರಿಯಾದ್ರೂ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಬ್ರೇಕ್ ಬೀಳುತ್ತಾ ಅಂತಾ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?