AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್ ದರ ಹೆಚ್ಚಳ; KSRTC ಬಸ್​ಗೆ ಭಾರೀ ಡಿಮ್ಯಾಂಡ್, ಹೆಚ್ಚುವರಿ ಸಾರಿಗೆ ಬಸ್​ಗಳ ವ್ಯವಸ್ಥೆ

ಖಾಸಗಿ ಬಸ್​ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಕೆಎಸ್​ಆರ್​ಟಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಪರಿಣಾಮ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ಬಸ್​ಗಳನ್ನು ಕಲ್ಪಿಸಲಾಗಿದೆ.

ಖಾಸಗಿ ಬಸ್ ದರ ಹೆಚ್ಚಳ; KSRTC ಬಸ್​ಗೆ ಭಾರೀ ಡಿಮ್ಯಾಂಡ್, ಹೆಚ್ಚುವರಿ ಸಾರಿಗೆ ಬಸ್​ಗಳ ವ್ಯವಸ್ಥೆ
ಮತದಾನ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ
Rakesh Nayak Manchi
Rakesh Nayak Manchi|

Updated on: May 09, 2023 | 3:36 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಗರದಲ್ಲಿ ನೆಲೆಸಿರುವ ಅನೇಕರು ನಾಳೆ ಮತದಾನಕ್ಕೆ (Voting) ತವರೂರಿಗೆ ಹೋಗುತ್ತಿರುವ ಹಿನ್ನೆಲೆ ಹೆಚ್ಚುವರಿ ಸಾರಿಗೆ ಬಸ್​ಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಖಾಸಗಿ ಬಸ್​ ಮಾಲೀಕರು ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡಿದ ಹಿನ್ನೆಲೆ ಅನೇಕರು ಕೆಎಸ್​ಆರ್​ಟಿಸಿ (KSRTC) ಕಡೆ ಮುಖಮಾಡಿದ್ದಾರೆ.

ಖಾಸಗಿ ಬಸ್​ ದರ ಹೆಚ್ಚಳದಿಂದ ಕಂಗಾಲಾದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣಗಳಿಗೆ ಜಮಾಯಿಸಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಈ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ ಅಧಿಕಾರಿಗಳು ಮೆಜೆಸ್ಟಿಕ್​​ನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿ ಬಸ್​ ವ್ಯವಸ್ಥೆ ಕಲ್ಪಿಸಿದ್ದಾರೆ. ಒಟ್ಟು 32 ಬಸ್ಸುಗಳು ಹೆಚ್ಚುವರಿಯಾಗಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣಕ್ಕೆ ಬಂದಿವೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ಪ್ರಯಾಣಿಕರಿಗಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಬಳ್ಳಾರಿ, ಹಿರಿಯೂರು, ಚಳ್ಳಕೆರೆ ಕಡೆ ಹೆಚ್ಚುವರಿ ಬಸ್​ಗಳ ಓಡಾಟ ಆರಂಭವಾಗಿದೆ. ಈ ಭಾಗದ ಪ್ರಯಾಣಿಕರಿಗಾಗಿ 10 ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ, ಹಿರಿಯೂರು, ಚಳ್ಳೆಕೆರೆ ಕಡೆ ಬಿಎಂಟಿಸಿ ಬಸ್​ ಸೇವೆ ಆರಂಭಗೊಂಡಿದ್ದು, ಹೆಚ್ಚುವರಿಯಾಗಿ ಕೆಎಸ್ಆರ್​ಟಿಸಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಹಿರಿಯೂರಿಗೆ ಬಿಎಂಟಿಸಿ ಮೊದಲ ಹೊರಟಿದ್ದು, ಚಳ್ಳಕೆರೆ ಮಾರ್ಗಕ್ಕೆ ಮತ್ತೊಂದು ಕೆಎಸ್ಆರ್​ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿಗೂ ಹೆಚ್ಚುವರಿ ಬಸ್ ಹೊರಟಿದೆ. ತುಮಕೂರು,ಹಿರಿಯೂರು ಹಾಗೂ ಚಳ್ಳಕೆರೆ ಮಾರ್ಗವಾಗಿ ಈ ಬಸ್​ಗಳು ಹೊರಡಲಿವೆ. ಸದ್ಯ ನಿಲ್ದಾಣಕ್ಕೆ ಬರುತ್ತಿರುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು