ಖಾಸಗಿ ಬಸ್ ದರ ಹೆಚ್ಚಳ; KSRTC ಬಸ್​ಗೆ ಭಾರೀ ಡಿಮ್ಯಾಂಡ್, ಹೆಚ್ಚುವರಿ ಸಾರಿಗೆ ಬಸ್​ಗಳ ವ್ಯವಸ್ಥೆ

ಖಾಸಗಿ ಬಸ್​ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳವಾದ ಹಿನ್ನೆಲೆ ಕೆಎಸ್​ಆರ್​ಟಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಪರಿಣಾಮ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ಬಸ್​ಗಳನ್ನು ಕಲ್ಪಿಸಲಾಗಿದೆ.

ಖಾಸಗಿ ಬಸ್ ದರ ಹೆಚ್ಚಳ; KSRTC ಬಸ್​ಗೆ ಭಾರೀ ಡಿಮ್ಯಾಂಡ್, ಹೆಚ್ಚುವರಿ ಸಾರಿಗೆ ಬಸ್​ಗಳ ವ್ಯವಸ್ಥೆ
ಮತದಾನ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ
Rakesh Nayak Manchi

Updated on: May 09, 2023 | 3:36 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಗರದಲ್ಲಿ ನೆಲೆಸಿರುವ ಅನೇಕರು ನಾಳೆ ಮತದಾನಕ್ಕೆ (Voting) ತವರೂರಿಗೆ ಹೋಗುತ್ತಿರುವ ಹಿನ್ನೆಲೆ ಹೆಚ್ಚುವರಿ ಸಾರಿಗೆ ಬಸ್​ಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಖಾಸಗಿ ಬಸ್​ ಮಾಲೀಕರು ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡಿದ ಹಿನ್ನೆಲೆ ಅನೇಕರು ಕೆಎಸ್​ಆರ್​ಟಿಸಿ (KSRTC) ಕಡೆ ಮುಖಮಾಡಿದ್ದಾರೆ.

ಖಾಸಗಿ ಬಸ್​ ದರ ಹೆಚ್ಚಳದಿಂದ ಕಂಗಾಲಾದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣಗಳಿಗೆ ಜಮಾಯಿಸಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಈ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಇಲಾಖೆ ಅಧಿಕಾರಿಗಳು ಮೆಜೆಸ್ಟಿಕ್​​ನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿ ಬಸ್​ ವ್ಯವಸ್ಥೆ ಕಲ್ಪಿಸಿದ್ದಾರೆ. ಒಟ್ಟು 32 ಬಸ್ಸುಗಳು ಹೆಚ್ಚುವರಿಯಾಗಿ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣಕ್ಕೆ ಬಂದಿವೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ಪ್ರಯಾಣಿಕರಿಗಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಬಳ್ಳಾರಿ, ಹಿರಿಯೂರು, ಚಳ್ಳಕೆರೆ ಕಡೆ ಹೆಚ್ಚುವರಿ ಬಸ್​ಗಳ ಓಡಾಟ ಆರಂಭವಾಗಿದೆ. ಈ ಭಾಗದ ಪ್ರಯಾಣಿಕರಿಗಾಗಿ 10 ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ, ಹಿರಿಯೂರು, ಚಳ್ಳೆಕೆರೆ ಕಡೆ ಬಿಎಂಟಿಸಿ ಬಸ್​ ಸೇವೆ ಆರಂಭಗೊಂಡಿದ್ದು, ಹೆಚ್ಚುವರಿಯಾಗಿ ಕೆಎಸ್ಆರ್​ಟಿಸಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಹಿರಿಯೂರಿಗೆ ಬಿಎಂಟಿಸಿ ಮೊದಲ ಹೊರಟಿದ್ದು, ಚಳ್ಳಕೆರೆ ಮಾರ್ಗಕ್ಕೆ ಮತ್ತೊಂದು ಕೆಎಸ್ಆರ್​ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿಗೂ ಹೆಚ್ಚುವರಿ ಬಸ್ ಹೊರಟಿದೆ. ತುಮಕೂರು,ಹಿರಿಯೂರು ಹಾಗೂ ಚಳ್ಳಕೆರೆ ಮಾರ್ಗವಾಗಿ ಈ ಬಸ್​ಗಳು ಹೊರಡಲಿವೆ. ಸದ್ಯ ನಿಲ್ದಾಣಕ್ಕೆ ಬರುತ್ತಿರುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us