AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

ಕರ್ನಾಟಕದಲ್ಲಿ ಡೆಂಗ್ಯೂ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1902 ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ. ಈ ಹಿನ್ನಲೆ ಈಗಾಗಲೇ ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ. ಜೊತೆಗೆ ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಸೆಪ್ಟೆಂಬರ್​ಗೆ ಡೆಂಗ್ಯೂ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?
ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ
ಶಾಂತಮೂರ್ತಿ
ಶಾಂತಮೂರ್ತಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 02, 2024 | 3:23 PM

Share

ಬೆಂಗಳೂರು, ಜು.02: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ(Dengue Fever) ಅಬ್ಬರ ಜೋರಾಗಿದ್ದು, ನಗರದ ಕಗ್ಗದಾಸಪುರದ 27 ವರ್ಷದ ಯುವಕ ಈ ಮಹಾಮಾರಿಗೆ ಸಾವಿಗೀಡಾಗಿದ್ದಾನೆ ಎಂದು ನಿನ್ನೆ(ಜು.01) ಬಿಬಿಎಂಪಿ (BBMP) ಖಚಿತಪಡಿಸಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 1902 ಪ್ರಕರಣ ದಾಖಲಾಗಿದ್ದು, ನಿನ್ನೆ ಒಂದೇ ದಿನ ನಗರದಲ್ಲಿ 65 ಪ್ರಕರಣ ಪತ್ತೆಯಾಗಿದೆ. ಈ ಹಿನ್ನಲೆ ಈಗಾಗಲೇ ಪಾಲಿಕೆ ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾಗಿದೆ.

ಸಿಲಿಕಾನ್ ಸಿಟಿಗೆ ಕಾದಿದ್ಯಾ ಸೆಪ್ಟೆಂಬರ್ ಗಂಡಾಂತರ..?

ಸೆಪ್ಟೆಂಬರ್​ಗೆ ಡೆಂಗ್ಯೂ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ‘ಪೀಕ್ ಆಗೋದು ಸೆಪ್ಟೆಂಬರ್​ನಲ್ಲಿ ಆದರೆ, ಈ ಬಾರಿ ಜೂನ್​ನಲ್ಲೇ ಪೀಕ್​ಗೆ ಹೋಗಿದೆ. ಕಳೆದ ವರ್ಷ 750 ಕೇಸ್ ಮಾತ್ರ ಜೂನ್​ನಲ್ಲಿ‌ಇತ್ತು. ಈ ಬಾರಿ 2000 ರೀಚ್ ಆಗುತ್ತಿದೆ. ಸೆಪ್ಟೆಂಬರ್ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ನಾವು ತಂಡಗಳನ್ನ ರಚನೆ ಮಾಡಿ ಜನರನ್ನ ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಆರೋಗ್ಯ ಸಮೀಕ್ಷೆಯಲ್ಲಿ ಕಂಡುಬಂತು ಆಘಾತಕಾರಿ ಅಂಶ

ಡೆಂಗ್ಯೂ ನಿಯಂತ್ರಣಕ್ಕೆ ಸಜ್ಜಾದ ಪಾಲಿಕೆ

ಇನ್ನು ಕ್ಯಾಂಪೇನಿಂಗ್ ನಡೆಸಲಾಗುತ್ತಿದೆ, ಮನೆ ಮನೆಗೆ ಪಾಪ್ ಪ್ಲೇಟ್ ಹಂಚಿ ತಿಳುವಳಿಕೆ ನೀಡುತ್ತಿದ್ದೇವೆ. ಜೊತೆಗೆ ಬಸ್ ಸ್ಟ್ಯಾಂಡ್ ಜಾಹೀರಾತುಗಳನ್ನ ಹಾಕಲಿದ್ದೇವೆ. ಫ್ರೆಶ್ ವಾಟರ್​ನಲ್ಲಿ ಉತ್ಪತಿಯಾಗುವ ಸೊಳ್ಳೆಗಳಿಂದ ಡೆಂಗ್ಯೂ ಸೋಂಕು ಬರುತ್ತದೆ. ಬಿಬಿಎಂಪಿಯಲ್ಲಿ ಆರು ಸಾವಿರ ಟೆಸ್ಟಿಂಗ್ ಕಿಟ್ ಇದೆ. 95% ಕೇಸ್​ಗಳು ಖಾಸಗಿಯಲ್ಲಿ ರಿಪೋರ್ಟಿಂಗ್ ಆಗುತ್ತಿದೆ. ಪಿಹೆಚ್​ಸಿ ಗೆ ಬಂದಿರುವ ಅತೀ ಹೆಚ್ಚು ಜ್ವರ ಹಾಗೂ ರೋಗಲಕ್ಷಣಗಳು ಇರುವ ರೋಗಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ.

ಚಿಕಿತ್ಸೆ ಏನು?

ಡೆಂಗ್ಯೂ ಸೋಂಕು ತಗುಲಿದ ವ್ಯಕ್ತಿಯಲ್ಲಿ ಬಿಳಿ ರಕ್ತಕಣಗಳು 20 ಸಾವಿರಕ್ಕಿಂತ ಕಡಿಮೆ ಇದ್ದರೆ, ಅಂತಹ ವ್ಯಕ್ತಿಗೆ ಬ್ಲಡ್ ಡೊನೆಟ್ ಅವಶ್ಯಕತೆ ಇದೆ. ಉಳಿದಂತೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಡೆಂಘೀ ನಿರ್ಮೂಲನೆಗೆ ಮತ್ತಷ್ಟು ಕ್ರಮಗಳನ್ನ ಕೈಗೊಳ್ಳಲಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ