AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಬಳಿಕ ಹೆಚ್ಚಾದ ಪ್ರಯಾಣಿಕರ ಸಂಖ್ಯೆ; ನಾಲ್ಕು ‌ಸಾರಿಗೆ ನಿಗಮಕ್ಕೆ ಬರಲಿದೆ ನಾಲ್ಕು ಸಾವಿರ ಹೊಸ ಬಸ್

ಶಕ್ತಿ ಯೋಜನೆ ಜಾರಿಯಾಗಿದ್ದೆ ತಡ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ‌ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ವಳವಾಗಿದ್ದು ಇರೋ ಬಸ್ಸುಗಳು ಸಾಲದೆ ಡ್ರೈವರ್ ಕಂಡಕ್ಟರ್​ಗಳು ಪರದಾಡುವಂತಾಗಿದೆ.

ಶಕ್ತಿ ಯೋಜನೆ ಬಳಿಕ ಹೆಚ್ಚಾದ ಪ್ರಯಾಣಿಕರ ಸಂಖ್ಯೆ; ನಾಲ್ಕು ‌ಸಾರಿಗೆ ನಿಗಮಕ್ಕೆ ಬರಲಿದೆ ನಾಲ್ಕು ಸಾವಿರ ಹೊಸ ಬಸ್
ಕೆಎಸ್​ಆರ್​ಟಿಸಿ
Follow us
TV9 Web
| Updated By: ಆಯೇಷಾ ಬಾನು

Updated on: Jun 25, 2023 | 3:22 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಶಕ್ತಿ ಯೋಜನೆ(Free Bus Travel For Women Scheme) ಘೋಷಣೆ ಮಾಡಿತು. ಇಂದಿಗೆ ಒರೋಬ್ಬರಿ 15 ದಿನ ಕಳೆದಿದ್ದು ಕೋಟ್ಯಾಂತರ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳನ್ನು ಬಳಸುತ್ತಿದ್ದು ಭಾರೀ ಅನಾಹುತಗಳು ಸಂಭವಿಸುತ್ತಿವೆ. ಬಸ್​ಗಳಿಗಾಗಿ ಹೆಣ್ಮಕ್ಳು ಮುಗಿಬಿದ್ದಿದ್ದಾರೆ. ಸೀಟಿಗಾಗಿ ಜಗಳಗಳಾಗುತ್ತಿವೆ. ರಾಜ್ಯದಲ್ಲಿರುವ ‌ಸಾರಿಗೆ ನಿಗಮದ ಬಸ್ಸುಗಳು ಸಾಲುತ್ತಿಲ್ಲ. ಹೀಗಾಗಿ ನಾಲ್ಕೂ ಸಾರಿಗೆ ನಿಗಮಕ್ಕೆ ನಾಲ್ಕು ಸಾವಿರ ಹೊಸ ಬಸ್​ ಖರೀದಿಗೆ ಚಿಂತನೆ ನಡೆದಿದೆ.

ನಾಲ್ಕು ‌ಸಾರಿಗೆ ನಿಗಮಕ್ಕೆ ಬರಲಿದೆ ನಾಲ್ಕು ಸಾವಿರ ಹೊಸ ಬಸ್

ಕೆಎಸ್​ಆರ್​ಟಿಸಿಯಲ್ಲಿ ಈಗಾಗಲೇ 8116 ಬಸ್ಸುಗಳಿವೆ. ಬಿಎಂಟಿಸಿಯಲ್ಲಿ 6688, ವಾಯುವ್ಯ ಸಾರಿಗೆಯಲ್ಲಿ 4858 ಬಸ್ಸುಗಳು ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 4327 ಬಸ್​ಗಳಿವೆ. ಅಂದ್ರೆ ಒಟ್ಟು ನಾಲ್ಕು ಸಾರಿಗೆ ನಿಗಮದಿಂದ 23,986 ಬಸ್ಸುಗಳಿವೆ. ಆದರೆ ರಾಜ್ಯದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ ಇಷ್ಟು ಬಸ್ಸುಗಳು ಸಾಲುವುದಿಲ್ಲ. ಅಲ್ಲದೆ ಈಗಾಗಲೇ ನಾಲ್ಕು ನಿಯಮಗಳಲ್ಲಿ ಹತ್ತು ಲಕ್ಷಕ್ಕಿಂತ ಹೆಚ್ಚು ಕಿಮೀ ಸಂಚಾರ ಮಾಡಿರುವ ಬಸ್ಸುಗಳಿವೆ. ಆರ್​ಟಿಓ ರೂಲ್ಸ್ ಪ್ರಕಾರ ಬಸ್ಸುಗಳು 8 ರಿಂದ 10 ಲಕ್ಷ ಕಿಮೀ ಮಾತ್ರ ಸಂಚಾರ ಮಾಡಬೇಕು. ‌ಅದರ ಮೇಲೆ ಮಾಡಿದ್ರೆ ಅದನ್ನು ಗುಜರಿಗೆ ಹಾಕಬೇಕು. ಆದರೆ ನಾಲ್ಕು ನಿಗಮಗಳಲ್ಲಿ ಸುಮಾರು 3 ರಿಂದ 4 ಸಾವಿರ ಹಳೆಯ ಬಸ್ಸುಗಳಿದ್ದು ಅವುಗಳನ್ನು ಗುಜರಿಗೆ ಹಾಕಿ ಮತ್ತೆ ಹೊಸದಾಗಿ ನಾಲ್ಕು ಸಾವಿರ ಬಸ್ಸುಗಳನ್ನು ಸೇರಿಸಲು ತಯಾರಿ ನಡೆದಿದೆ.

ಇದನ್ನೂ ಓದಿ: ಮಹಿಳೆಯರಲ್ಲಿ ಮನವಿ ಟಿಕೆಟ್​ ಕೇಳಿ ಪಡೆಯಿರಿ: ಶಕ್ತಿ ಯೋಜನೆ ಅರಿವು ಮೂಡಿಸುತ್ತಿರುವ ಕಂಡಕ್ಟರ್ ಹಾಡು ವಿಡಿಯೋ ವೈರಲ್

ಇನ್ನು ಈ ವರ್ಷದಲ್ಲಿ ನಾಲ್ಕು ಸಾರಿಗೆ ನಿಗಮಗಳ ಪೈಕೆ 95% ನಾರ್ಮಲ್ ಹೊಸ ಬಸ್​ಗಳು ಬರಲಿದ್ದು ಮಿಕ್ಕ 5 % ಮಲ್ಟಿ ಆಕ್ಸೆಲ್ ಹಾಗೂ ಡಬಲ್ ಡೆಕ್ಕರ್ ಬಸ್​ಗಳು ಬರಲಿವೆ. ಇದರಲ್ಲಿ ಬಹುಪಾಲು ಬಿಎಂಟಿಸಿ, ಕೆಎಸ್ಆರ್ಟಿಸಿ ನಿಗಮಕ್ಕೆ ಸೇರಲಿವೆ. ಜೊತೆಗೆ ಮತ್ತೊಂದೆಡೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಪ್ರತಿಕ್ರಿಯೆ ನೀಡಿದ್ದು ಹೊಸ ಬಸ್​ಗಳು ಬರ್ತಿರೋದು ಸಂತೋಷದ ವಿಷಯ ಆದರೆ ಬಸ್ ಓಡಿಸಲು ಕಂಡಕ್ಟರ್ ಡ್ರೈವರ್ ಬೇಕು. ಹಾಗಾಗಿ ಮೊದಲು ನೇಮಕಾತಿ ಪ್ರಕ್ರಿಯೆ ಆರಂಭ ಮಾಡಲಿ. ಇಲ್ಲಾಂದ್ರೆ ನಿಗಮವನ್ನು ನಡೆಸುವುದು ಕಷ್ಟ ಆಗುತ್ತದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಒಟ್ನಲ್ಲಿ ಇತ್ತ ಶಕ್ತಿ ಯೋಜನೆ ಜಾರಿಯಾಗಿದ್ದೆ ತಡ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ‌ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ವಳವಾಗಿದ್ದು ಇರೋ ಬಸ್ಸುಗಳು ಸಾಲದೆ ಡ್ರೈವರ್ ಕಂಡಕ್ಟರ್​ಗಳು ಪರದಾಡುವಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?