AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಿದ ಪಾಸ್​​ಪೋರ್ಟ್​​ ಮಾಡಿಸುವವರ ಸಂಖ್ಯೆ: ಬೆಂಗಳೂರು ಫಸ್ಟ್​​, ಮಂಗಳೂರು ಸೆಕೆಂಡ್​

ಬೆಂಗಳೂರಿನ ರಿಜಿನಲ್ ಪಾಸ್ ಪೋರ್ಟ್ ಆಫೀಸ್ (RPO), ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು ವಿತರಿಸಿದೆ.

ರಾಜ್ಯದಲ್ಲಿ ಹೆಚ್ಚಿದ ಪಾಸ್​​ಪೋರ್ಟ್​​ ಮಾಡಿಸುವವರ ಸಂಖ್ಯೆ: ಬೆಂಗಳೂರು ಫಸ್ಟ್​​, ಮಂಗಳೂರು ಸೆಕೆಂಡ್​
ಸಾಂದರ್ಭಿಕ
Follow us
ವಿವೇಕ ಬಿರಾದಾರ
|

Updated on: May 01, 2023 | 3:40 PM

ಬೆಂಗಳೂರು: ಈಗಿನ ಬಹುತೇಕ ಜನರಲ್ಲಿ ವಿದೇಶಕ್ಕೆ (Internatioanl) ಹೋಗಿ ಓದಬೇಕು, ದುಡಿಬೇಕು, ಸುತ್ತಾಡಬೇಕು ಎಂಬ ಆಸೆಗಳು ಸಾಮಾನ್ಯ. ಅದರಂತೆಯೇ ಈಗ ಬೆಂಗಳೂರು (Bengaluru), ಮಂಗಳೂರಿನಲ್ಲಿ (Mangaluru) ಪಾಸ್‌ಪೋರ್ಟ್‌ಗಳನ್ನು (Passport) ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನ ರಿಜಿನಲ್ ಪಾಸ್ ಪೋರ್ಟ್ ಆಫೀಸ್ (RPO), ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು ವಿತರಿಸಿದೆ. ಇದು ಪಾಸ್‌ಪೋರ್ಟ್‌ಗಳ ಮುದ್ರಿತ ಮತ್ತು ಹೊಸ ಅರ್ಜಿದಾರರಿಗೆ ಮತ್ತು ನವೀಕರಣ ಮಾಡಿರುವುದು ಒಳಗೊಂಡಿವೆ.

ಬೆಂಗಳೂರಿನ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು (ಪಿಎಸ್‌ಕೆ) ಮಾರ್ಚ್​ನಲ್ಲೇ ಅತಿ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ನೀಡಿದ್ದು ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಮೈಸೂರು ಇದೆ.

ಇದನ್ನೂ ಓದಿ: ಬೆಂಗಳೂರು: ಹೋಟೆಲ್​ನಲ್ಲಿ​ ಗ್ರಾಹಕರಿಗೆ ಮತದಾನ ಮಹತ್ವದ ಸಂದೇಶ, ಮಂಗಳಮುಖಿಯರಿಂದ ಗೋಡೆಗಳ ಮೇಲೆ ಅರಳುತ್ತಿದೆ ಮತದಾನ ಜಾಗೃತಿ ಚಿತ್ತಾರ

ಮಾಹಾಮಾರಿ ಕೊರೊನಾ ಸಮಯದಲ್ಲಿ, ಅಂತರರಾಷ್ಟ್ರೀಯ ಪ್ರಯಾಣ ನಿಷೇಧದಿಂದಾಗಿ ಪಾಸ್‌ಪೋರ್ಟ್ ಅರ್ಜಿದಾರರ ಸಂಖ್ಯೆ ತೀವ್ರವಾಗಿ ಕುಸಿದಿತ್ತು. ಕೊರೊನಾ ನಂತರ ಪರಿಸ್ಥಿತಿ ಬದಲಾಗಿದ್ದು ಪಾಸ್‌ಪೋರ್ಟ್​ಗಾಗಿ ಹೊಸ ಹೊಸ ಅರ್ಜಿಗಳು ಮತ್ತು ಪಾಸ್‌ಪೋರ್ಟ್‌ಗಳ ನವೀಕರಣಕ್ಕಾಗಿ PSK ಗಳಲ್ಲಿ ಅಪಾಯಿಂಟ್‌ಮೆಂಟ್‌ಗಳು ಹೆಚ್ಚಾಗಿವೆ. ಅದರಲ್ಲೂ 2021 ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು. ಆದರೆ ಈಗ ಪರಿಸ್ಥಿತಿಯು ಸರಾಗವಾಗಿದೆ ಮತ್ತು ಹೊಸ ಪಾಸ್‌ಪೋರ್ಟ್‌ಗಳು ಮತ್ತು ಪೊಲೀಸ್-ಕ್ಲಿಯರೆನ್ಸ್ ಪ್ರಮಾಣಪತ್ರಗಳ ಅಪಾಯಿಂಟ್‌ಮೆಂಟ್‌ಗಳು ಈಗ ಒಂದು ವಾರ ಅಥವಾ ಎರಡು ವಾರಗಳಲ್ಲಿ ಸಿಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ