AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಗುತ್ತಿದೆ ಬೆಂಗಳೂರು ನಗರ ಕಮಿಷನರ್ ಬದಲಾವಣೆಯ ಮಾತು; ಶುರುವಾಗಿದೆ ದೊಡ್ಡ ಮಟ್ಟದ ಲಾಬಿ

ನಾಲ್ವರು ಅಧಿಕಾರಿಗಳಿಂದ ನಡೆಯುತ್ತಿದೆ ದೊಡ್ಡ ಮಟ್ಟದ ಲಾಬಿ ನಾಲ್ವರು ಅಧಿಕಾರಿಗಳು ಕಮಿಷನರ್ ಕುರ್ಚಿಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚಾಗುತ್ತಿದೆ ಬೆಂಗಳೂರು ನಗರ ಕಮಿಷನರ್ ಬದಲಾವಣೆಯ ಮಾತು; ಶುರುವಾಗಿದೆ ದೊಡ್ಡ ಮಟ್ಟದ ಲಾಬಿ
ಕಮಲ್ ಪಂತ್ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on: Oct 05, 2021 | 11:14 AM

ಬೆಂಗಳೂರು: ಕಮಲ್ ಪಂತ್ (Kamal Pant) ಬೆಂಗಳೂರು ನಗರ ಕಮಿಷನರ್ (Commissioner) ಆಗಿ ಒಂದು ವರ್ಷ ಪೂರೈಸಿದ್ದಾರೆ. ಈ ನಡುವೆ ಕಮಿಷನರ್ ಬದಲಾವಣೆಯ ಮಾತು ಹೆಚ್ಚಾಗುತ್ತಿದ್ದು, ಕಮಿಷನರ್ ಕುರ್ಚಿಗಾಗಿ ದೊಡ್ಡ ಮಟ್ಟದ ಲಾಬಿ ಶುರುವಾಗಿದೆ. ಕಮಲ್ ಪಂತ್ ಎಡಿಜಿಪಿಯಿಂದ ಡಿಜಿಯಾಗಿ ಬಡ್ತಿ ಪಡೆದಿದ್ದಾರೆ. 2021 ಏಪ್ರಿಲ್​ನಲ್ಲಿ ಕಮಲ್ ಪಂತ್ ಡಿಜಿಯಾಗಿ ಬಡ್ತಿ ಪಡೆದಿದ್ದರು. ಡಿಜಿಯಾಗಿ ಬಡ್ತಿ ಪಡೆದಿದ್ದರು ಕಮಿಷನರ್ ಆಗಿ ಕಮಲ್ ಪಂತ್ ಮುಂದುವರೆದಿದ್ದಾರೆ. ಎಡಿಜಿಪಿ ರ್ಯಾಂಕ್​ನಲ್ಲಿದ್ದವರು ಸಾಮಾನ್ಯವಾಗಿ ಕಮಿಷನರ್ ಆಗಿರುತ್ತಾರೆ. ಆದರೆ ಡಿಜಿಯಾಗಿ ಬಡ್ತಿ ಪಡೆದಿದ್ದರು ಕಮಲ್ ಪಂತ್ ಕಮಿಷನರ್ ಆಗಿ ಮುಂದುವರಿದಿದ್ದಾರೆ.

ನಾಲ್ವರು ಅಧಿಕಾರಿಗಳಿಂದ ನಡೆಯುತ್ತಿದೆ ದೊಡ್ಡ ಮಟ್ಟದ ಲಾಬಿ ನಾಲ್ವರು ಅಧಿಕಾರಿಗಳು ಕಮಿಷನರ್ ಕುರ್ಚಿಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗುಪ್ತಚರ ಇಲಾಖೆಯ ಎಡಿಜಿಪಿ ದಯಾನಂದ್, ಸಿಐಡಿ ಎಡಿಜಿಪಿ ಉಮೇಶ್ ಕುಮಾರ್, ಕೆಎಸ್ಆರ್​ಪಿ ಎಡಿಜಿಪಿ ಅಲೋಕ್ ಕುಮಾರ್, ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ದೊಡ್ಡ ಮಟ್ಟದ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಎಡಿಜಿಪಿ ರ್ಯಾಂಕ್ ಅಧಿಕಾರಿಗಳನ್ನು ಕಮಿಷನರ್ ಮಾಡಿ ಎಂದು ಎಡಿಜಿಪಿ ರ್ಯಾಂಕ್ ಅಧಿಕಾರಿಗಳಿಂದಲೇ ಒತ್ತಡ ಹೆಚ್ಚಾಗುತ್ತಿದೆ. ಸದ್ಯ ಸಿಎಂ ಬಸವರಾಜ ಬೊಮ್ಮಾಯಿ ನಗರ ಪೊಲೀಸ್ ಕಮಿಷನರ್ ಬದಲಾವಣೆ ಯೋಚನೆಯಲ್ಲಿದ್ದಾರೆ. ಯಾರನ್ನು ಕಮಿಷನರ್ ಮಾಡಬೇಕು ಎನ್ನುವ ಗೊಂದಲದಲ್ಲಿ ಬೊಮ್ಮಾಯಿ ಇದ್ದಾರೆ.

ದೊಡ್ಡ ಮಟ್ಟದ ಲಾಬಿ ಓರ್ವ ಎಡಿಜಿಪಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಿಎಂ ಪುತ್ರ ವಿಜಯೇಂದ್ರ ಮೂಲಕ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೋರ್ವ ಎಡಿಜಿಪಿಗೆ ದೆಹಲಿ ಮಟ್ಟದ ಬಿಜೆಪಿ ನಾಯಕರ ಬೆಂಬಲವಿದೆ. ಎಡಿಜಿಪಿ ಮಾವ ಬಿಹಾರ ರಾಜ್ಯದ ಲೋಕಸಭಾ ಸದಸ್ಯ. ಆ ಮೂಲಕ ಕೇಂದ್ರ ನಾಯಕರ ಮಟ್ಟದಿಂದ ಲಾಬಿ ನಡೆಯುತ್ತಿದೆ. ಮಗದೊಬ್ಬ ಎಡಿಜಿಪಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಹೆಸರು ಸೂಚಿಸಿದ್ದಾರೆ. ಇನ್ನೋರ್ವ ಎಡಿಜಿಪಿಗೆ ಆರ್​ಎಸ್​ಎಸ್​ ಬೆಂಬಲ ಸಿಗುತ್ತಿದೆ. ಅಲ್ಲದೇ ಬೆಂಗಳೂರಿನ ಖಡಕ್ ಪೊಲೀಸ್ ಆಫಿಸರ್ ಎಂಬ ಹೆಗ್ಗಳಿಕೆ ಇದೆ.

ಜನವರಿಯಲ್ಲಿ ಕಮಿಷನರ್ ಬದಲಾವಣೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಆಗ ಇನ್ನೂ ಕೆಲವು ಅಧಿಕಾರಿಗಳಿಗೆ ಬಡ್ತಿ ಸಿಗಲಿದೆ. ಹಾಗಾಗಿ 2 ತಿಂಗಳು ಕಾದು ನೋಡುವ ತಂತ್ರವನ್ನು ಸಿಎಂ ಅನುಸರಿಸುತ್ತಿದ್ದಾರೆ. ಕಮಲ್ ಪಂತ್ ಕೂಡ ದಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇವರೇ ಮುಂದುವರೆಯಲಿ ಎನ್ನುವ ಮಾಹಿತಿ ಕೂಡ ಇದೆ.

ಇದನ್ನೂ ಓದಿ

ಆರ್ ಆರ್ ನಗರನಲ್ಲಿ ರಾಜಾಕಾಲುವೆಯಿಂದ ನುಗ್ಗಿದ ನೀರು ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ಗಳು ಕೊಚ್ಚಿ ಹೋಗುವಂತೆ ಮಾಡಿದೆ!

ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಸಿಲುಕಿದ್ದ ವಯಸ್ಕರನ್ನು ರಕ್ಷಿಸಿದ ಮೂವರು ಆಪ್ತ ಸ್ನೇಹಿತರು! ಹೃದಯಸ್ಪರ್ಶಿ ವಿಡಿಯೊ ನೋಡಿ

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ