Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED Match: ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆ, ವಿದ್ವಾಂಸಕ ಕೃತ್ಯ ತಡೆಗೆ ವಿಶೇಷ ತಂಡಗಳ ನಿಯೋಜನೆ

ಬೆಂಗಳೂರು ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್​ ನಡುವೆ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್​ಟಿ ಮಾಹಿತಿ ನೀಡಿದ್ದು, ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.

IND vs NED Match: ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆ, ವಿದ್ವಾಂಸಕ ಕೃತ್ಯ ತಡೆಗೆ ವಿಶೇಷ ತಂಡಗಳ ನಿಯೋಜನೆ
ಭಾರತ ಮತ್ತು ನೆದರ್ಲ್ಯಾಂಡ್ಸ್​ ನಡುವೆ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆ ಬೆಂಗಳೂರಿನ ಚಿನ್ನಸ್ವಾಮಿ‌ ಸ್ಟೇಡಿಯಂ ಬಳಿ ಪೊಲೀಸ್ ಭದ್ರತೆImage Credit source: AFP Photo
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Nov 11, 2023 | 5:27 PM

ಬೆಂಗಳೂರು, ನ.11: ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲ್ಯಾಂಡ್ಸ್ (IND-NED Match)​ ನಡುವೆ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್​ಟಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ ಒಟ್ಟು ಐದು ಪಂದ್ಯ ನಿಗಧಿಯಾಗಿತ್ತು. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದೆ, ಐದನೇ ಪಂದ್ಯ ನಾಳೆ ನಡೆಯಲಿದೆ. ನಾಳೆ ಭಾರತ-ನೆದರ್ಲ್ಯಾಂಡ್ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದೆ. ಹೀಗಾಗಿ ಚಿನ್ನಸ್ವಾಮಿ‌ ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ: IND vs NED: ಬ್ಯಾಟಿಂಗ್ ಸ್ವರ್ಗ ಬೆಂಗಳೂರಿನಲ್ಲಿ ಅಬ್ಬರಿಸುತ್ತಾ ಭಾರತ? ಪಂದ್ಯಕ್ಕೆ ಮಳೆಯ ಆತಂಕ? ಇಲ್ಲಿದೆ ವಿವರ

ಒಂಬತ್ತು ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್, 86 ಮಂದಿ ಪಿಎಸ್ಐಗಳು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ, 4 ಕೆಎಸ್​ಆರ್​ಪಿ ತುಕಡಿ, 2 ಡಿ ಸ್ವಾಟ್ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಸ್ಟೇಡಿಯಂನ ಎಲ್ಲಾ ಗೇಟ್ ಬಳಿ ವಿದ್ವಾಂಸಕ ಕೃತ್ಯ ತಪಾಸಣೆ ಕೈಗೊಳ್ಳುತ್ತೇವೆ. ಟಿಕೆಟ್ ಹಿಂದೆ ನಮೂದಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Sat, 11 November 23