AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2023: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಭರ್ಜರಿ ಸಿದ್ಧತೆ, ಹಲವೆಡೆ ವಾಹನ ನಿಲುಗಡೆ ನಿಷಿದ್ಧ

ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಲಿದ್ದಾರೆ. ಸದ್ಯ ಈಗಾಗಲೇ ಪೆಂಡಾಲ್, ಪೀಠೋಪಕರಣ ಹಾಕಿ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Vinayak Hanamant Gurav
| Updated By: ಆಯೇಷಾ ಬಾನು|

Updated on: Aug 13, 2023 | 11:12 AM

Share

ಬೆಂಗಳೂರು, ಆ.13: ಆಗಸ್ಟ್​ 15ರಂದು 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ(Independence Day) ಹಿನ್ನೆಲೆ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ(Manik Shah Parade Ground) ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಜೊತೆಗೆ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಕೆಎಸ್​​ಆರ್​ಪಿ, ಸಿಎಆರ್, ಹೋಮ್​ಗಾರ್ಡ್, ಸಂಚಾರಿ ಪೊಲೀಸರು ಸೇರಿದಂತೆ 1350 ಪೊಲೀಸ್ ಸಿಬ್ಬಂದಿ, 38 ತುಕಡಿಗಳು ಭದ್ರತೆಗೆ ನಿಯೋಜನೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಯಾರಿ ಬಗ್ಗೆ ಮಾಹಿತಿ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವಿರಲಿದ್ದು ಭದ್ರತಾ ದೃಷ್ಟಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಮಾಣಿಕ್ ಶಾ ಪರೇಡ್ ಮೈದಾನದಲ್ಲೇ ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ 100 ಸಿಸಿಟಿವಿ ಅಳವಡಿಸಲಾಗುತ್ತದೆ. 2 ಬ್ಯಾರೇಜ್ ಸ್ಕ್ಯಾನರ್ ಅಳವಡಿಕೆ, ಮುಂಜಾಗ್ರತಾ ಕ್ರಮವಾಗಿ ಆಂಬ್ಯುಲೆನ್ಸ್, ಅಗ್ನಿಶಾಮಕ ದಳ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜನೆ ಮಾಡಲಾಗುತ್ತೆ ಎಂದರು.

ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯನವರು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಲಿದ್ದಾರೆ. ಸದ್ಯ ಈಗಾಗಲೇ ಪೆಂಡಾಲ್, ಪೀಠೋಪಕರಣ ಹಾಕಿ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 3 ದಿನಗಳ ಕಾಲ ಪರೇಡ್ ರಿಹರ್ಸಲ್ ನಡೆಯಲಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಡಿಪಿ ಬದಲಿಸಿದ ಪ್ರಧಾನಿ ಮೋದಿ

ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳ ವಿವರ

  • ಶ್ರೀಪದ ದೇವರಾಜ್ ತಂಡದಿಂದ ನಾಡಗೀತೆ,ರೈತಗೀತೆ
  • ವೀರನಮನ- ಕರ್ನಾಟಕ ಪಬ್ಲಿಕ್ ಸ್ಕೂಲ್,ಸಾರಕ್ಕಿ ಮಕ್ಕಳ ತಂಡ
  • ವೀರಭೂಮಿ ವಿದುರಾಶ್ವತ್ಥ ಧ್ವಜ ಸತ್ಯಾಗ್ರಹ- ಬಿಬಿಎಂಪಿ ಸಂಯುಕ್ತ ಪ.ಪೂ.ಕಾಲೇಜ್,ಹೇರೋಹಳ್ಳಿ
  • ರೋಪ್ ಸ್ಕಿಪಿಂಗ್-ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ,ಬೈಲಹೊಂಗಲ, ಬೆಳಗಾವಿ
  • ಕಲಾರಿಪಯಟ್ಟು-ಎಂ.ಇ.ಜಿ ತಂಡ
  • ಟೆಂಟ್ ಪೆಗ್ಗಿಂಗ್-ಎ.ಎಸ್.ಸಿ ತಂಡ
  • ಮೋಟಾರ್ ಸೈಕಲ್ ಪ್ರದರ್ಶನ-ಎ.ಎಸ್.ಸಿ.ತಂಡ

ಯಾವ್ಯಾವ ರಸ್ತೆಯಲ್ಲಿ ನಿರ್ಬಂಧ?

  • ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
  • ಕಬ್ಬನ್ ರಸ್ತೆ, ಸಿ.ಟಿ.ಓ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
  • ಎಂ.ಜಿ.ರಸ್ತೆ,ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆವರೆಗೆ

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ