AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ

ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ ಎಂದು ಹೇಳಿದರು.

Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ
ಚಾಮರಾಜಪೇಟೆ ನಾಗರಿಕ ಒಕ್ಕೂಟದ ಮುಖಂಡರು ಬಿಬಿಎಂಪಿ ನಿರ್ಧಾರವನ್ನು ಸ್ವಾಗತಿಸಿದರು.
TV9 Web
| Edited By: |

Updated on:Aug 07, 2022 | 12:39 PM

Share

ಬೆಂಗಳೂರು: ನಗರದ ವಿವಾದಿತ ಚಾಮರಾಜಪೇಟೆಯ (ಈದ್ಗಾ) ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಶತಃಸಿದ್ಧ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ನಾಯಕರು ಒಕ್ಕೊರಲಿನಿಂದ ಹೇಳಿದರು. ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ‘ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ನಾವು ತೀರ್ಮಾನಿಸಿದ್ದೇವೆ’ ಎಂದು ಘೋಷಿಸಿದರು.

ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ಅನುಮತಿ ಕೊಡಲಿ ಬಿಡಲಿ, ಸ್ವಾತಂತ್ರ್ಯ ದಿನವನ್ನು ನಾವು ಸಂಭ್ರಮದಿಂದ ಆಚರಿಸಿಯೇ ತೀರುತ್ತೇವೆ. ಹಿಂದೂ ಸಂಘಟನೆಗಳೂ ಈ ಕಾರ್ಯಕ್ರಮಕ್ಕೆ ಸಹಯೋಗ ನೀಡುವ ಭರವಸೆ ನೀಡಿವೆ ಎಂದು ಹೇಳಿದರು. ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ನಮ್ಮ ಜೀವ ಹೋದರೂ ನಾವು ಧ್ವಜಾರೋಹಣ ಮಾಡುತ್ತೇವೆ. ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದರು.

ಚಾಮರಾಜಪೇಟೆ ಆಟದ ಮೈದಾನದಲ್ಲಿ ತಿರಂಗಾ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ವಕ್ಫ್​ ಮಂಡಳಿಯು ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಹೇಳಿದೆ. ನಾವೂ ಸಹ ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಬಳಿಯೂ ಮೈದಾನದ ಬಗ್ಗೆ ಎಲ್ಲ ದಾಖಲೆಗಳು ಇವೆ. ನಾವೂ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದರು. ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರಿಡಬೇಕು. ಇಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೇ ಬಂದು ಧ್ವಜಾರೋಹಣ ಮಾಡಬೇಕು ಎಂದು ಹೇಳಿದರು.

ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುಕ್ಮಾಂಗದ ಮಾತನಾಡಿ, ಸತತ 3 ತಿಂಗಳ ಉಗ್ರ ಹೋರಾಟದ ನಂತರ ಈ ಫಲಿತಾಂಶ ಬಂದಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹಿಂದೂ ಪರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ನಾವು ಈ ವಿಚಾರವಾಗಿ ಬಂದ್​ಗೆ ಕರೆ ನೀಡಿದಾಗ ಎಲ್ಲರ ಬೆಂಬಲ ಸಿಕ್ಕಿತ್ತು. ಹೊಳೆ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ಯಾರು ಏನೇ ಹೇಳಿದರೂ ಮೈದಾನದಲ್ಲಿ ನಾವು ತ್ರಿವರ್ಣ ಧ್ವಜ ಹಾರಿಸುತ್ತೇವೆ ಎಂದು ಹೇಳಿದರು.

ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ಮಾತನಾಡಿ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಂದ ಗೊಂದಲವಾಯಿತು. ಈ ಕ್ಷೇತ್ರದ ಶಾಸಕರು, ಇಬ್ಬರು ಮೂವರು ಮಾಜಿ ಕಾರ್ಪೊರೇಟರ್​ಗಳ ಕುಮ್ಮಕ್ಕಿನಿಂದ ಸಮಸ್ಯೆಯಾಗುತ್ತಿತ್ತು. ಪಾಲಿಕೆಯ ಹೆಸರಿನ ಖಾತೆಯಲ್ಲಿದ್ದ ಸ್ವತ್ತು, ಕಂದಾಯ ಇಲಾಖೆಗೆ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಕಂದಾಯ ಇಲಾಖೆಗೆ ಹಸ್ತಾಂತರ ಮಾಡುವುದು ಅನಿವಾರ್ಯ. ಕಂದಾಯ ಇಲಾಖೆಯು ಈ ಸ್ವತ್ತಿಗೆ ಜಯಚಾಮರಾಜೇಂದ್ರ ಆಟದ ಮೈದಾನವೆಂದು ನಾಮಕರಣ ಮಾಡಬೇಕು ಎಂದು ಕೋರಿದರು.

ಬಿಬಿಎಂಪಿ ನಿರ್ಧಾರಕ್ಕೆ ಪಟಾಕಿ ಹೊಡೆದು ಸ್ವಾಗತ

ಚಾಮರಾಜಪೇಟೆ ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕಂದಾಯ ಇಲಾಖೆಗೆ ಸೇರಿದ್ದು ಎನ್ನುವ ಬಿಬಿಎಂಪಿ ಜಂಟಿ ಆಯುಕ್ತರ ನಿರ್ಣಯವನ್ನು ಚಾಮರಾಜಪೇಟೆಯ ಹಲವು ನಿವಾಸಿಗಳು ಸ್ವಾಗತಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಶಾಸಕ ಜಮೀರ್ ಅಹಮ್ಮದ್ ಕಚೇರಿಯ ಪಕ್ಕದಲ್ಲೇ ವಿಜಯೋತ್ಸವ ಆಚರಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

Published On - 12:39 pm, Sun, 7 August 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ