AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ

ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ ಎಂದು ಹೇಳಿದರು.

Chamrajpet Idgah Maidan: ಅನುಮತಿ ಕೊಡಲಿ, ಬಿಡಲಿ ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ; ನಾಗರಿಕ ಒಕ್ಕೂಟದ ಖಚಿತ ನುಡಿ
ಚಾಮರಾಜಪೇಟೆ ನಾಗರಿಕ ಒಕ್ಕೂಟದ ಮುಖಂಡರು ಬಿಬಿಎಂಪಿ ನಿರ್ಧಾರವನ್ನು ಸ್ವಾಗತಿಸಿದರು.
TV9 Web
| Edited By: |

Updated on:Aug 07, 2022 | 12:39 PM

Share

ಬೆಂಗಳೂರು: ನಗರದ ವಿವಾದಿತ ಚಾಮರಾಜಪೇಟೆಯ (ಈದ್ಗಾ) ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಶತಃಸಿದ್ಧ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟದ ನಾಯಕರು ಒಕ್ಕೊರಲಿನಿಂದ ಹೇಳಿದರು. ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ‘ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ನಾವು ತೀರ್ಮಾನಿಸಿದ್ದೇವೆ’ ಎಂದು ಘೋಷಿಸಿದರು.

ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ಅನುಮತಿ ಕೊಡಲಿ ಬಿಡಲಿ, ಸ್ವಾತಂತ್ರ್ಯ ದಿನವನ್ನು ನಾವು ಸಂಭ್ರಮದಿಂದ ಆಚರಿಸಿಯೇ ತೀರುತ್ತೇವೆ. ಹಿಂದೂ ಸಂಘಟನೆಗಳೂ ಈ ಕಾರ್ಯಕ್ರಮಕ್ಕೆ ಸಹಯೋಗ ನೀಡುವ ಭರವಸೆ ನೀಡಿವೆ ಎಂದು ಹೇಳಿದರು. ಮೈದಾನವು ಸಾರ್ವಜನಿಕರ ಆಸ್ತಿ. ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲು, ತ್ರಿವರ್ಣ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ನಮ್ಮ ಜೀವ ಹೋದರೂ ನಾವು ಧ್ವಜಾರೋಹಣ ಮಾಡುತ್ತೇವೆ. ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದರು.

ಚಾಮರಾಜಪೇಟೆ ಆಟದ ಮೈದಾನದಲ್ಲಿ ತಿರಂಗಾ ಧ್ವಜ ಹಾರಿಸಲು ಯಾರ ಅನುಮತಿಯೂ ಬೇಕಿಲ್ಲ. ವಕ್ಫ್​ ಮಂಡಳಿಯು ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಹೇಳಿದೆ. ನಾವೂ ಸಹ ಕಾನೂನು ಹೋರಾಟಕ್ಕೆ ಸಿದ್ಧರಿದ್ದೇವೆ. ನಮ್ಮ ಬಳಿಯೂ ಮೈದಾನದ ಬಗ್ಗೆ ಎಲ್ಲ ದಾಖಲೆಗಳು ಇವೆ. ನಾವೂ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದರು. ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರಿಡಬೇಕು. ಇಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೇ ಬಂದು ಧ್ವಜಾರೋಹಣ ಮಾಡಬೇಕು ಎಂದು ಹೇಳಿದರು.

ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುಕ್ಮಾಂಗದ ಮಾತನಾಡಿ, ಸತತ 3 ತಿಂಗಳ ಉಗ್ರ ಹೋರಾಟದ ನಂತರ ಈ ಫಲಿತಾಂಶ ಬಂದಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹಿಂದೂ ಪರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ನಾವು ಈ ವಿಚಾರವಾಗಿ ಬಂದ್​ಗೆ ಕರೆ ನೀಡಿದಾಗ ಎಲ್ಲರ ಬೆಂಬಲ ಸಿಕ್ಕಿತ್ತು. ಹೊಳೆ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ಯಾರು ಏನೇ ಹೇಳಿದರೂ ಮೈದಾನದಲ್ಲಿ ನಾವು ತ್ರಿವರ್ಣ ಧ್ವಜ ಹಾರಿಸುತ್ತೇವೆ ಎಂದು ಹೇಳಿದರು.

ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ಮಾತನಾಡಿ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಂದ ಗೊಂದಲವಾಯಿತು. ಈ ಕ್ಷೇತ್ರದ ಶಾಸಕರು, ಇಬ್ಬರು ಮೂವರು ಮಾಜಿ ಕಾರ್ಪೊರೇಟರ್​ಗಳ ಕುಮ್ಮಕ್ಕಿನಿಂದ ಸಮಸ್ಯೆಯಾಗುತ್ತಿತ್ತು. ಪಾಲಿಕೆಯ ಹೆಸರಿನ ಖಾತೆಯಲ್ಲಿದ್ದ ಸ್ವತ್ತು, ಕಂದಾಯ ಇಲಾಖೆಗೆ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಕಂದಾಯ ಇಲಾಖೆಗೆ ಹಸ್ತಾಂತರ ಮಾಡುವುದು ಅನಿವಾರ್ಯ. ಕಂದಾಯ ಇಲಾಖೆಯು ಈ ಸ್ವತ್ತಿಗೆ ಜಯಚಾಮರಾಜೇಂದ್ರ ಆಟದ ಮೈದಾನವೆಂದು ನಾಮಕರಣ ಮಾಡಬೇಕು ಎಂದು ಕೋರಿದರು.

ಬಿಬಿಎಂಪಿ ನಿರ್ಧಾರಕ್ಕೆ ಪಟಾಕಿ ಹೊಡೆದು ಸ್ವಾಗತ

ಚಾಮರಾಜಪೇಟೆ ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕಂದಾಯ ಇಲಾಖೆಗೆ ಸೇರಿದ್ದು ಎನ್ನುವ ಬಿಬಿಎಂಪಿ ಜಂಟಿ ಆಯುಕ್ತರ ನಿರ್ಣಯವನ್ನು ಚಾಮರಾಜಪೇಟೆಯ ಹಲವು ನಿವಾಸಿಗಳು ಸ್ವಾಗತಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಶಾಸಕ ಜಮೀರ್ ಅಹಮ್ಮದ್ ಕಚೇರಿಯ ಪಕ್ಕದಲ್ಲೇ ವಿಜಯೋತ್ಸವ ಆಚರಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

Published On - 12:39 pm, Sun, 7 August 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?