AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ವಿವಾದಿತ ಮೈದಾನದಲ್ಲಿ ಎಲ್ಲೆಲ್ಲೂ ಖಾಕಿ ಕಣ್ಗಾವಲು

ಮೈದಾನ ಸಂಪೂರ್ಣ RAF ಟೀಮ್ ಸುತ್ತುವರೆದಿದ್ದು, ಅಹಿತಕರ ಘಟನೆ ನಡೆಯದಮನತೆ ಮೈದಾನದ ಮೇಲೆ ಖಾಕಿ ಕಣ್ಗಾವಲು ವಹಿಸಿದೆ. 250 ರಿಂದ 300 ಮಂದಿ RAF ಟೀಮ್​ನಿಂದ ಭದ್ರತೆ ಒದಗಿಸಲಾಗಿದೆ.

ಮೊದಲ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ವಿವಾದಿತ ಮೈದಾನದಲ್ಲಿ ಎಲ್ಲೆಲ್ಲೂ ಖಾಕಿ ಕಣ್ಗಾವಲು
ಚಾಮರಾಜಪೇಟೆ ಮೈದಾನ
TV9 Web
| Edited By: |

Updated on:Aug 15, 2022 | 7:52 AM

Share

ಬೆಂಗಳೂರು: ವಿವಾದಿತ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಕೌಂಟ್ ಡೌನ್​ ಶುರುವಾಗಿದ್ದು, 75ನೇ ಸ್ವಾತಂತ್ರ್ಯ ದಿನಾಚರಣೆಗೆ ಚಾಮರಾಜಪೇಟೆ ಮೈದಾನ ಸಿದ್ದವಾಗಿದೆ. ವಿವಾದದ ಬಳಿಕ ಇತಿಹಾಸದಲ್ಲಿ ಮೊದಲಿಗೆ ಇಂದು ತ್ರಿವರ್ಣ ಧ್ವಜ ಹಾರಲಿದ್ದು, ವಿವಾದಿತ ಮೈದಾನದಲ್ಲಿ ಎಲ್ಲೆಲ್ಲೂ ಖಾಕಿ ಕಣ್ಗಾವಲು ವಹಿಸಿದೆ. ಸುಮಾರು 20 ಅಡಿಯ ಧ್ವಜ ಸ್ತಂಭವನ್ನು  ಕಂದಾಯ ಇಲಾಖೆ ನೆಟ್ಟಿದ್ದು, ಇಂದು ಬೆಳಗ್ಗೆ 8 ಗಂಟೆಗೆ ರಾಜ್ಯ ಸರ್ಕಾರ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಶಿವಣ್ಣ ಅವರಿಂದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮೈದಾನದಲ್ಲಿ ಇಂದು ಜನಗಣಮನ ರಾಷ್ಟ್ರಗೀತೆ ಮೊಳಗಲಿದೆ. ಸ್ಥಳೀಯ ಶಾಸಕ ಜಮೀರ್​ಗೂ ಧ್ವಜ ಹಾರಿಸೋ ಭಾಗ್ಯ ಇಲ್ಲ. ಧ್ವಜಾರೋಹಣ ಹಾರಿಸೋದಕ್ಕೆ ಕಂದಾಯ ಇಲಾಖೆಯಿಂದ ಸಕಲ ಸಿದ್ದತೆ ಮಾಡಿದ್ದು, ಮೈದಾನದಲ್ಲಿ ಧ್ವಜಾರೋಹಣ ವೇಳೆ ಕಾನೂನು ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು.

ಧ್ವಜಾರೋಹಣ ಬಳಿಕ 500 ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಮೈದಾನದಲ್ಲಿ ವಂದೇ ಮಾತಂ, ಭಾರತ್ ಮಾತಾ ಕೀ ಜೈ ಘೋಷಣೆಗೆ ಮಾತ್ರ ಅವಕಾಶವಿದೆ. ಸ್ವಾತಂತ್ರ್ಯ ದಿನಾಚರಣೆ ಮುಗಿಯುವರಿಗೆ ಮೈದಾನದ ಸುತ್ತ ಮುತ್ತ ಖಾಕಿ ಹದ್ದಿನ ಕಣ್ಣೀಡಲಿದೆ. ಸಂಜೆ ಗೌರವಯುತವಾಗಿ ಪೊಲೀಸರು ಧ್ವಜ ಇಳಿಸಲಿದ್ದು, ಚಾಮರಾಜಪೇಟೆ ಮೈದಾನಕ್ಕೆ ಬ್ಯಾರಿಗೇಡ್​ಗಳಿಂದ ಭದ್ರತೆ ನೀಡಲಾಗಿದೆ. ಒಟ್ಟು 3 ಪ್ರವೇಶ ದ್ವಾರ ಮೂಲಕ ಎಂಟ್ರಿಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ಸಾರ್ವಜನಿಕರಿಗೆ, ಮತ್ತೊಂದು VIP, VVIP ಗಳಿಗೆ ಎಂಟ್ರಿ ಇರಲಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ‌ ಬಾರಿಗೆ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿದ್ದು, ಮೈದಾನ ಸುತ್ತಲೂ ಪೊಲೀಸ್ ಸರ್ಪಗಾವಲು. ಶಸ್ತ್ರಾಸ್ತ್ರಗಳೊಂದಿಗೆ ಪೊಲೀಸರು ಸಜ್ಜಾಗಿ ನಿಂತ್ತಿದ್ದಾರೆ.

ಸಂಪೂರ್ಣ ಮೈದಾನ ಸುತ್ತುವರೆದ RAF ಟೀಮ್

ಮೈದಾನ ಸಂಪೂರ್ಣ RAF ಟೀಮ್ ಸುತ್ತುವರೆದಿದ್ದು, ಅಹಿತಕರ ಘಟನೆ ನಡೆಯದಮನತೆ ಮೈದಾನದ ಮೇಲೆ ಖಾಕಿ ಕಣ್ಗಾವಲು ವಹಿಸಿದೆ. 250 ರಿಂದ 300 ಮಂದಿ RAF ಟೀಮ್​ನಿಂದ ಭದ್ರತೆ ಒದಗಿಸಿದ್ದು, ಸಂಪೂರ್ಣ ಶಸ್ತ್ರ ಸಜ್ಜಿತವಾಗಿ ಮೈದಾನಕ್ಕೆ ಇಳಿಯಲಾಗಿದೆ. ಒಟ್ಟು 10 ಕೆಎಸ್ ಆರ್ ಪಿ, SWAT ಸ್ಪೆಷಲ್ ಫೋರ್ಸ್ 104 ಕ್ಕೂ ಹೆಚ್ಚು ಮಂದಿ, ವಜ್ರ 2 ಟೀಮ್ ಡಿಆರ್ ಡಿ ಒ ಟೀಮ್​ಗಳಿಂದ ಭದ್ರತೆ ನೀಡಲಾಗಿದೆ.

ಸಾರ್ವಜನಿಕರಿಗೆ ಗೋಡೆ ಅಕ್ಕಪಕ್ಕ ಓಡಾಟಕ್ಕೆ ನಿಷೇಧ

ಮೈದಾನದಲ್ಲಿ ಸಣ್ಣದೊಂದು ವೇದಿಕೆ ನಿರ್ಮಾಣ ಮಾಡಿದ್ದು, ವೇದಿಕೆ ಮೇಲೆ ಕೇವಲ ಮೂರು ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಧ್ವಜಾರೋಹಣ ಮಾಡುವ ಎಸಿ ಶಿವಣ್ಣ, ಹಾಗೂ ಸ್ಥಳೀಯ ಶಾಸಕರು ಹಾಗೂ ಸಂಸದರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಈದ್ಗಾ ಗೋಡೆಯ ತದ್ವಿರುದ್ಧವಾಗಿ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿದ್ದು, ಮಾಧ್ಯಮದವರ ಪ್ರದೇಶದ್ವಾರ, ಸಾರ್ವಜನಿಕಕರಿಗೆ ಪ್ರದೇಶ ದ್ವಾರ, ಹಾಗೂ ವಿವಿಐಪಿಗಳಿಗೆ ಪ್ರತ್ಯೇಕ ಪ್ರವೇಶದ್ವಾರವಿರಲಿದೆ. ಈದ್ಗಾ ಗೋಡೆಯ ಸುತ್ತಲೂ ಪೊಲೀಸ್ ಸರ್ಪಗಾವಲು ವಹಿಸಿದ್ದು, ಸಾರ್ವಜನಿಕರಿಗೆ ಗೋಡೆ ಅಕ್ಕಪಕ್ಕ ಓಡಾಟ ನಿಷೇಧಿಸಲಾಗಿದೆ.

Published On - 7:48 am, Mon, 15 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್