AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.17 ಇಂಡಿಯಾ-ಅಫ್ಘಾನಿಸ್ತಾನ ಟಿ20 ಮ್ಯಾಚ್​​: ಬಿಎಂಟಿಸಿಯಿಂದ ಹೆಚ್ಚುವರಿ ಬಸ್​​

ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯಾ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದೆ. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

ಜ.17 ಇಂಡಿಯಾ-ಅಫ್ಘಾನಿಸ್ತಾನ ಟಿ20 ಮ್ಯಾಚ್​​: ಬಿಎಂಟಿಸಿಯಿಂದ ಹೆಚ್ಚುವರಿ ಬಸ್​​
ಬಿಎಂಟಿಸಿ
Kiran Surya
| Edited By: |

Updated on: Jan 13, 2024 | 7:25 AM

Share

ಬೆಂಗಳೂರು, ಜನವರಿ 13: ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ (BMTC) ಗುಡ್ ನ್ಯೂಸ್ ನೀಡಿದೆ. ಜನವರಿ 17 ರಂದು ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy stadium) ಇಂಡಿಯಾ ಹಾಗೂ ಅಫ್ಘಾನಿಸ್ತಾನ ಟಿ20 (IND-AFG T20) ಹೊನಲು ಬೆಳಕಿನ ಪಂದ್ಯ ನಡೆಯಲಿದೆ. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್​​​ ಕಾರ್ಯಾಚರಣೆ ನಡೆಸಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​,​ ಕೆಂಗೇರಿ, ನೆಲಮಂಗಲ, ಯಲಹಂಕ 5ನೇ ಹಂತ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.

ಮಾರ್ಗಸಂಖ್ಯೆ ಎಸ್‍ಬಿಎಸ್ -1ಕೆ ಬಸ್ ಎಚ್‍ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್‍ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ.

ಇದನ್ನೂ ಓದಿ: IND vs AFG T20I: ಭಾರತ-ಅಫ್ಘಾನಿಸ್ತಾನ ಎರಡನೇ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಎಲ್ಲ ಮಾಹಿತಿ

ಜಿ-6 ಬಸ್ ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್‍ಬಿ ಕ್ವಾಟ್ರಸ್ ತಲುಪಿದರೆ ಜಿ-7 ಬಸ್ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‍ಶಿಪ್ ಹಾಗೂ ಜಿ-8 ಬಸ್ ಯಶವಂತಪುರ ಮಾರ್ಗವಾಗಿ ನೆಲಮಂಗಲ ಸಂಚರಿಸಲಿದೆ. ಜಿ-9 ಬಸ್ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ಜಿ-10ರ ಬಸ್ ನಾಗವಾರ, ಟಾನರಿ ರಸ್ತೆ ಮೂಲಕ ಹೆಗಡೆನಗರ, ಯಲಹಂಕ ತಲುಪಲಿದೆ.

ಜಿ-11ರ ಬಸ್ ಹೆಣ್ಣೂರು ರಸ್ತೆ ಮೂಲಕ ಬಾಗಲೂರುವರೆಗೆ ಸಂಚರಿಸಲಿದ್ದು, ಕೆಎಚ್‍ಬಿ-12 ಎಚ್‍ಕೆ ಬಸ್ ಟಿನ್ ಫ್ಯಾಕ್ಟ್ರಿ ಮೂಲಕ ಹೊಸಕೋಟೆವರೆಗೂ ಸಂಚರಿಸಲಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?