Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​

Monsoon 2026: ಮುಂದಿನ 3 ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಗಂಟೆಗೆ 40-50 ಕಿಮೀ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಂಗಾಳ ಕೊಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಕ್ಕಾಲು ಕರ್ನಾಟಕಕ್ಕೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​
ಮಳೆ

Updated on: May 15, 2026 | 5:54 PM

ಬೆಂಗಳೂರು, ಮೇ 15: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. IMD ಪ್ರಕಾರ, ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ 17ರವರೆಗೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮಿಂಚು ಹಾಗೂ ಬಿರುಗಾಳಿಯಿಂದ ಕೆಲ ಪ್ರದೇಶಗಳಲ್ಲಿ ಅಪಾಯದ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಸಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ
  • ಗುಡುಗು-ಮಿಂಚು ಮತ್ತು ಗಾಳಿ ಸಹಿತ ವರುಣನ ಅಬ್ಬರದ ನಿರೀಕ್ಷೆ
  • ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ ಘೋಷಿಸಿದ ಇಲಾಖೆ

ವಾಯುಭಾರ ಕುಸಿತದ ಎಫೆಕ್ಟ್​​

ಮೇ 18ರಂದು ಗಾಳಿಯ ವೇಗ ಸ್ವಲ್ಪ ಕಡಿಮೆಯಾಗಬಹುದಾದರೂ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ. ಉತ್ತರ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಒಳನಾಡು ಕರ್ನಾಟಕದಲ್ಲೂ ಈ ಅವಧಿಯಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪ್ರಭಾವದ ಪರಿಣಾಮ ಭಾರಿ ಮಳೆಯನ್ನು ಅಂದಾಜಿಸಲಾಗಿದೆ. ರಾಜ್ಯದ ಶೇ.50ಕ್ಕಿಂತ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನ ಸಮೇತ ವರುಣ ಅಬ್ಬರಿಸಲಿದ್ದಾನೆ. ಹೀಗಾಗಿ ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್​​. ಪಾಟೀಲ್​​ ತಿಳಿಸಿದ್ದಾರೆ.

ಇದನ್ನೂ ಓದಿ: ವಾಯುಭಾರ ಕುಸಿತ; ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​​?

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us