ವಿಶ್ವಕಪ್​ ಫೈನಲ್ ಪಂದ್ಯ; ಮ್ಯಾಚ್ ವೀಕ್ಷಣೆಗೆ ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಲ್ಲಿ ವ್ಯವಸ್ಥೆ

ಮ್ಯಾಚ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸಜ್ಜಾಗಿದೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗಾಗಿ ಪಬ್​ಗಳಲ್ಲಿ ಎಲ್​ಇಡಿ ಟಿವಿಗಳ ಅಳವಡಿಕೆ ಮಾಡಲಾಗಿದ್ದು, ನಗರದ ಪಬ್​ಗಳಲ್ಲಿ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರಮಂಗಲದ ಟಿಪ್ಸಿ ಬುಲ್ ಪಬ್​ನಲ್ಲಿ ವಿಶೇಷವಾಗಿ 50 ಅಡಿ ತ್ರಿವರ್ಣ ಧ್ವಜ ಹಾಕಿ ವೆಲಕಮ್ ಮಾಡಲು ಪ್ಲ್ಯಾನ್ ಮಾಡಲಾಗಿದೆ.

ವಿಶ್ವಕಪ್​ ಫೈನಲ್ ಪಂದ್ಯ; ಮ್ಯಾಚ್ ವೀಕ್ಷಣೆಗೆ ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಲ್ಲಿ ವ್ಯವಸ್ಥೆ
ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ವಿಶ್ವಕಪ್ ಪಂದ್ಯ ವೀಕ್ಷಣೆಗೆ ವ್ಯವಸ್ಥೆ
Follow us
| Edited By: Kiran Hanumant Madar

Updated on:Nov 18, 2023 | 10:17 PM

ಬೆಂಗಳೂರು, ನ.18: ಭಾರತ ಮತ್ತು ಆಸ್ಟ್ರೇಲಿಯಾ ಹೈ ಓಲ್ಟೇಜ್ ಫೈನಲ್ ಪಂದ್ಯ ನಾಳೆ(ನ.19)ಅಹಮದಾಬಾದ್(Ahmedabad)ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಶ್ವಕಪ್(World Cup)​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಒಂದು ಸೋಲು ಕಾಣದೆ ಭಾರತ ಫೈನಲ್ ಪ್ರವೇಶಿಸಿದೆ. ಈ ಹಿನ್ನಲೆಯಲ್ಲಿ ಮ್ಯಾಚ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸಜ್ಜಾಗಿದೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗಾಗಿ ಪಬ್​ಗಳಲ್ಲಿ ಎಲ್​ಇಡಿ ಟಿವಿಗಳ ಅಳವಡಿಕೆ ಮಾಡಲಾಗಿದ್ದು, ನಗರದ ಪಬ್​ಗಳಲ್ಲಿ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರಮಂಗಲದ ಟಿಪ್ಸಿ ಬುಲ್ ಪಬ್​ನಲ್ಲಿ ವಿಶೇಷವಾಗಿ 50 ಅಡಿ ತ್ರಿವರ್ಣ ಧ್ವಜ ಹಾಕಿ ವೆಲಕಮ್ ಮಾಡಲು ಪ್ಲ್ಯಾನ್ ಮಾಡಿದ್ದು, ನಾಳೆ 2 ಗಂಟೆಯಿಂದ ಪಂದ್ಯ ಮುಗಿಯುವವರೆಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡಲಾಗಿದೆ.

ಎಲ್ಲೆಲ್ಲಿ ಪಂದ್ಯ ವೀಕ್ಷಿಸಲು ವ್ಯವಸ್ಥೆ

ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ಈಗಾಗಲೇ ಈ ಕೆಳಕಂಡ ಜಿಲ್ಲೆಗಳಲ್ಲಿ ಎಲ್​ಇಡಿ ಸ್ಕ್ರೀನ್ ಅಳವಡಿಸಲಾಗಿದೆ.

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನೇರ ಪ್ರಸಾರ

ತುಮಕೂರು: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನೇರ ಪ್ರಸಾರ ಮಾಡಿಕೊಳ್ಳಲಾಗಿದೆ. ತುಮಕೂರು ಜಿಲ್ಲಾಡಳಿತ ವತಿಯಿಂದ ಬೃಹತ್ ಪರದೇ ಮೇಲೆ ಕ್ರಿಕೆಟ್ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಲಿರುವ ಕ್ರಿಕೆಟ್ ಪಂದ್ಯಕ್ಕೆ ಜಿಲ್ಲಾಡಳಿತವೇ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:ಹಿಂದಿ ಬಿಗ್​ಬಾಸ್​ನಲ್ಲಿ ಕ್ರಿಕೆಟ್ ಮೇನಿಯಾ, ಕನ್ನಡ ಬಿಗ್​ಬಾಸ್ ಸ್ಪರ್ಧಿಗಳಿಗೆ ವಿಶ್ವಕಪ್ ಫೈನಲ್ ನೋಡೊ ಭಾಗ್ಯ ಇಲ್ಲವಾ?

ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರ

ರಾಮನಗರ: ರಾಮನಗರ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ. ಬೃಹತ್ ಎಲ್​ಇಇಡಿ ಅಳವಡಿಸಿ ನೇರಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಉಚಿತ ವ್ಯವಸ್ಥೆ ಆಗಿದೆ. ಇನ್ನು ಪೊಲೀಸ್ ಭದ್ರತೆಯಲ್ಲಿ ಪಂದ್ಯಾವಳಿ ವೀಕ್ಷಣೆ ನಡೆಯಲಿದೆ.

ಭಾರತ ತಂಡಕ್ಕೆ ಶುಭ ಕೋರಿದ ಕ್ರೀಡಾ ಸಚಿವ ಬಿ. ನಾಗೇಂದ್ರ

ಬಳ್ಳಾರಿ: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಮ್ಯಾಚ್ ಹಿನ್ನಲೆ ಭಾರತ ತಂಡಕ್ಕೆ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಶುಭ ಕೋರಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿ. ಭಾರತದ ಕೀರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆ ಬರೆಯಲಿ. ರಾಜ್ಯದ ಕ್ರೀಡ ಸಚಿವನಾಗಿ ಶುಭ ಹಾರೈಸುವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sat, 18 November 23

ತಾಜಾ ಸುದ್ದಿ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು