
ಬೆಂಗಳೂರು, ನ.18: ಭಾರತ ಮತ್ತು ಆಸ್ಟ್ರೇಲಿಯಾ ಹೈ ಓಲ್ಟೇಜ್ ಫೈನಲ್ ಪಂದ್ಯ ನಾಳೆ(ನ.19)ಅಹಮದಾಬಾದ್(Ahmedabad)ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಶ್ವಕಪ್(World Cup)ನ ಲೀಗ್ ಪಂದ್ಯಗಳಲ್ಲಿ ಯಾವುದೇ ಒಂದು ಸೋಲು ಕಾಣದೆ ಭಾರತ ಫೈನಲ್ ಪ್ರವೇಶಿಸಿದೆ. ಈ ಹಿನ್ನಲೆಯಲ್ಲಿ ಮ್ಯಾಚ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸಜ್ಜಾಗಿದೆ. ಅದರಲ್ಲೂ ವೀಕೆಂಡ್ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗಾಗಿ ಪಬ್ಗಳಲ್ಲಿ ಎಲ್ಇಡಿ ಟಿವಿಗಳ ಅಳವಡಿಕೆ ಮಾಡಲಾಗಿದ್ದು, ನಗರದ ಪಬ್ಗಳಲ್ಲಿ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರಮಂಗಲದ ಟಿಪ್ಸಿ ಬುಲ್ ಪಬ್ನಲ್ಲಿ ವಿಶೇಷವಾಗಿ 50 ಅಡಿ ತ್ರಿವರ್ಣ ಧ್ವಜ ಹಾಕಿ ವೆಲಕಮ್ ಮಾಡಲು ಪ್ಲ್ಯಾನ್ ಮಾಡಿದ್ದು, ನಾಳೆ 2 ಗಂಟೆಯಿಂದ ಪಂದ್ಯ ಮುಗಿಯುವವರೆಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡಲಾಗಿದೆ.
ವಿಶ್ವಕಪ್ ಫೈನಲ್ ಪಂದ್ಯದ ನೇರಪ್ರಸಾರ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ಈಗಾಗಲೇ ಈ ಕೆಳಕಂಡ ಜಿಲ್ಲೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸಲಾಗಿದೆ.
ತುಮಕೂರು: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನೇರ ಪ್ರಸಾರ ಮಾಡಿಕೊಳ್ಳಲಾಗಿದೆ. ತುಮಕೂರು ಜಿಲ್ಲಾಡಳಿತ ವತಿಯಿಂದ ಬೃಹತ್ ಪರದೇ ಮೇಲೆ ಕ್ರಿಕೆಟ್ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಲಿರುವ ಕ್ರಿಕೆಟ್ ಪಂದ್ಯಕ್ಕೆ ಜಿಲ್ಲಾಡಳಿತವೇ ವ್ಯವಸ್ಥೆ ಮಾಡಿದೆ.
ರಾಮನಗರ: ರಾಮನಗರ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ. ಬೃಹತ್ ಎಲ್ಇಇಡಿ ಅಳವಡಿಸಿ ನೇರಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಉಚಿತ ವ್ಯವಸ್ಥೆ ಆಗಿದೆ. ಇನ್ನು ಪೊಲೀಸ್ ಭದ್ರತೆಯಲ್ಲಿ ಪಂದ್ಯಾವಳಿ ವೀಕ್ಷಣೆ ನಡೆಯಲಿದೆ.
ಬಳ್ಳಾರಿ: ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಮ್ಯಾಚ್ ಹಿನ್ನಲೆ ಭಾರತ ತಂಡಕ್ಕೆ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಶುಭ ಕೋರಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿ. ಭಾರತದ ಕೀರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆ ಬರೆಯಲಿ. ರಾಜ್ಯದ ಕ್ರೀಡ ಸಚಿವನಾಗಿ ಶುಭ ಹಾರೈಸುವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:25 pm, Sat, 18 November 23