AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು

ಬುಧವಾರ (ಅ.16) ದಿಂದ ರವಿವಾರ (ಅ.20)ರವರೆಗು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್​ ನಡುವೆ ಟೆಸ್ಟ್​ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ.

ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ಮಾರ್ಪಾಡು
ಭಾರತ-ನ್ಯೂಜಿಲೆಂಡ್ ಟೆಸ್ಟ್​ ಪಂದ್ಯ
Follow us
ವಿವೇಕ ಬಿರಾದಾರ
|

Updated on: Oct 15, 2024 | 7:24 AM

ಬೆಂಗಳೂರು, ಅಕ್ಟೋಬರ್​ 15: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಬುಧವಾರ (ಅ.16) ರಿಂದ ರವಿವಾರ (ಅ.20)ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ (India vs New Zealand Test Cricket) ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಐದೂ ದಿನವು ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ವಾಹನಗಳ ನಿಲುಗಡೆ ನಿಷೇಧ

  • ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ. ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ.
  • ಕಸ್ತೂರ್ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
  • ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.

ವಾಹನಗಳ ನಿಲುಗಡೆ ಸ್ಥಳಗಳು

  • ಯು.ಬಿ ಸಿಟಿ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.
  • ಕಿಂಗ್ಸ್ ರಸ್ತೆ, (ಕಬ್ಬನ್‌ ಪಾರ್ಕ್ ಒಳಭಾಗ) ವಾಹನ ನಿಲ್ಲಿಸಬಹುದು.
  • ಕಬ್ಬನ್ ರಸ್ತೆಯಲ್ಲಿ: ಬಿ.ಆರ್.ವಿ ಜಂಕ್ಷನ್ ನಿಂದ ಸಿ.ಟಿ.ಓ ಸರ್ಕಲ್​ವರೆಗೆ ಕ್ಯಾಬ್/ಆಟೋರಿಕ್ಷಾಗಳು ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ