AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಾಯುಪಡೆಯ ಕೆಡಿಟ್ ಟ್ರೈನಿ ಸಾವಿನ ಬಗ್ಗೆ ಆಂತರಿಕ ವಿಚಾರಣೆಗೆ ಆದೇಶ

ಸೆಪ್ಟೆಂಬರ್ 21 ರಂದು ಬೆಂಗಳೂರಿನ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಅಂಡರ್ ಟ್ರೈನಿ ಫ್ಲೈಯಿಂಗ್ ಆಫೀಸರ್ ಅಂಕಿತ್ ಕುಮಾರ್ ಝಾ ಸಾವಿನ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಿವೆ. ಮೃತ ಯುಟಿಎಫ್‌ಒ ಕಳೆದ ವರ್ಷ ಫೆಬ್ರವರಿಯಲ್ಲಿ...

ಬೆಂಗಳೂರಿನಲ್ಲಿ ವಾಯುಪಡೆಯ ಕೆಡಿಟ್ ಟ್ರೈನಿ ಸಾವಿನ ಬಗ್ಗೆ ಆಂತರಿಕ ವಿಚಾರಣೆಗೆ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 26, 2022 | 2:29 PM

Share

ಬೆಂಗಳೂರಿನಲ್ಲಿ ಟ್ರೈನಿ ಫ್ಲೈಯಿಂಗ್ ಆಫೀಸರ್ ಸಾವಿನ ಕುರಿತು ಆಂತರಿಕ ತನಿಖೆಗೆ ಆದೇಶಿಸಿರುವುದಾಗಿ ಭಾರತೀಯ ವಾಯುಪಡೆ (IAF) ಭಾನುವಾರ ತಿಳಿಸಿದೆ. ಈ ಪ್ರಕರಣದಲ್ಲಿ ಆರು ಐಎಎಫ್ ಅಧಿಕಾರಿಗಳ ಮೇಲೆ ಪೊಲೀಸರು ಕೊಲೆ ಆರೋಪ ಹೊರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಂಕಿತ್ ಕುಮಾರ್ ಝಾ ಎಂಬ ಟ್ರೈನಿಯ ಮೃತದೇಹ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (ಎಎಫ್‌ಟಿಸಿ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಝಾ ಅವರ ಸಹೋದರನ ದೂರಿನ ಮೇರೆಗೆ ಐಎಎಫ್ ಅಧಿಕಾರಿಗಳ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸೆಪ್ಟೆಂಬರ್ 21 ರಂದು ಬೆಂಗಳೂರಿನ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (AFTC) ಅಂಡರ್ ಟ್ರೈನಿ ಫ್ಲೈಯಿಂಗ್ ಆಫೀಸರ್ (UTFO) ಅಂಕಿತ್ ಕುಮಾರ್ ಝಾ ಸಾವಿನ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಿವೆ. ಮೃತ ಯುಟಿಎಫ್‌ಒ ಕಳೆದ ವರ್ಷ ಫೆಬ್ರವರಿಯಲ್ಲಿ ಐಎಎಫ್‌ಗೆ ಸೇರಿದ್ದರು ಮತ್ತು ಎಎಫ್‌ಟಿಸಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಅವರ ತಂದೆಗೆ ತಿಳಿಸಿದ ನಂತರ ಸೆಪ್ಟೆಂಬರ್ 20 ರಂದು ಅವರ ತರಬೇತಿಯನ್ನು ಕೊನೆಗೊಳಿಸಲಾಯಿತು” ಎಂದು ಐಎಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 30 ರಂದು ಯುಟಿಎಫ್‌ಒ ವಿರುದ್ಧ ಸಹ ಮಹಿಳಾ ಟ್ರೈನಿ ಅಧಿಕಾರಿಯ ದೂರಿನ ನಂತರ ಸ್ಥಾಪಿಸಲಾದ ಆಂತರಿಕ ವಿಚಾರಣೆ (COI) ಮಾಡಿದ ಶಿಫಾರಸುಗಳ ಪರಿಣಾಮವಾಗಿ ತರಬೇತಿಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಐಎಎಫ್ ತಿಳಿಸಿದೆ.

ಯುಟಿಎಫ್‌ಒ ಕೆಲವು ದುರ್ನಡತೆಯ ಕೃತ್ಯಗಳನ್ನು ಮಾಡಿರುವುದು ಎಂದು ದೃಢಪಟ್ಟಿದೆ. ಈ ವಿಷಯದ ಬಗ್ಗೆ ಸ್ಥಾಪಿತ ಕಾರ್ಯವಿಧಾನದ ಪ್ರಕಾರ, ವಾಯುಪಡೆಯ ಪ್ರಧಾನ ಕಚೇರಿಯಲ್ಲಿ ಅನುಮೋದಿಸುವ ಮೊದಲು ವಿಚಾರಣೆಯ ಪ್ರಕ್ರಿಯೆಗಳನ್ನು ಅನೇಕ ಹಂತಗಳಲ್ಲಿ ಸರಿಯಾಗಿ ಪರಿಶೀಲಿಸಲಾಗಿದೆ  ಎಂದು ವಾಯುಪಡೆ ಹೇಳಿದೆ.

ಅಸ್ತಿತ್ವದಲ್ಲಿರುವ ನಿಯಮ ಪ್ರಕಾರ, ಅಂಕಿತ್ ಝಾ ಅವರ ಪೋಷಕರಿಗೆ ಈ ದುರದೃಷ್ಟಕರ ಘಟನೆಯ ಸುದ್ದಿಯನ್ನು ನವದೆಹಲಿಯಲ್ಲಿ ತಿಳಿಸಲು ಐಎಎಫ್ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಸೆಪ್ಟೆಂಬರ್ 23ರಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಯುಟಿಎಫ್‌ಒ ನ ಸಾವಿಗೆ ಕಾರಣ ಬಗ್ಗೆ ವಾಯುಪಡೆಯಿಂದ ಆಂತರಿಕ ವಿಚಾರಣೆ ನಡೆಯುತ್ತಿದೆ ಎಂದು ಅದು ಹೇಳಿದೆ. ಸೆಪ್ಟೆಂಬರ್ 24 ರಂದು, ಅವರ ಸಂಬಂಧಿಕರು ಎಎಫ್‌ಟಿಸಿ ಗೆ ಭೇಟಿ ನೀಡಿದರು. ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ಭಾರತೀಯ ವಾಯುಪಡೆಯು ದುರದೃಷ್ಟಕರ ಜೀವಹಾನಿಗೆ ಸಂತಾಪ ವ್ಯಕ್ತಪಡಿಸುತ್ತದೆ. ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸುತ್ತದೆ. ಈ ಬಗ್ಗೆ ಪೊಲೀಸರು ನಡೆಸುತ್ತಿರುವ ತನಿಖೆಗೆ ಐಎಎಫ್ ಸಹಕಾರ ನೀಡುತ್ತಿದೆ.

ಆತನ ಸಹೋದರ ಅಮನ್ ಝಾ ಅವರ ದೂರಿನ ಆಧಾರದ ಮೇಲೆ ಅಂಕಿತ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಆರು ಐಎಎಫ್ ಅಧಿಕಾರಿಗಳ ವಿರುದ್ಧ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

Published On - 2:13 pm, Mon, 26 September 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್