AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!

ಬೆಂಗಳೂರಿನಲ್ಲಿ ರೈಲು ಬರುವ ವೇಳೆ ಟ್ರಾಫಿಕ್ ಜಾಮ್ ಉಂಟಾದ ವಿಚಾರವಾಗಿ ವಿಡಿಯೋ ವೈರಲ್ ಆಗಿರುವ ಬಗ್ಗೆ ಪೊಲೀಸರು ಮತ್ತು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಹಾಗಾದರೆ, ನಿಜಕ್ಕೂ ಅಲ್ಲಿ ನಡೆದಿದ್ದೇನು? ರೈಲಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದ್ದು ನಿಜವಾ? ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!
ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!
ಗಣಪತಿ ಶರ್ಮಾ
|

Updated on: Sep 26, 2024 | 12:52 PM

Share

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನ ಮುನೇನಕೊಳಲು ರೈಲ್ವೆ ಕ್ರಾಸಿಂಗ್ ಬಳಿ ರೈಲಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಸಂಚಾರ ದಟ್ಟಣೆಯ ಪರಿಣಾಮ ರೈಲು ಪ್ರಯಾಣದ ಮೇಲೂ ಬೀರಿದೆ ಎಂಬ ಸುದ್ದಿಗಳ ಜತೆಗೆ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಸದ್ದು ಮಾಡಿತ್ತು. ಈ ಬಗ್ಗೆ ಇದೀಗ ರೈಲ್ವೆ ಇಲಾಖೆ ಮತ್ತು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ನಿಜಕ್ಕೂ ನಡೆದಿದ್ದೇನು? ಪೊಲೀಸರು, ರೈಲ್ವೆ ಇಲಾಖೆ ಹೇಳಿದ್ದೇನು?

ರೈಲ್ವೆ ಇಲಾಖೆ ಮತ್ತು ಪೊಲೀಸರು ಹೇಳಿರುವ ಪ್ರಕಾರ, ಸಂಚಾರ ದಟ್ಟಣೆಯಿಂದ ರೈಲು ನಿಂತಿದೆ ಎಂಬುದು ಸುಳ್ಳು ಸುದ್ದಿಯಾಗಿದೆ. ರೇಕ್ ಪರಿಶೀಲನೆಗಾಗಿ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದರು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೊಂದರೆ ಆಗಬಾರದೆಂದು ರೈಲ್ವೆ ಗೇಟ್ ಓಪನ್ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಅದರ ಬದಲಾಗಿ, ಟ್ರಾಫಿಕ್ ಜಾಮ್​ನಿಂದಾಗಿ ರೈಲು ನಿಂತಿರುವುದಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ವೈರಲ್ ಆಗಿತ್ತು ವಿಡಿಯೋ

‘ನಾನು ಅಥವಾ ನೀವು ಮಾತ್ರವಲ್ಲ, ಬೆಂಗಳೂರು ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ರೈಲುಗಳಿಗೂ ಸಾಧ್ಯವಾಗುತ್ತಿಲ್ಲ’ ಎಂಬ ಶೀರ್ಷಿಕೆಯೊಂದಿಗೆ ರೈಲ್ವೆ ಕ್ರಾಸಿಂಗ್ ಬಳಿ ಸಂಚಾರ ದಟ್ಟಣ ಇರುವ ಮತ್ತು ರೈಲು ನಿಂತಿರುವ ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮ ಇನ್​​ಸ್ಟಾಗ್ರಾಂನಲ್ಲಿ ಸುಧೀರ್‌ ಚಕ್ರವರ್ತಿ (sudhirchakravarthi4142) ಎಂಬ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ

ವೈರಲ್‌ ಆದ ಈ ವಿಡಿಯೋದಲ್ಲಿ ಕಾಣಿಸಿದ್ದು, ಮಾರತಹಳ್ಳಿ ಸಮೀಪದ ಮುನೇನಕೊಳಲು ರೈಲ್ವೆ ಕ್ರಾಸಿಂಗ್‌ ಬಳಿಯ ವಿಡಿಯೋ ಆಗಿತ್ತು. ಮೇಲ್ನೋಟಕ್ಕೆ ರೈಲ್ವೆ ಕ್ರಾಸಿಂಗ್​ನಲ್ಲಿ ಸಂಚಾರ ದಟ್ಟಣೆಯ ಕಾರಣ ರೈಲು ನಿಂತಿರುವಂತೆ ಕಾಣಿಸುತ್ತಿರುದು ನಿಜ. ಆದರೆ, ಅಸಲಿ ಸತ್ಯ ಈಗ ಬಯಲಾಗಿದೆ.

ವರದಿ: ಪ್ರದೀಪ್ ‘ಟಿವಿ9’

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!
ಗದಗದಲ್ಲಿ 5 ದಿನಗಳಿಂದ ಬಂದ್ ಆಗಿದ್ದ ಸರ್ಕಾರಿ ಶಾಲೆ ಓಪನ್!
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ? ಸಿಎಂ ಡಿಕೆಶಿ ಏನಂದ್ರು?
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ? ಸಿಎಂ ಡಿಕೆಶಿ ಏನಂದ್ರು?
ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಬಂಡೀಪುರ ಅರಣ್ಯ ಸಿಬ್ಬಂದಿ ಬಲೆಗೆ
ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಬಂಡೀಪುರ ಅರಣ್ಯ ಸಿಬ್ಬಂದಿ ಬಲೆಗೆ
ಮೈಸೂರು ದಸರಾ 2026: ಗಜಪಡೆಗೆ ಸಚಿವ ಯತೀಂದ್ರರಿಂದ ಚಾಲನೆ
ಮೈಸೂರು ದಸರಾ 2026: ಗಜಪಡೆಗೆ ಸಚಿವ ಯತೀಂದ್ರರಿಂದ ಚಾಲನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಬಿಡದಿ ಟೌನ್​ಶಿಪ್, ಹೈಕೋರ್ಟ್​ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ
ಬಿಡದಿ ಟೌನ್​ಶಿಪ್, ಹೈಕೋರ್ಟ್​ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ
ಟಾಕ್ಸಿಕ್ ಸಿನಿಮಾ ಬಿಡುಗಡೆ; ರಾವಣ ವೇಷ ತೊಟ್ಟು ಥಿಯೇಟರ್​​ಗೆ ಬಂದ ಅಭಿಮಾನಿ
ಟಾಕ್ಸಿಕ್ ಸಿನಿಮಾ ಬಿಡುಗಡೆ; ರಾವಣ ವೇಷ ತೊಟ್ಟು ಥಿಯೇಟರ್​​ಗೆ ಬಂದ ಅಭಿಮಾನಿ
'ಟಾಕ್ಸಿಕ್' ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್
'ಟಾಕ್ಸಿಕ್' ಟ್ರೋಲ್ ಮಾಡುತ್ತಿದ್ದವರಿಗೆ ರಾಕಿ ಭಾಯ್ ಅಭಿಮಾನಿಗಳ ಟಾಂಗ್
‘ಟಾಕ್ಸಿಕ್ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ’
‘ಟಾಕ್ಸಿಕ್ 2 ಸಾವಿರ ಕೋಟಿ ಕಲೆಕ್ಷನ್ ಮಾಡದಿದ್ದರೆ ಮೀಸೆ ಬೋಳಿಸಿಕೊಳ್ಳುವೆ’
ಯಶ್‌ಗೆ ವಿಶೇಷ ಸರ್ಪ್ರೈಸ್ ನೀಡಿದ ಮಂಗಳೂರಿನ ಅಭಿಮಾನಿ
ಯಶ್‌ಗೆ ವಿಶೇಷ ಸರ್ಪ್ರೈಸ್ ನೀಡಿದ ಮಂಗಳೂರಿನ ಅಭಿಮಾನಿ