AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!

ಬೆಂಗಳೂರಿನಲ್ಲಿ ರೈಲು ಬರುವ ವೇಳೆ ಟ್ರಾಫಿಕ್ ಜಾಮ್ ಉಂಟಾದ ವಿಚಾರವಾಗಿ ವಿಡಿಯೋ ವೈರಲ್ ಆಗಿರುವ ಬಗ್ಗೆ ಪೊಲೀಸರು ಮತ್ತು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಹಾಗಾದರೆ, ನಿಜಕ್ಕೂ ಅಲ್ಲಿ ನಡೆದಿದ್ದೇನು? ರೈಲಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದ್ದು ನಿಜವಾ? ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!
ಬೆಂಗಳೂರು ಟ್ರಾಫಿಕ್ ಜಾಮ್ ಬಿಸಿ ರೈಲಿಗೂ ತಟ್ಟಿತಾ? ಪೊಲೀಸರು ಹೇಳುವುದೇ ಬೇರೆ!
ಗಣಪತಿ ಶರ್ಮಾ
|

Updated on: Sep 26, 2024 | 12:52 PM

Share

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನ ಮುನೇನಕೊಳಲು ರೈಲ್ವೆ ಕ್ರಾಸಿಂಗ್ ಬಳಿ ರೈಲಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಸಂಚಾರ ದಟ್ಟಣೆಯ ಪರಿಣಾಮ ರೈಲು ಪ್ರಯಾಣದ ಮೇಲೂ ಬೀರಿದೆ ಎಂಬ ಸುದ್ದಿಗಳ ಜತೆಗೆ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಸದ್ದು ಮಾಡಿತ್ತು. ಈ ಬಗ್ಗೆ ಇದೀಗ ರೈಲ್ವೆ ಇಲಾಖೆ ಮತ್ತು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ನಿಜಕ್ಕೂ ನಡೆದಿದ್ದೇನು? ಪೊಲೀಸರು, ರೈಲ್ವೆ ಇಲಾಖೆ ಹೇಳಿದ್ದೇನು?

ರೈಲ್ವೆ ಇಲಾಖೆ ಮತ್ತು ಪೊಲೀಸರು ಹೇಳಿರುವ ಪ್ರಕಾರ, ಸಂಚಾರ ದಟ್ಟಣೆಯಿಂದ ರೈಲು ನಿಂತಿದೆ ಎಂಬುದು ಸುಳ್ಳು ಸುದ್ದಿಯಾಗಿದೆ. ರೇಕ್ ಪರಿಶೀಲನೆಗಾಗಿ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದರು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೊಂದರೆ ಆಗಬಾರದೆಂದು ರೈಲ್ವೆ ಗೇಟ್ ಓಪನ್ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಅದರ ಬದಲಾಗಿ, ಟ್ರಾಫಿಕ್ ಜಾಮ್​ನಿಂದಾಗಿ ರೈಲು ನಿಂತಿರುವುದಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ವೈರಲ್ ಆಗಿತ್ತು ವಿಡಿಯೋ

‘ನಾನು ಅಥವಾ ನೀವು ಮಾತ್ರವಲ್ಲ, ಬೆಂಗಳೂರು ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ರೈಲುಗಳಿಗೂ ಸಾಧ್ಯವಾಗುತ್ತಿಲ್ಲ’ ಎಂಬ ಶೀರ್ಷಿಕೆಯೊಂದಿಗೆ ರೈಲ್ವೆ ಕ್ರಾಸಿಂಗ್ ಬಳಿ ಸಂಚಾರ ದಟ್ಟಣ ಇರುವ ಮತ್ತು ರೈಲು ನಿಂತಿರುವ ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮ ಇನ್​​ಸ್ಟಾಗ್ರಾಂನಲ್ಲಿ ಸುಧೀರ್‌ ಚಕ್ರವರ್ತಿ (sudhirchakravarthi4142) ಎಂಬ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ

ವೈರಲ್‌ ಆದ ಈ ವಿಡಿಯೋದಲ್ಲಿ ಕಾಣಿಸಿದ್ದು, ಮಾರತಹಳ್ಳಿ ಸಮೀಪದ ಮುನೇನಕೊಳಲು ರೈಲ್ವೆ ಕ್ರಾಸಿಂಗ್‌ ಬಳಿಯ ವಿಡಿಯೋ ಆಗಿತ್ತು. ಮೇಲ್ನೋಟಕ್ಕೆ ರೈಲ್ವೆ ಕ್ರಾಸಿಂಗ್​ನಲ್ಲಿ ಸಂಚಾರ ದಟ್ಟಣೆಯ ಕಾರಣ ರೈಲು ನಿಂತಿರುವಂತೆ ಕಾಣಿಸುತ್ತಿರುದು ನಿಜ. ಆದರೆ, ಅಸಲಿ ಸತ್ಯ ಈಗ ಬಯಲಾಗಿದೆ.

ವರದಿ: ಪ್ರದೀಪ್ ‘ಟಿವಿ9’

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು