AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ

23 ಲಕ್ಷ ವೆಚ್ಚದಲ್ಲಿ ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿಯನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುತ್ತಿದೆ. 30 ದಿನಗಳಲ್ಲಿ ಅಂಚೆ ಕಚೇರಿ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಹೊಸ ತಂತ್ರಜ್ಞಾನದ ಬಳಕೆ ಬೆಂಗಳೂರು ನಿವಾಸಿಗಳನ್ನು ಆಕರ್ಷಿಸಿದೆ.

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ
ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿImage Credit source: Moneycontrol
ನಯನಾ ಎಸ್​ಪಿ
|

Updated on: Apr 12, 2023 | 10:32 AM

Share

ಬೆಂಗಳೂರು: ಭಾರತದ ಮೊದಲ 3ಡಿ-ಮುದ್ರಿತ (3D-printed) ಅಂಚೆ ಕಚೇರಿ (Post office) ಬೆಂಗಳೂರಿನಲ್ಲಿ ಬರುತ್ತಿದ್ದು, ಹಲಸೂರಿನ (Ulsoor) ಕೇಂಬ್ರಿಡ್ಜ್ ಲೇಔಟ್ ನಿವಾಸಿಗಳು ಇದನ್ನು ನೋಡಿ ಸಂತೋಷಪಟ್ಟಿದ್ದಾರೆ. ಈ ಅಂಚೆ ಕಚೇರಿಯ ನಿರ್ಮಾಣ ವೆಚ್ಚವು ಸಾಂಪ್ರದಾಯಿಕ ಕಟ್ಟಡವನ್ನು ನಿರ್ಮಿಸುವುದಕ್ಕಿಂತ ಸುಮಾರು 30 ರಿಂದ 40 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು 30 ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 3ಡಿ ಮುದ್ರಿತ ಅಂಚೆ ಕಛೇರಿಯು ಸುಮಾರು 1100 ಚದರ ಅಡಿ ವಿಸ್ತೀರ್ಣ ಮತ್ತು ನಿರ್ಮಾಣದ ವೆಚ್ಚ 23 ಲಕ್ಷ ರೂಪಾಯಿ ಎಂದು ವರದಿಗಳು ತಿಳಿಸಿವೆ. ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಹೊಸ ತಂತ್ರಜ್ಞಾನ ಬಳಕೆ ಬೆಂಗಳೂರು ನಿವಾಸಿಗಳ ಕುತೂಹಲವನ್ನು ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ವೈರಲ್ ಆಗಿದೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಈ ಯೋಜನೆ ಬಗ್ಗೆ ತಮ್ಮ ಆಸಕ್ತಿಯನ್ನು ತೋರಿಸಿದ್ದಾರೆ. ಶಾ ಏಪ್ರಿಲ್ 10 ರಂದು ಮುಂಬರುವ ಅಂಚೆ ಕಚೇರಿಯ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು “ದೇಶದ ಮೊದಲ 3D-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ಬರುತ್ತಿದೆ – ಇದು ಮುಂಬರುವ ಭವಿಷ್ಯದ ವಸ್ತುಗಳ ಆಕಾರವಾಗಿದೆ ಎಂದು ಭಾವಿಸುತ್ತೇನೆ!” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ಅವರು “3ಡಿ ಪ್ರಿಂಟಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು ಕಡಿಮೆ ವೆಚ್ಚದ ನಿರ್ಮಾಣ ಆಯ್ಕೆಗಳೊಂದಿಗೆ ಅಂಚೆ ಕಚೇರಿಗಳನ್ನು ನಿರ್ಮಿಸಲು ನೋಡುತ್ತಿದ್ದಾರೆ” ಎಂದು ಮಾಧ್ಯಮಗಳಿಗೆ ತಿಳಿಸಿದರು. 3D ತಂತ್ರಜ್ಞಾನವು ಭವಿಷ್ಯವಾಗಿರುವುದರಿಂದ, ಅಂತಹ ಉಪಕ್ರಮಗಳು ಕಡಿಮೆ ವೆಚ್ಚದ ವಸತಿಗಳ ಬಗ್ಗೆ ಆಸಕ್ತಿಯನ್ನು ಉತ್ತೇಜಿಸುತ್ತದೆ ಎಂದು ಅವರು ಭಾವಿಸಿದರು.

ಇದನ್ನೂ ಓದಿ: 2025ರ ವೇಳೆಗೆ ಭಾರತದಲ್ಲಿ ತಯಾರಾಗಲಿದೆ ಫ್ಲೈಯಿಂಗ್ ಟ್ಯಾಕ್ಸಿ!

3ಡಿ ತಂತ್ರಜ್ಞಾನದ ಯೋಜನೆಯನ್ನು ಕಳೆದ ವರ್ಷವೇ ಪೋಸ್ಟ್ ಆಫೀಸ್ ಅನ್ನು ಘೋಷಿಸಲಾಯಿತು ಆದರೆ ಅದು ಈಗ ಪ್ರಾರಂಭವಾಗಿದೆ. ಭವಿಷ್ಯದಲ್ಲಿ ಈ ಫ್ಯೂಚರಿಸ್ಟಿಕ್ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಅಂಚೆ ಕಚೇರಿಗಳನ್ನು ನಿರ್ಮಿಸಲು ಈ ಯೋಜನೆಯ ಬಗ್ಗೆ ವರದಿಯನ್ನು ಸಲ್ಲಿಸಲು ರಾಜೇಂದ್ರ ಕುಮಾರ್ ಯೋಜಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ