AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದೇಶದ ಮೊದಲ ಭೂಗತ ವಿದ್ಯುತ್​​ ಟ್ರಾನ್ಸ್‌ಫಾರ್ಮರ್​​​ ಸ್ಥಾಪನೆ

ಪಾಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ವಿದ್ಯುತ್ ವರ್ತಕ ಭೂಗತ ಕೇಂದ್ರಗಳಿವೆ. ಅಲ್ಲಿನ ಸರ್ಕಾರಗಳು ಸಾರ್ವಜನಿಕರ ಅನುಕೂಲತೆ ಮತ್ತು ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ಕೇಂದ್ರಗಳನ್ನು ನಿರ್ಮಾಣ ಮಾಡಿವೆ. ಇದೀಗ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ದೇಶದಲ್ಲಿ ಮೊದಲ ಬಾರಿಗೆ ಭೂಗತ ವಿದ್ಯುತ್‌ ಪರಿವರ್ತಕ ಕೇಂದ್ರ ಸ್ಥಾಪಿಸಲಾಗಿದೆ.

ಬೆಂಗಳೂರಿನಲ್ಲಿ ದೇಶದ ಮೊದಲ ಭೂಗತ ವಿದ್ಯುತ್​​ ಟ್ರಾನ್ಸ್‌ಫಾರ್ಮರ್​​​ ಸ್ಥಾಪನೆ
ಭೂಗತ ವಿದ್ಯುತ್​ ಪರಿವರ್ತಕ
ವಿವೇಕ ಬಿರಾದಾರ
|

Updated on:Sep 06, 2023 | 7:27 AM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ ಭೂಗತ ವಿದ್ಯುತ್ ಪರಿವರ್ತಕ (Transformer) ಕೇಂದ್ರವನ್ನು ಮಂಗಳವಾರ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಉದ್ಘಾಟಿಸಿದರು. ಮಲ್ಲೇಶ್ವರಂನ 15ನೇ ಅಡ್ಡರಸ್ತೆಯಲ್ಲಿ ಬೆಸ್ಕಾಂ (BESCOM) ಹಾಗೂ ಬಿಬಿಎಂಪಿ (BBMP) ಸಹಭಾಗಿತ್ವದಲ್ಲಿ 1.98 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಇದು 500 ಕೆ.ವಿ.ಎ ಸಾಮರ್ಥ್ಯದ ಟ್ರಾನ್ಸ್‌ಫಾರ್ಮ‌ ಇದಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ವಿದ್ಯುತ್ ಪರಿವರ್ತಕ ಭೂಗತ ಕೇಂದ್ರಗಳಿವೆ. ಅಲ್ಲಿನ ಸರ್ಕಾರಗಳು ಸಾರ್ವಜನಿಕರ ಅನುಕೂಲತೆ ಮತ್ತು ಸುರಕ್ಷತೆ ಗಮನದಲ್ಲಿಟ್ಟುಕೊಂಡು ಈ ಕೇಂದ್ರಗಳನ್ನು ನಿರ್ಮಾಣ ಮಾಡಿವೆ. ಇದೀಗ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ದೇಶದಲ್ಲಿ ಮೊದಲ ಬಾರಿಗೆ ಭೂಗತ ವಿದ್ಯುತ್‌ ಪರಿವರ್ತಕ ಕೇಂದ್ರ ಸ್ಥಾಪಿಸಲಾಗಿದೆ.

ಏನಿದು ಭೂಗತ ವಿದ್ಯುತ್ ಪರಿವರ್ತಕ ಕೇಂದ್ರ?

ಜನರ ಸುರಕ್ಷತೆ ಹಾಗೂ ಅನುಕೂಲದ ದೃಷ್ಟಿಯಿಂದ ಭೂಮಿಯ ಕೆಳಭಾಗದಲ್ಲಿ ಕೊಠಡಿಯನ್ನು ನಿರ್ಮಿಸಿ ಅದರಲ್ಲಿ, 30 ಎಂಎಂನ ಸಿಮೆಂಟ್​ ಕಟ್ಟೆ ನಿರ್ಮಿಸಿ ಅದರ ಮೇಲೆ ವಿದ್ಯುತ್ ಟ್ರಾನ್ಸ್ ಫಾರ್ಮ‌್ರಗಳನ್ನು ಅಳವಡಿಸಲಾಗುತ್ತದೆ. ಸದ್ಯ ಮಲ್ಲೇಶ್ವರಂನಲ್ಲಿ ಸ್ಥಾಪಿಸಿರುವ ಈ ಕೇಂದ್ರದಲ್ಲಿ ರಸ್ತೆಯ ಮೇಲೈನಿಂದ 10 ಅಡಿ ಆಳದಲ್ಲಿ ಪರಿವರ್ತಕ ಅಳವಡಿಸಲಾಗಿದೆ. ಬೆಸ್ಕಾಂನಿಂದ ವಿದ್ಯುತ್ ಸಂಬಂಧಿತ ಕಾಮಗಾರಿ ಹಾಗೂ ಬಿಬಿಎಂಪಿಯಿಂದ ಸಿವಿಲ್ ಕಾಮಗಾರಿಗಳನ್ನು ಮಾಡಲಾಗಿದೆ. ಈ ಕೇಂದ್ರವು 500 ಕೆವಿಎ ಸಾಮರ್ಥ್ಯದ ತೈಲರಹಿತ ಟ್ರಾನ್ಸ್‌ಫಾರ್ಮರ್, 8 ವೇ ಸಾಲಿಡ್ ಸೈಟ್ ರಿಂಗ್ ಮೇನ್ ಯೂನಿಟ್, 5-ವೇ ಎಲ್.ಟಿ ವಿತರಣಾ ಪೆಟ್ಟಿಗೆ, ಯುಪಿಎಸ್, ವಾಟರ್ ಪಂಪ್ ಮತ್ತು ಹವಾ ನಿಯಂತ್ರಣ ವ್ಯವಸ್ಥೆ ಇದೆ. ಸಿವಿಲ್ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ನೀಡಿದೆ. 365 ದಿನಗಳಲ್ಲಿ ಯೋಜನೆ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಉಚಿತ ವಿದ್ಯುತ್​ಗೆ ಹಣ ನೀಡುವ ಬದಲು, ಮಾಲೂರಿನ ಈ ಕಾಲೇಜಿನಂತೆ ಸ್ವಾವಲಂಬನೆಗೆ ಒತ್ತು ನೀಡಿದ್ರೆ ಸೂರ್ಯ ಇರುವವರೆಗೆ ವಿದ್ಯುತ್ ಫ್ರೀ!

ದುರಸ್ತಿ ವೇಳೆ ಒಳ ಹೋಗಲು ವ್ಯವಸ್ಥೆ ಇದೆ. ಈ ಚೇಂಬರ್ ನೀರಿನ ಸಂಪ್‌ ರೀತಿ ಇದ್ದು, ನಾಲ್ಕೂ ಕಡೆ ಕಾಂಕ್ರೀಟ್ ಗೋಡೆಯಿಂದ ಮುಚ್ಚಲಾಗಿದೆ. ಇದರಿಂದ ಈ ಕೇಂದ್ರದ ಮೇಲೆ ಪಾದಚಾರಿಗಳು ಸಂಚರಿಸುವುದರಿಂದ ಸಮಸ್ಯೆ ಆಗಲ್ಲ, ಒಂದು ವೇಳೆ ಟ್ರಾನ್ಸ್ ಫಾರ್ಮರ್ ಸ್ಫೋಟದಂತಹ ಘಟನೆ ನಡೆದರೂ ಕೇಂದ್ರದ ಮೇಲ್ಬಾಗದಲ್ಲಿ ಯಾವುದೇ ಅವಘಡ ಆಗುವುದಿಲ್ಲ. ವಿದ್ಯುತ್ ಅವಘಡ, ವಿದ್ಯುತ್‌ ವ್ಯತ್ಯಯ ತಡೆಯಲು ಸಹಕಾರಿಯಾಗಲಿದೆ.

300 ಟ್ರಾನ್ಸ್‌ಫಾರ್ಮರ್ ಶಿಫ್ಟ್?

ಮುಂದಿನ ದಿನಗಳಲ್ಲಿ ನಗರದ ಪಾದಚಾರಿ ಮಾರ್ಗದಲ್ಲಿರುವ ಅಂದಾಜು 300 ಟ್ರಾನ್ಸ್‌ಫಾರ್ಮರ್​​​ಗಳನ್ನು ಈ ರೀತಿ ಭೂಗತ ಕೇಂದ್ರಕ್ಕೆ ವರ್ಗಾಯಿಸಲು ಯೋಜಿಸಲಾಗಿದೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Wed, 6 September 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?