AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ: ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ

ಕೇಂದ್ರ ಸರ್ಕಾರವು ಭಾರತದ ಪ್ರಮುಖ ಆರ್ಥಿಕ, ಕೈಗಾರಿಕಾ ಮತ್ತು ಪ್ರವಾಸಿ ಹಬ್‌ಗಳನ್ನು ಸಂಪರ್ಕಿಸಲು 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳಿಗೆ ಅನುಮೋದನೆ ನೀಡಿದೆ. ಈ ಹೈ-ಸ್ಪೀಡ್ ರೈಲು ಜಾಲವು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ಭಾರತದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ಪ್ರಸ್ತುತ ಮುಂಬೈ-ಅಹಮದಾಬಾದ್ ಕಾರಿಡಾರ್ ಪ್ರಗತಿಯಲ್ಲಿದ್ದು, ದೇಶಾದ್ಯಂತ ಬುಲೆಟ್ ಟ್ರೈನ್ ನೆಟ್‌ವರ್ಕ್‌ಗೆ ಅಡಿಪಾಯ ಹಾಕಲಾಗಿದೆ.

ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ: ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2026 | 3:24 PM

Share

ಮುಖ್ಯಾಂಶಗಳು

  • ಭಾರತೀಯ ರೈಲ್ವೆ ಇತಿಹಾಸದಲ್ಲೇ ಮಹತ್ತರ ಸಾಧನೆ ಮಾಡಲಿರುವ ಹೈ-ಸ್ಪೀಡ್ ರೈಲು
  • 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳ ಸ್ಥಾಪನೆ
  • ಕೇಂದ್ರ ಸರ್ಕಾರವು ಭಾರತದ ಸಾರಿಗೆ ವ್ಯವಸ್ಥೆಯ ಇತಿಹಾಸವನ್ನೇ ಬದಲಾಯಿಸಲಿದೆ

ದೆಹಲಿ, ಜೂ.26: ಭಾರತೀಯ ರೈಲ್ವೆ ಇತಿಹಾಸದಲ್ಲೇ ಮಹತ್ತರ ಸಾಧನೆ ಮಾಡಲಿರುವ ಹೈ-ಸ್ಪೀಡ್ ರೈಲು ಜಾಲ ವಿಸ್ತರಣೆಗೆ ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ದೇಶದ ಪ್ರಮುಖ ಆರ್ಥಿಕ, ಕೈಗಾರಿಕಾ, ತಂತ್ರಜ್ಞಾನ ಮತ್ತು ಪ್ರವಾಸಿ ಹಬ್‌ಗಳನ್ನು ಪರಸ್ಪರ ಜೋಡಿಸುವ ನಿಟ್ಟಿನಲ್ಲಿ 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

ದೇಶದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ (508 ಕಿ.ಮೀ) ಕಾರಿಡಾರ್‌ನ ಕಾಮಗಾರಿ ಪ್ರಸ್ತುತ ಪ್ರಗತಿಯಲ್ಲಿದೆ. 2017 ರಿಂದ ಈ ಯೋಜನೆಯ ಕೆಲಸಗಳು ಹಂತ-ಹಂತವಾಗಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಭಾರತದ ಸಾರಿಗೆ ವ್ಯವಸ್ಥೆಯ ಇತಿಹಾಸವನ್ನೇ ಬದಲಾಯಿಸಲಿದೆ. ಈ ಮೂಲಕ ರಾಷ್ಟ್ರೀಯ ಬುಲೆಟ್ ಟ್ರೈನ್ ನೆಟ್‌ವರ್ಕ್‌ಗೆ ಅಡಿಪಾಯ ಹಾಕಿದೆ.

ಅನುಮೋದನೆ ಪಡೆದ 7 ಹೊಸ ಕಾರಿಡಾರ್‌ಗಳು:

ದೇಶದ ಪಶ್ಚಿಮ, ದಕ್ಷಿಣ, ಉತ್ತರ ಹಾಗೂ ಪೂರ್ವ ಭಾಗಗಳನ್ನು ಒಳಗೊಂಡಂತೆ ಗುರುತಿಸಲಾದ 7 ಪ್ರಮುಖ ಮಾರ್ಗಗಳು ಇಲ್ಲಿವೆ:

ಮುಂಬೈ – ಪುಣೆ

ಪುಣೆ – ಹೈದರಾಬಾದ್

ಹೈದರಾಬಾದ್ – ಬೆಂಗಳೂರು

ಹೈದರಾಬಾದ್ – ಚೆನ್ನೈ

ಚೆನ್ನೈ – ಬೆಂಗಳೂರು

ದೆಹಲಿ – ವಾರಣಾಸಿ

ವಾರಣಾಸಿ – ಸಿಲಿಗುರಿ

ಬದಲಾಗಲಿದೆ ಪ್ರಯಾಣದ ಸಮಯ; ಗಂಟೆಗಳ ಜಾಗದಲ್ಲಿ ನಿಮಿಷಗಳ ಲೆಕ್ಕಾಚಾರ

ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಜಾರಿಗೆ ಬಂದ ಬಳಿಕ ಮೆಟ್ರೋ ನಗರಗಳ ನಡುವಿನ ಪ್ರಯಾಣದ ಸಮಯ ಊಹಿಸಲಾಗದಷ್ಟು ತಗ್ಗಲಿದೆ. ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯ ಪ್ರಕಾರ ನಿರೀಕ್ಷಿತ ವಿವರಗಳು ಹೀಗಿವೆ.

ಬೆಂಗಳೂರು – ಚೆನ್ನೈ: ಕೇವಲ 1 ಗಂಟೆ 13 ನಿಮಿಷ (73 ನಿಮಿಷ)!

ಬೆಂಗಳೂರು – ಹೈದರಾಬಾದ್: ಕೇವಲ 2 ಗಂಟೆ 10 ನಿಮಿಷ!

ಮುಂಬೈ – ಪುಣೆ: ಕೇವಲ 48 ನಿಮಿಷ!

ಮುಂಬೈ – ಅಹಮದಾಬಾದ್: ಕೇವಲ 1 ಗಂಟೆ 57 ನಿಮಿಷ!

ಪುಣೆ – ಹೈದರಾಬಾದ್: ಕೇವಲ 2 ಗಂಟೆ 8 ನಿಮಿಷ!

ದೆಹಲಿ – ಲಕ್ನೋ: ಕೇವಲ 2 ಗಂಟೆ!

ದೆಹಲಿ – ವಾರಣಾಸಿ: ಕೇವಲ 3 ಗಂಟೆ 15 ನಿಮಿಷ!

ದೆಹಲಿ – ಸಿಲಿಗುರಿ: ಸುಮಾರು 6 ಗಂಟೆ!

ಇದನ್ನೂ ಓದಿ: ವನ್ಯಜೀವಿ ಪ್ರಿಯರಿಗೆ ಗುಡ್​​ನ್ಯೂಸ್​​: ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಕಾರ, ಈ ಮೆಗಾ ಯೋಜನೆಯಿಂದ ಬಿಹಾರ ರಾಜ್ಯಕ್ಕೆ ಭಾರಿ ಲಾಭವಾಗಲಿದೆ. ದೆಹಲಿ-ವಾರಣಾಸಿ-ಪಟ್ನಾ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಮಂಜೂರಾತಿ ಸಿಕ್ಕಿದ್ದು, ಇದು ಕಾರ್ಯರೂಪಕ್ಕೆ ಬಂದಲ್ಲಿ ಪಟ್ನಾದಿಂದ ದೆಹಲಿಗೆ ಕೇವಲ 4 ಗಂಟೆ 41 ನಿಮಿಷಗಳಲ್ಲಿ ತಲುಪಬಹುದಾಗಿದೆ. ಅಷ್ಟೇ ಅಲ್ಲದೆ, ಪೂರ್ವ ಭಾರತದ ಕನೆಕ್ಟಿವಿಟಿಯನ್ನು ಮತ್ತಷ್ಟು ಬಲಪಡಿಸಲು ಈ ಕಾರಿಡಾರ್ ಅನ್ನು ಬಿಹಾರದ ಮೂಲಕ ಪಶ್ಚಿಮ ಬಂಗಾಳದ ಸಿಲಿಗುರಿವರೆಗೂ ವಿಸ್ತರಿಸುವ ಆಲೋಚನೆಯಲ್ಲಿ ಸರ್ಕಾರ ತೊಡಗಿದೆ. ಈ ಹೈ-ಸ್ಪೀಡ್ ರೈಲುಗಳು ರಸ್ತೆ ಮತ್ತು ವಾಯು ಸಾರಿಗೆಯ ಮೇಲಿನ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಲಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು