AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ: ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ

ಕೇಂದ್ರ ಸರ್ಕಾರವು ಭಾರತದ ಪ್ರಮುಖ ಆರ್ಥಿಕ, ಕೈಗಾರಿಕಾ ಮತ್ತು ಪ್ರವಾಸಿ ಹಬ್‌ಗಳನ್ನು ಸಂಪರ್ಕಿಸಲು 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳಿಗೆ ಅನುಮೋದನೆ ನೀಡಿದೆ. ಈ ಹೈ-ಸ್ಪೀಡ್ ರೈಲು ಜಾಲವು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ಭಾರತದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ. ಪ್ರಸ್ತುತ ಮುಂಬೈ-ಅಹಮದಾಬಾದ್ ಕಾರಿಡಾರ್ ಪ್ರಗತಿಯಲ್ಲಿದ್ದು, ದೇಶಾದ್ಯಂತ ಬುಲೆಟ್ ಟ್ರೈನ್ ನೆಟ್‌ವರ್ಕ್‌ಗೆ ಅಡಿಪಾಯ ಹಾಕಲಾಗಿದೆ.

ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ: ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2026 | 3:24 PM

Share

ಮುಖ್ಯಾಂಶಗಳು

  • ಭಾರತೀಯ ರೈಲ್ವೆ ಇತಿಹಾಸದಲ್ಲೇ ಮಹತ್ತರ ಸಾಧನೆ ಮಾಡಲಿರುವ ಹೈ-ಸ್ಪೀಡ್ ರೈಲು
  • 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳ ಸ್ಥಾಪನೆ
  • ಕೇಂದ್ರ ಸರ್ಕಾರವು ಭಾರತದ ಸಾರಿಗೆ ವ್ಯವಸ್ಥೆಯ ಇತಿಹಾಸವನ್ನೇ ಬದಲಾಯಿಸಲಿದೆ

ದೆಹಲಿ, ಜೂ.26: ಭಾರತೀಯ ರೈಲ್ವೆ ಇತಿಹಾಸದಲ್ಲೇ ಮಹತ್ತರ ಸಾಧನೆ ಮಾಡಲಿರುವ ಹೈ-ಸ್ಪೀಡ್ ರೈಲು ಜಾಲ ವಿಸ್ತರಣೆಗೆ ಕೇಂದ್ರ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ. ದೇಶದ ಪ್ರಮುಖ ಆರ್ಥಿಕ, ಕೈಗಾರಿಕಾ, ತಂತ್ರಜ್ಞಾನ ಮತ್ತು ಪ್ರವಾಸಿ ಹಬ್‌ಗಳನ್ನು ಪರಸ್ಪರ ಜೋಡಿಸುವ ನಿಟ್ಟಿನಲ್ಲಿ 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

ದೇಶದ ಮೊದಲ ಬುಲೆಟ್ ಟ್ರೈನ್ ಯೋಜನೆಯಾದ ಮುಂಬೈ-ಅಹಮದಾಬಾದ್ (508 ಕಿ.ಮೀ) ಕಾರಿಡಾರ್‌ನ ಕಾಮಗಾರಿ ಪ್ರಸ್ತುತ ಪ್ರಗತಿಯಲ್ಲಿದೆ. 2017 ರಿಂದ ಈ ಯೋಜನೆಯ ಕೆಲಸಗಳು ಹಂತ-ಹಂತವಾಗಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಭಾರತದ ಸಾರಿಗೆ ವ್ಯವಸ್ಥೆಯ ಇತಿಹಾಸವನ್ನೇ ಬದಲಾಯಿಸಲಿದೆ. ಈ ಮೂಲಕ ರಾಷ್ಟ್ರೀಯ ಬುಲೆಟ್ ಟ್ರೈನ್ ನೆಟ್‌ವರ್ಕ್‌ಗೆ ಅಡಿಪಾಯ ಹಾಕಿದೆ.

ಅನುಮೋದನೆ ಪಡೆದ 7 ಹೊಸ ಕಾರಿಡಾರ್‌ಗಳು:

ದೇಶದ ಪಶ್ಚಿಮ, ದಕ್ಷಿಣ, ಉತ್ತರ ಹಾಗೂ ಪೂರ್ವ ಭಾಗಗಳನ್ನು ಒಳಗೊಂಡಂತೆ ಗುರುತಿಸಲಾದ 7 ಪ್ರಮುಖ ಮಾರ್ಗಗಳು ಇಲ್ಲಿವೆ:

ಮುಂಬೈ – ಪುಣೆ

ಪುಣೆ – ಹೈದರಾಬಾದ್

ಹೈದರಾಬಾದ್ – ಬೆಂಗಳೂರು

ಹೈದರಾಬಾದ್ – ಚೆನ್ನೈ

ಚೆನ್ನೈ – ಬೆಂಗಳೂರು

ದೆಹಲಿ – ವಾರಣಾಸಿ

ವಾರಣಾಸಿ – ಸಿಲಿಗುರಿ

ಬದಲಾಗಲಿದೆ ಪ್ರಯಾಣದ ಸಮಯ; ಗಂಟೆಗಳ ಜಾಗದಲ್ಲಿ ನಿಮಿಷಗಳ ಲೆಕ್ಕಾಚಾರ

ಹೊಸ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಜಾರಿಗೆ ಬಂದ ಬಳಿಕ ಮೆಟ್ರೋ ನಗರಗಳ ನಡುವಿನ ಪ್ರಯಾಣದ ಸಮಯ ಊಹಿಸಲಾಗದಷ್ಟು ತಗ್ಗಲಿದೆ. ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯ ಪ್ರಕಾರ ನಿರೀಕ್ಷಿತ ವಿವರಗಳು ಹೀಗಿವೆ.

ಬೆಂಗಳೂರು – ಚೆನ್ನೈ: ಕೇವಲ 1 ಗಂಟೆ 13 ನಿಮಿಷ (73 ನಿಮಿಷ)!

ಬೆಂಗಳೂರು – ಹೈದರಾಬಾದ್: ಕೇವಲ 2 ಗಂಟೆ 10 ನಿಮಿಷ!

ಮುಂಬೈ – ಪುಣೆ: ಕೇವಲ 48 ನಿಮಿಷ!

ಮುಂಬೈ – ಅಹಮದಾಬಾದ್: ಕೇವಲ 1 ಗಂಟೆ 57 ನಿಮಿಷ!

ಪುಣೆ – ಹೈದರಾಬಾದ್: ಕೇವಲ 2 ಗಂಟೆ 8 ನಿಮಿಷ!

ದೆಹಲಿ – ಲಕ್ನೋ: ಕೇವಲ 2 ಗಂಟೆ!

ದೆಹಲಿ – ವಾರಣಾಸಿ: ಕೇವಲ 3 ಗಂಟೆ 15 ನಿಮಿಷ!

ದೆಹಲಿ – ಸಿಲಿಗುರಿ: ಸುಮಾರು 6 ಗಂಟೆ!

ಇದನ್ನೂ ಓದಿ: ವನ್ಯಜೀವಿ ಪ್ರಿಯರಿಗೆ ಗುಡ್​​ನ್ಯೂಸ್​​: ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಕಾರ, ಈ ಮೆಗಾ ಯೋಜನೆಯಿಂದ ಬಿಹಾರ ರಾಜ್ಯಕ್ಕೆ ಭಾರಿ ಲಾಭವಾಗಲಿದೆ. ದೆಹಲಿ-ವಾರಣಾಸಿ-ಪಟ್ನಾ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಮಂಜೂರಾತಿ ಸಿಕ್ಕಿದ್ದು, ಇದು ಕಾರ್ಯರೂಪಕ್ಕೆ ಬಂದಲ್ಲಿ ಪಟ್ನಾದಿಂದ ದೆಹಲಿಗೆ ಕೇವಲ 4 ಗಂಟೆ 41 ನಿಮಿಷಗಳಲ್ಲಿ ತಲುಪಬಹುದಾಗಿದೆ. ಅಷ್ಟೇ ಅಲ್ಲದೆ, ಪೂರ್ವ ಭಾರತದ ಕನೆಕ್ಟಿವಿಟಿಯನ್ನು ಮತ್ತಷ್ಟು ಬಲಪಡಿಸಲು ಈ ಕಾರಿಡಾರ್ ಅನ್ನು ಬಿಹಾರದ ಮೂಲಕ ಪಶ್ಚಿಮ ಬಂಗಾಳದ ಸಿಲಿಗುರಿವರೆಗೂ ವಿಸ್ತರಿಸುವ ಆಲೋಚನೆಯಲ್ಲಿ ಸರ್ಕಾರ ತೊಡಗಿದೆ. ಈ ಹೈ-ಸ್ಪೀಡ್ ರೈಲುಗಳು ರಸ್ತೆ ಮತ್ತು ವಾಯು ಸಾರಿಗೆಯ ಮೇಲಿನ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಲಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?