AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾರ್ಪಣೆಗೆ ಸಜ್ಜಾಗ್ತಿದೆ ದೇಶದ ಅತಿ ಎತ್ತರದ ಜಯದೇವ ಮೆಟ್ರೋ ಸ್ಟೇಷನ್: 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ಬೆಂಗಳೂರಿನ ಜಯದೇವ ಆಸ್ಪತ್ರೆ ಬಳಿ 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ ಅತಿ ಎತ್ತರದ ಪಂಚಸ್ತರದ (5-Tier) ಇಂಟರ್‌ಚೇಂಜ್ ಮೆಟ್ರೋ ಸ್ಟೇಷನ್ ಇದೇ ಆಗಸ್ಟ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಪಿಂಕ್ ಲೈನ್‌ನ ಕಾಳೇನ ಅಗ್ರಹಾರ-ತಾವರೆಕೆರೆ ಮಾರ್ಗ ಮುಕ್ತವಾಗಲಿದ್ದು, ಪ್ರಯಾಣಿಕರು ಹಳದಿ, ಹಸಿರು ಮತ್ತು ನೇರಳೆ ಮಾರ್ಗಗಳಿಗೆ ಸುಲಭವಾಗಿ ಇಂಟರ್ಚೇಂಜ್ ಮಾಡಿಕೊಳ್ಳಬಹುದಾಗಿದೆ.

ಲೋಕಾರ್ಪಣೆಗೆ ಸಜ್ಜಾಗ್ತಿದೆ ದೇಶದ ಅತಿ ಎತ್ತರದ ಜಯದೇವ ಮೆಟ್ರೋ ಸ್ಟೇಷನ್: 155 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಪಂಚಸ್ತರದ ಜಯದೇವ ಮೆಟ್ರೋ ನಿಲ್ದಾಣImage Credit source: tv9
ಕಿರಣ್​ ಸೂರ್ಯ
| Edited By: |

Updated on: Jun 12, 2026 | 7:38 AM

Share

ಬೆಂಗಳೂರು, ಜೂನ್ 12: ಬೆಂಗಳೂರಿನ ವಾಹನ ಸವಾರರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶದಲ್ಲೇ ಅತಿ ಎತ್ತರದ ಹಾಗೂ ವಿಶಿಷ್ಟ ತಂತ್ರಜ್ಞಾನದ ಇಂಟರ್‌ಚೇಂಜ್ ನಿಲ್ದಾಣ ಎಂದೇ ಖ್ಯಾತಿ ಪಡೆದಿರುವ ಜಯದೇವ ಆಸ್ಪತ್ರೆ ಮೆಟ್ರೋ ಸ್ಟೇಷನ್ (Jayadeva Metro Station) ಇದೇ ಆಗಸ್ಟ್ ತಿಂಗಳಿನಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಒಟ್ಟು ಐದು ಸ್ತರಗಳಲ್ಲಿ (5-Tier) ನಿರ್ಮಾಣವಾಗಿರುವ ದೇಶದ ಮೊದಲ ಮೆಟ್ರೋ ನಿಲ್ದಾಣ ಇದಾಗಿದ್ದು, ಇದರ ಆರಂಭದಿಂದ ಬನ್ನೇರುಘಟ್ಟ ರಸ್ತೆ ಮತ್ತು ಸುತ್ತಮುತ್ತಲಿನ ಐಟಿ ಉದ್ಯೋಗಿಗಳು ಹಾಗೂ ಸ್ಥಳೀಯ ನಿವಾಸಿಗಳ ದಶಕದ ಟ್ರಾಫಿಕ್ ಸಂಕಷ್ಟಕ್ಕೆ ಕೊನೆಗೂ ಮುಕ್ತಿ ದೊರೆಯಲಿದೆ.

ಮುಖ್ಯಾಂಶಗಳು

  • ಆಗಸ್ಟ್‌ನಲ್ಲಿ ದೇಶದ ಅತಿ ಎತ್ತರದ ಸ್ಟೇಷನ್ ಓಪನ್.
  • ₹155 ಕೋಟಿ ವೆಚ್ಚದಲ್ಲಿ ಪಂಚಸ್ತರದ ನಿಲ್ದಾಣ ನಿರ್ಮಾಣ.
  • ಗುಲಾಬಿ-ಹಳದಿ ಮಾರ್ಗಗಳ ಇಂಟರ್‌ಚೇಂಜ್ ಕನೆಕ್ಷನ್.

ದೇಶದಲ್ಲೇ ಮೊದಲ ಬಾರಿಗೆ 5 ಸ್ತರದ ಅದ್ಭುತ ಮೆಟ್ರೋ ಸ್ಟೇಷನ್ ನಿರ್ಮಾಣ

ಸುಮಾರು 155 ಕೋಟಿ ರೂ. ಭಾರಿ ವೆಚ್ಚದಲ್ಲಿ ಜಯದೇವ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣವನ್ನು ನಿರ್ಮಿಸಲಾಗಿದೆ. ಈ ಸ್ಟೇಷನ್‌ನ ವಿನ್ಯಾಸವೇ ಅತ್ಯಂತ ರೋಚಕವಾಗಿದ್ದು, ಇಂಜಿನಿಯರಿಂಗ್ ಅದ್ಭುತ ಎನ್ನಲಾಗಿದೆ. ನೆಲದ ಕೆಳಗೆ ಅಂಡರ್‌ಪಾಸ್ (Underpass), ಅದರ ಮೇಲೆ ಸಾಮಾನ್ಯ ರಸ್ತೆ, ಮೂರನೇ ಸ್ತರದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ (Double Decker Flyover), ನಾಲ್ಕನೇ ಸ್ತರದಲ್ಲಿ ನಮ್ಮ ಮೆಟ್ರೋದ ಹಳದಿ ಮಾರ್ಗ (Yellow Line) ಹಾಗೂ ಎಲ್ಲದಕ್ಕಿಂತ ಮೇಲಿನ ಅಂದರೆ ಐದನೇ ಸ್ತರದಲ್ಲಿ ಪಿಂಕ್ ಲೈನ್ (Pink Line) ಹಾದು ಹೋಗುತ್ತದೆ. ಸದ್ಯ ಆಗಸ್ಟ್‌ನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಆರು ಮೆಟ್ರೋ ನಿಲ್ದಾಣಗಳ ಮಾರ್ಗವನ್ನು ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಭರದಿಂದ ಸಿದ್ಧತೆ ನಡೆಸುತ್ತಿದೆ.

ಪ್ರಯಾಣಿಕರಿಗೆ ಸುಲಭ ಮಾರ್ಗ ಬದಲಾವಣೆ ಸೌಲಭ್ಯ

ಕಳೆದ ವರ್ಷವೇ ಆ‌ರ್‌.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗ ಉದ್ಘಾಟನೆಯಾಗಿದ್ದರೂ, ಜಯದೇವ ಮೆಟ್ರೋ ನಿಲ್ದಾಣ ಮಾತ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದೀಗ ಆಗಸ್ಟ್‌ನಲ್ಲಿ ಪಿಂಕ್ ಲೈನ್‌ನ ಕಾಳೇನ ಅಗ್ರಹಾರ-ತಾವರೆಕೆರೆ ನಡುವೆ ಮೆಟ್ರೋ ಸಂಚಾರ ಆರಂಭವಾದರೆ, ಪ್ರಯಾಣಿಕರು ಸುಲಭವಾಗಿ ಮಾರ್ಗ ಬದಲಾಯಿಸಬಹುದು. ಬನ್ನೇರುಘಟ್ಟ ರಸ್ತೆಯಿಂದ ಬರುವವರು ಜಯದೇವ ನಿಲ್ದಾಣದಲ್ಲಿ ಇಳಿದು ಹಳದಿ ಮಾರ್ಗದ ಮೂಲಕ ಆ‌ರ್‌.ವಿ. ರಸ್ತೆ ತಲುಪಬಹುದು. ಅಲ್ಲಿಂದ ನೇರವಾಗಿ ಮೆಜೆಸ್ಟಿಕ್ ಹಾಗೂ ಹಸಿರು ಮಾರ್ಗದ (Green Line) ಸಿಲ್ಕ್ ಇನ್ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಟ್ರಾಫಿಕ್ ಕಿರಿಕಿರಿ ಇಲ್ಲದೆ ಪ್ರಯಾಣಿಸಬಹುದಾಗಿದೆ.

ಸುತ್ತಮುತ್ತಲಿನ ಜನತೆಗೆ ನಿಟ್ಟುಸಿರು

ಈ ನೂತನ ಇಂಟರ್‌ಚೇಂಜ್ ನಿಲ್ದಾಣದ ಕಾರ್ಯಾಚರಣೆಯಿಂದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ (IIMB), ಜೆ.ಪಿ. ನಗರ ಹಾಗೂ ತಾವರೆಕೆರೆ ಸುತ್ತಮುತ್ತಲಿನ ಲಕ್ಷಾಂತರ ಜನರಿಗೆ ಆನೆ ಬಲ ಬಂದಂತಾಗಲಿದೆ. ಪಿಂಕ್ ಲೈನ್ ಸಂಪೂರ್ಣವಾಗಿ ಕಾರ್ಯಾರಂಭ ಮಾಡುತ್ತಿದ್ದಂತೆ ಪ್ರಯಾಣಿಕರು ಗ್ರೀನ್, ಪರ್ಪಲ್ ಮತ್ತು ಯೆಲ್ಲೋ ಲೈನ್‌ಗಳಿಗೆ ಸುಲಭವಾಗಿ ಕನೆಕ್ಟ್ ಮಾಡಿಕೊಂಡು ನಗರದ ಯಾವುದೇ ಮೂಲೆಗಾದರೂ ನಿರಾಯಾಸವಾಗಿ ಸಂಚರಿಸಬಹುದಾಗಿದೆ ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ