ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಮಂದಿ ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ಮಂಗಳೂರಿಗೆ ಹಾರಿದ್ದು ಪ್ರತಿಭಟನೆ ನಂತರ ಬೇರೆ ವಿಮಾನದ ವ್ಯವಸ್ಥೆ ಮಾಡಲಾಯಿತು.

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?
ಇಂಡಿಗೋ ವಿಮಾನ
Follow us
| Updated By: ಆಯೇಷಾ ಬಾನು

Updated on: Aug 06, 2023 | 2:13 PM

ಮಂಗಳೂರು, ಆ.06: ಬೆಂಗಳೂರಿನಿಂದ ಮಂಗಳೂರಿಗೆ ಹಾರುವ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ ಆರು ಮಂದಿ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದರೂ(Kempe Gowda International Airport) ವಿಮಾನ ನಿಗದಿತ ನಿರ್ಗಮನ ಸಮಯಕ್ಕಿಂತ 12 ನಿಮಿಷ ಬೇಗ ಟೇಕಾಫ್ ಆಗಿದೆ. ಇದರಿಂದ ಪ್ರಯಾಣಿಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾದ ಘಟನೆ ಶುಕ್ರವಾರ ನಡೆದಿದೆ.

ಸರ್ಕಾರಿ ಅಧಿಕಾರಿಯಾಗಿರುವ ಪ್ರಯಾಣಿಕರೊಬ್ಬರ ಪ್ರಕಾರ, ಇಂಡಿಗೋ ವಿಮಾನವು ಮಧ್ಯಾಹ್ನ 2.55 ಕ್ಕೆ ಹೊರಡಬೇಕಿತ್ತು, ಆದರೆ 2.43 ಕ್ಕೆ (ಏರ್‌ಲೈನ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ) ಟೇಕ್ ಆಫ್ ಆಗಿದೆ. 6 ಮಂದಿ ಪ್ರಯಾಣಿಕರನ್ನು ಬಿಟ್ಟು ವಿಮಾನ ಹೊರಟಿದೆ. ಈ ಹಿನ್ನೆಲೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು ಇಂಡಿಗೋ ಬೇರೆ ವ್ಯವಸ್ಥೆ ಕಲ್ಪಿಸಿದೆ. (6E-578) ರಾತ್ರಿ 8.20 ಕ್ಕೆ ಹೊರಡುವ ವಿಮಾನದಲ್ಲಿ ತೆರಳಲು ಪ್ರಯಾಣಿಕರಿಗೆ ಅವಕಾಶ ನೀಡಿತು. ಇದರಿಂದ ಪ್ರಯಾಣಿಕರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದರು.

ಇದನ್ನೂ ಓದಿ: ಚಿಕ್ಕೋಡಿ: ಲೀಸ್ ಪಡೆದ ಹೊಲದಲ್ಲಿ ಟೊಮೆಟೊ ಬೆಳೆದು ಕೋಟ್ಯಾಧೀಶನಾದ ರೈತ

ಇನ್ನು ವಿಮಾನ ಹಾರಾಟದಲ್ಲಿ ಬದಲಾವಣೆ ಅಥವಾ ವೇಳಾಪಟ್ಟಿ ಬದಲಾದರೆ ಪ್ರಯಾಣಿಕರಿಗೆ ತಿಳಿಸುವುದು ವಾಡಿಕೆ ಮತ್ತು ವಿಮಾನ ನಿರ್ವಾಹಕರ ಜವಾಬ್ದಾರಿಯಾಗಿದೆ. ಆದರೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ನಾವು ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣವನ್ನು ತಲುಪಿದ್ದೇವೆ. ನಾವು ವಿಮಾನ ನಿಲ್ದಾಣದಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಯಿತು. ಮುಂದಿನ ವಿಮಾನದಲ್ಲಿ ಮಂಗಳೂರಿಗೆ ಹೋಗಿ ಎಂದರು. ಸದ್ಯ ನಾವೀಗ ಮಂಗಳೂರಿನಲ್ಲಿದ್ದೇವೆ ಎಂದು ಮಂಗಳೂರು ತಲುಪಿದ ಪ್ರಯಾಣಿಕರೊಬ್ಬರು ತಿಳಿಸಿದರು.

ಮತ್ತೊಂದೆಡೆ ಪ್ರಯಾಣಿಕರ ಪ್ರತಿಭಟನೆ ಬಗ್ಗೆ ಸ್ಪಷ್ಟನೆ ನೀಡಿದ ಇಂಡಿಗೋ, ಪ್ರಯಾಣಿಕರ ಆರೋಪವನ್ನು ತಳ್ಳಿ ಹಾಕಿದೆ. ನಿಗದಿತ ಸಮಯಕ್ಕೆ ವಿಮಾನ ಹೊರಟಿದೆ. ವಿಮಾನವು ಮಧ್ಯಾಹ್ನ 2.43 ಕ್ಕೆ ಗೇಟ್‌ನಿಂದ ಹೊರಗಿತ್ತು ಮತ್ತು 2.57 ಕ್ಕೆ ವಿಮಾನ ನಿಲ್ದಾಣದಿಂದ ನಿರ್ಗಮಿಸಿತು ಎಂದು ತಿಳಿಸಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಈ ರಾಶಿಯವರಿಗೆ ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು