AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಮಂದಿ ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ಮಂಗಳೂರಿಗೆ ಹಾರಿದ್ದು ಪ್ರತಿಭಟನೆ ನಂತರ ಬೇರೆ ವಿಮಾನದ ವ್ಯವಸ್ಥೆ ಮಾಡಲಾಯಿತು.

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?
ಇಂಡಿಗೋ ವಿಮಾನ
TV9 Web
| Edited By: |

Updated on: Aug 06, 2023 | 2:13 PM

Share

ಮಂಗಳೂರು, ಆ.06: ಬೆಂಗಳೂರಿನಿಂದ ಮಂಗಳೂರಿಗೆ ಹಾರುವ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ ಆರು ಮಂದಿ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದರೂ(Kempe Gowda International Airport) ವಿಮಾನ ನಿಗದಿತ ನಿರ್ಗಮನ ಸಮಯಕ್ಕಿಂತ 12 ನಿಮಿಷ ಬೇಗ ಟೇಕಾಫ್ ಆಗಿದೆ. ಇದರಿಂದ ಪ್ರಯಾಣಿಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾದ ಘಟನೆ ಶುಕ್ರವಾರ ನಡೆದಿದೆ.

ಸರ್ಕಾರಿ ಅಧಿಕಾರಿಯಾಗಿರುವ ಪ್ರಯಾಣಿಕರೊಬ್ಬರ ಪ್ರಕಾರ, ಇಂಡಿಗೋ ವಿಮಾನವು ಮಧ್ಯಾಹ್ನ 2.55 ಕ್ಕೆ ಹೊರಡಬೇಕಿತ್ತು, ಆದರೆ 2.43 ಕ್ಕೆ (ಏರ್‌ಲೈನ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ) ಟೇಕ್ ಆಫ್ ಆಗಿದೆ. 6 ಮಂದಿ ಪ್ರಯಾಣಿಕರನ್ನು ಬಿಟ್ಟು ವಿಮಾನ ಹೊರಟಿದೆ. ಈ ಹಿನ್ನೆಲೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು ಇಂಡಿಗೋ ಬೇರೆ ವ್ಯವಸ್ಥೆ ಕಲ್ಪಿಸಿದೆ. (6E-578) ರಾತ್ರಿ 8.20 ಕ್ಕೆ ಹೊರಡುವ ವಿಮಾನದಲ್ಲಿ ತೆರಳಲು ಪ್ರಯಾಣಿಕರಿಗೆ ಅವಕಾಶ ನೀಡಿತು. ಇದರಿಂದ ಪ್ರಯಾಣಿಕರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದರು.

ಇದನ್ನೂ ಓದಿ: ಚಿಕ್ಕೋಡಿ: ಲೀಸ್ ಪಡೆದ ಹೊಲದಲ್ಲಿ ಟೊಮೆಟೊ ಬೆಳೆದು ಕೋಟ್ಯಾಧೀಶನಾದ ರೈತ

ಇನ್ನು ವಿಮಾನ ಹಾರಾಟದಲ್ಲಿ ಬದಲಾವಣೆ ಅಥವಾ ವೇಳಾಪಟ್ಟಿ ಬದಲಾದರೆ ಪ್ರಯಾಣಿಕರಿಗೆ ತಿಳಿಸುವುದು ವಾಡಿಕೆ ಮತ್ತು ವಿಮಾನ ನಿರ್ವಾಹಕರ ಜವಾಬ್ದಾರಿಯಾಗಿದೆ. ಆದರೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ನಾವು ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣವನ್ನು ತಲುಪಿದ್ದೇವೆ. ನಾವು ವಿಮಾನ ನಿಲ್ದಾಣದಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಯಿತು. ಮುಂದಿನ ವಿಮಾನದಲ್ಲಿ ಮಂಗಳೂರಿಗೆ ಹೋಗಿ ಎಂದರು. ಸದ್ಯ ನಾವೀಗ ಮಂಗಳೂರಿನಲ್ಲಿದ್ದೇವೆ ಎಂದು ಮಂಗಳೂರು ತಲುಪಿದ ಪ್ರಯಾಣಿಕರೊಬ್ಬರು ತಿಳಿಸಿದರು.

ಮತ್ತೊಂದೆಡೆ ಪ್ರಯಾಣಿಕರ ಪ್ರತಿಭಟನೆ ಬಗ್ಗೆ ಸ್ಪಷ್ಟನೆ ನೀಡಿದ ಇಂಡಿಗೋ, ಪ್ರಯಾಣಿಕರ ಆರೋಪವನ್ನು ತಳ್ಳಿ ಹಾಕಿದೆ. ನಿಗದಿತ ಸಮಯಕ್ಕೆ ವಿಮಾನ ಹೊರಟಿದೆ. ವಿಮಾನವು ಮಧ್ಯಾಹ್ನ 2.43 ಕ್ಕೆ ಗೇಟ್‌ನಿಂದ ಹೊರಗಿತ್ತು ಮತ್ತು 2.57 ಕ್ಕೆ ವಿಮಾನ ನಿಲ್ದಾಣದಿಂದ ನಿರ್ಗಮಿಸಿತು ಎಂದು ತಿಳಿಸಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!