Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಮಂದಿ ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ಮಂಗಳೂರಿಗೆ ಹಾರಿದ್ದು ಪ್ರತಿಭಟನೆ ನಂತರ ಬೇರೆ ವಿಮಾನದ ವ್ಯವಸ್ಥೆ ಮಾಡಲಾಯಿತು.

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ, ಮುಂದೇನಾಯ್ತು?
ಇಂಡಿಗೋ ವಿಮಾನ
Follow us
TV9 Web
| Updated By: ಆಯೇಷಾ ಬಾನು

Updated on: Aug 06, 2023 | 2:13 PM

ಮಂಗಳೂರು, ಆ.06: ಬೆಂಗಳೂರಿನಿಂದ ಮಂಗಳೂರಿಗೆ ಹಾರುವ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ ಆರು ಮಂದಿ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದರೂ(Kempe Gowda International Airport) ವಿಮಾನ ನಿಗದಿತ ನಿರ್ಗಮನ ಸಮಯಕ್ಕಿಂತ 12 ನಿಮಿಷ ಬೇಗ ಟೇಕಾಫ್ ಆಗಿದೆ. ಇದರಿಂದ ಪ್ರಯಾಣಿಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾದ ಘಟನೆ ಶುಕ್ರವಾರ ನಡೆದಿದೆ.

ಸರ್ಕಾರಿ ಅಧಿಕಾರಿಯಾಗಿರುವ ಪ್ರಯಾಣಿಕರೊಬ್ಬರ ಪ್ರಕಾರ, ಇಂಡಿಗೋ ವಿಮಾನವು ಮಧ್ಯಾಹ್ನ 2.55 ಕ್ಕೆ ಹೊರಡಬೇಕಿತ್ತು, ಆದರೆ 2.43 ಕ್ಕೆ (ಏರ್‌ಲೈನ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ) ಟೇಕ್ ಆಫ್ ಆಗಿದೆ. 6 ಮಂದಿ ಪ್ರಯಾಣಿಕರನ್ನು ಬಿಟ್ಟು ವಿಮಾನ ಹೊರಟಿದೆ. ಈ ಹಿನ್ನೆಲೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು ಇಂಡಿಗೋ ಬೇರೆ ವ್ಯವಸ್ಥೆ ಕಲ್ಪಿಸಿದೆ. (6E-578) ರಾತ್ರಿ 8.20 ಕ್ಕೆ ಹೊರಡುವ ವಿಮಾನದಲ್ಲಿ ತೆರಳಲು ಪ್ರಯಾಣಿಕರಿಗೆ ಅವಕಾಶ ನೀಡಿತು. ಇದರಿಂದ ಪ್ರಯಾಣಿಕರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದರು.

ಇದನ್ನೂ ಓದಿ: ಚಿಕ್ಕೋಡಿ: ಲೀಸ್ ಪಡೆದ ಹೊಲದಲ್ಲಿ ಟೊಮೆಟೊ ಬೆಳೆದು ಕೋಟ್ಯಾಧೀಶನಾದ ರೈತ

ಇನ್ನು ವಿಮಾನ ಹಾರಾಟದಲ್ಲಿ ಬದಲಾವಣೆ ಅಥವಾ ವೇಳಾಪಟ್ಟಿ ಬದಲಾದರೆ ಪ್ರಯಾಣಿಕರಿಗೆ ತಿಳಿಸುವುದು ವಾಡಿಕೆ ಮತ್ತು ವಿಮಾನ ನಿರ್ವಾಹಕರ ಜವಾಬ್ದಾರಿಯಾಗಿದೆ. ಆದರೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ನಾವು ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣವನ್ನು ತಲುಪಿದ್ದೇವೆ. ನಾವು ವಿಮಾನ ನಿಲ್ದಾಣದಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಯಿತು. ಮುಂದಿನ ವಿಮಾನದಲ್ಲಿ ಮಂಗಳೂರಿಗೆ ಹೋಗಿ ಎಂದರು. ಸದ್ಯ ನಾವೀಗ ಮಂಗಳೂರಿನಲ್ಲಿದ್ದೇವೆ ಎಂದು ಮಂಗಳೂರು ತಲುಪಿದ ಪ್ರಯಾಣಿಕರೊಬ್ಬರು ತಿಳಿಸಿದರು.

ಮತ್ತೊಂದೆಡೆ ಪ್ರಯಾಣಿಕರ ಪ್ರತಿಭಟನೆ ಬಗ್ಗೆ ಸ್ಪಷ್ಟನೆ ನೀಡಿದ ಇಂಡಿಗೋ, ಪ್ರಯಾಣಿಕರ ಆರೋಪವನ್ನು ತಳ್ಳಿ ಹಾಕಿದೆ. ನಿಗದಿತ ಸಮಯಕ್ಕೆ ವಿಮಾನ ಹೊರಟಿದೆ. ವಿಮಾನವು ಮಧ್ಯಾಹ್ನ 2.43 ಕ್ಕೆ ಗೇಟ್‌ನಿಂದ ಹೊರಗಿತ್ತು ಮತ್ತು 2.57 ಕ್ಕೆ ವಿಮಾನ ನಿಲ್ದಾಣದಿಂದ ನಿರ್ಗಮಿಸಿತು ಎಂದು ತಿಳಿಸಿದೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ