AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಕಳ್ಳಿಯ ಸುಳಿವು ಕೊಟ್ಟ ಉಪ್ಪಿಟ್ಟು: ಮಗು ಕಳ್ಳತನ ಮಾಡಿದ ಆರೋಪಿ ಹಿಸ್ಟರಿಯೇ ಭಯಾನಕ

ಈ ಮಕ್ಕಳ ಕಳ್ಳಿ ಕಳ್ಳತನ ಮಾಡಲು ಮನೆಗೆ ಎಂಟ್ರಿ ಕೊಡುವ ರೀತಿ ಕೇಳಿದ್ರೆ ಎಂತವರೂ ಶಾಕ್ ಆಗ್ತಾರೆ. ಈಕೆ ಮನೆ ಬಾಗಿಲಿಗೆ ಡೋನೆಷನ್ ಕೇಳ್ಕೊಂಡು ಬಂದು ಪುಟ್ಟ ಪುಟ್ಟ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದಳಂತೆ.

ಮಗು ಕಳ್ಳಿಯ ಸುಳಿವು ಕೊಟ್ಟ ಉಪ್ಪಿಟ್ಟು: ಮಗು ಕಳ್ಳತನ ಮಾಡಿದ ಆರೋಪಿ ಹಿಸ್ಟರಿಯೇ ಭಯಾನಕ
ಆರೋಪಿತೆ ನಂದಿನಿ ಅಲಿಯಾಸ್ ಆಯೇಷಾ
ಆಯೇಷಾ ಬಾನು
|

Updated on:Mar 29, 2023 | 9:25 AM

Share

ಬೆಂಗಳೂರು: ಮನೆಯಲ್ಲಿ ಮಲಗಿದ್ದ ನವಜಾತ ಹೆಣ್ಣು ಮಗುವನ್ನ ಕದ್ದೊಯ್ದಿದ್ದ(Child Theft) ಪ್ರಕರಣಕ್ಕೆ ಸಂಬಂಧಿಸಿ ಮಗು ಕಳ್ಳತನ ಮಾಡಿದ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದು ಈಕೆಯ ಭಯಾನಕ ಹಿಸ್ಟರಿ ಬಯಲಾಗಿದೆ. ಈ ಮಕ್ಕಳ ಕಳ್ಳಿ ಕಳ್ಳತನ ಮಾಡಲು ಮನೆಗೆ ಎಂಟ್ರಿ ಕೊಡುವ ರೀತಿ ಕೇಳಿದ್ರೆ ಎಂತವರೂ ಶಾಕ್ ಆಗ್ತಾರೆ. ಈಕೆ ಮನೆ ಬಾಗಿಲಿಗೆ ಡೋನೆಷನ್ ಕೇಳ್ಕೊಂಡು ಬಂದು ಪುಟ್ಟ ಪುಟ್ಟ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದಳಂತೆ. ಈ ಹಿಂದೆ ಸಣ್ಣ ಪುಟ್ಟ ಪ್ರಕರಣಗಳಲ್ಲಿ ನಂದಿನಿ ಅಲಿಯಾಸ್ ಆಯೇಷಾ ಪೊಲೀಸರ ಅತಿಥಿಯಾಗಿದ್ದಳು.

ಡೋನೆಷನ್ ಕೇಳ್ಕೊಂಡು ಮನೆ ಬಾಗಿಲಿಗೆ ಬಂದರೆ ಎಚ್ಚರ

ಕಳ್ಳಿ ಆಯೇಷಾ, ಯಾವುದೋ ಒಂದು ಸಂಸ್ಥೆಯ ಬ್ರೋಷರ್ ಹಿಡ್ಕೊಂಡು ಮನೆ ಬಾಗಿಲು ತಟ್ಟುತ್ತಿದ್ದಳು. ಈ ಸಂಸ್ಥೆಗೆ ಧನ ಸಹಾಯ ಮಾಡಿ ಎಂದು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಳು. ನೀವು ಹಣ ತರಲು ಒಳಗೆ ಹೋದ್ರೆ ನಿಮ್ಮ ಮನೆಯಲ್ಲಿರುವ ವಸ್ತುಗಳು ಅಥವಾ ಮಗುವನ್ನು ಕದ್ದು ಪರಾರಿಯಾಗುತ್ತಿದ್ದಳು. ಈಕೆ ಹೆಚ್ಚಾಗಿ ಬುರ್ಖಾ ಹಾಕಿಕೊಂಡೆ ಮನೆಗಳಿಗೆ ಎಂಟ್ರಿ ಕೊಡ್ತಾಳೆ. ಹೀಗಾಗಿ ಸಿಸಿಟಿವಿಯಲ್ಲೂ ಈಕೆ ಯಾರು ಅನ್ನೋದೆ ಗೊತ್ತಾಗೋದಿಲ್ಲ. ಈ ಹಿಂದೆ ಮೊಬೈಲ್, ಹಣ ಕದ್ದು ಎಸ್ಕೇಪ್ ಆಗ್ತಿದ್ದಳು. ಅಲ್ಲದೆ ರಾತ್ರಿಯಾಗ್ತಿದ್ದಂತೆ ಚಾಕು, ಚೂರಿ ತೋರಿಸಿ ರಾಬರಿ ಕೂಡ ಮಾಡುತ್ತಿದ್ದಳು. ಈಗ ಮಕ್ಕಳನ್ನೂ ಕದಿಯುತ್ತಿದ್ದಾಳೆ.

ಇದನ್ನೂ ಓದಿ: ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ

ಈ ಹಿಂದೆ ಕೂಡ ಹಲವು ಮಕ್ಕಳನ್ನ ಕಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರಿಗೆ ಅನುಮಾನ ಬಂದಿದೆ. ಸದ್ಯ ಈಗ ಕದ್ದ ಮಗುವನ್ನ ಯಾರಿಗೆ ಕೊಡ್ತಿದ್ಲೂ ಅನ್ನೋದನರ ಬಗ್ಗೆ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ‌ನಂದಿನಿ ಅಲಿಯಾಸ್ ಆಯೇಷಾ ಇತ್ತೀಜೆಗೆ ಕದ್ದಿದ್ದ ಮಗುವನ್ನ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಒಂದು ತಿಂಗಳ ಮಗುವಿಗೆ ಹಾಲು ಕೊಡೋದರ ಬದಲು ಉಪ್ಪಿಟ್ಟು ಕೊಟ್ಟಿದ್ದಳು. ಮಗು ಅಳುವುದನ್ನ ನೋಡಿದ ಸ್ಥಳೀಯರು ಅನುಮಾನಗೊಂಡು ಮನೆಗೆ ನುಗ್ಗಿ ಮಗುವನ್ನ ಹುಡುಕಲು ಸಹಾಯ ಮಾಡಿದ್ದಾರೆ. ಸದ್ಯ ಚಾಲಾಕಿ ಕಳ್ಳಿಯನ್ನ ಕಲಾಸಿಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:22 am, Wed, 29 March 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ