AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಕಳ್ಳಿಯ ಸುಳಿವು ಕೊಟ್ಟ ಉಪ್ಪಿಟ್ಟು: ಮಗು ಕಳ್ಳತನ ಮಾಡಿದ ಆರೋಪಿ ಹಿಸ್ಟರಿಯೇ ಭಯಾನಕ

ಈ ಮಕ್ಕಳ ಕಳ್ಳಿ ಕಳ್ಳತನ ಮಾಡಲು ಮನೆಗೆ ಎಂಟ್ರಿ ಕೊಡುವ ರೀತಿ ಕೇಳಿದ್ರೆ ಎಂತವರೂ ಶಾಕ್ ಆಗ್ತಾರೆ. ಈಕೆ ಮನೆ ಬಾಗಿಲಿಗೆ ಡೋನೆಷನ್ ಕೇಳ್ಕೊಂಡು ಬಂದು ಪುಟ್ಟ ಪುಟ್ಟ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದಳಂತೆ.

ಮಗು ಕಳ್ಳಿಯ ಸುಳಿವು ಕೊಟ್ಟ ಉಪ್ಪಿಟ್ಟು: ಮಗು ಕಳ್ಳತನ ಮಾಡಿದ ಆರೋಪಿ ಹಿಸ್ಟರಿಯೇ ಭಯಾನಕ
ಆರೋಪಿತೆ ನಂದಿನಿ ಅಲಿಯಾಸ್ ಆಯೇಷಾ
ಆಯೇಷಾ ಬಾನು
|

Updated on:Mar 29, 2023 | 9:25 AM

Share

ಬೆಂಗಳೂರು: ಮನೆಯಲ್ಲಿ ಮಲಗಿದ್ದ ನವಜಾತ ಹೆಣ್ಣು ಮಗುವನ್ನ ಕದ್ದೊಯ್ದಿದ್ದ(Child Theft) ಪ್ರಕರಣಕ್ಕೆ ಸಂಬಂಧಿಸಿ ಮಗು ಕಳ್ಳತನ ಮಾಡಿದ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದು ಈಕೆಯ ಭಯಾನಕ ಹಿಸ್ಟರಿ ಬಯಲಾಗಿದೆ. ಈ ಮಕ್ಕಳ ಕಳ್ಳಿ ಕಳ್ಳತನ ಮಾಡಲು ಮನೆಗೆ ಎಂಟ್ರಿ ಕೊಡುವ ರೀತಿ ಕೇಳಿದ್ರೆ ಎಂತವರೂ ಶಾಕ್ ಆಗ್ತಾರೆ. ಈಕೆ ಮನೆ ಬಾಗಿಲಿಗೆ ಡೋನೆಷನ್ ಕೇಳ್ಕೊಂಡು ಬಂದು ಪುಟ್ಟ ಪುಟ್ಟ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದಳಂತೆ. ಈ ಹಿಂದೆ ಸಣ್ಣ ಪುಟ್ಟ ಪ್ರಕರಣಗಳಲ್ಲಿ ನಂದಿನಿ ಅಲಿಯಾಸ್ ಆಯೇಷಾ ಪೊಲೀಸರ ಅತಿಥಿಯಾಗಿದ್ದಳು.

ಡೋನೆಷನ್ ಕೇಳ್ಕೊಂಡು ಮನೆ ಬಾಗಿಲಿಗೆ ಬಂದರೆ ಎಚ್ಚರ

ಕಳ್ಳಿ ಆಯೇಷಾ, ಯಾವುದೋ ಒಂದು ಸಂಸ್ಥೆಯ ಬ್ರೋಷರ್ ಹಿಡ್ಕೊಂಡು ಮನೆ ಬಾಗಿಲು ತಟ್ಟುತ್ತಿದ್ದಳು. ಈ ಸಂಸ್ಥೆಗೆ ಧನ ಸಹಾಯ ಮಾಡಿ ಎಂದು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಳು. ನೀವು ಹಣ ತರಲು ಒಳಗೆ ಹೋದ್ರೆ ನಿಮ್ಮ ಮನೆಯಲ್ಲಿರುವ ವಸ್ತುಗಳು ಅಥವಾ ಮಗುವನ್ನು ಕದ್ದು ಪರಾರಿಯಾಗುತ್ತಿದ್ದಳು. ಈಕೆ ಹೆಚ್ಚಾಗಿ ಬುರ್ಖಾ ಹಾಕಿಕೊಂಡೆ ಮನೆಗಳಿಗೆ ಎಂಟ್ರಿ ಕೊಡ್ತಾಳೆ. ಹೀಗಾಗಿ ಸಿಸಿಟಿವಿಯಲ್ಲೂ ಈಕೆ ಯಾರು ಅನ್ನೋದೆ ಗೊತ್ತಾಗೋದಿಲ್ಲ. ಈ ಹಿಂದೆ ಮೊಬೈಲ್, ಹಣ ಕದ್ದು ಎಸ್ಕೇಪ್ ಆಗ್ತಿದ್ದಳು. ಅಲ್ಲದೆ ರಾತ್ರಿಯಾಗ್ತಿದ್ದಂತೆ ಚಾಕು, ಚೂರಿ ತೋರಿಸಿ ರಾಬರಿ ಕೂಡ ಮಾಡುತ್ತಿದ್ದಳು. ಈಗ ಮಕ್ಕಳನ್ನೂ ಕದಿಯುತ್ತಿದ್ದಾಳೆ.

ಇದನ್ನೂ ಓದಿ: ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ

ಈ ಹಿಂದೆ ಕೂಡ ಹಲವು ಮಕ್ಕಳನ್ನ ಕಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರಿಗೆ ಅನುಮಾನ ಬಂದಿದೆ. ಸದ್ಯ ಈಗ ಕದ್ದ ಮಗುವನ್ನ ಯಾರಿಗೆ ಕೊಡ್ತಿದ್ಲೂ ಅನ್ನೋದನರ ಬಗ್ಗೆ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ‌ನಂದಿನಿ ಅಲಿಯಾಸ್ ಆಯೇಷಾ ಇತ್ತೀಜೆಗೆ ಕದ್ದಿದ್ದ ಮಗುವನ್ನ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಒಂದು ತಿಂಗಳ ಮಗುವಿಗೆ ಹಾಲು ಕೊಡೋದರ ಬದಲು ಉಪ್ಪಿಟ್ಟು ಕೊಟ್ಟಿದ್ದಳು. ಮಗು ಅಳುವುದನ್ನ ನೋಡಿದ ಸ್ಥಳೀಯರು ಅನುಮಾನಗೊಂಡು ಮನೆಗೆ ನುಗ್ಗಿ ಮಗುವನ್ನ ಹುಡುಕಲು ಸಹಾಯ ಮಾಡಿದ್ದಾರೆ. ಸದ್ಯ ಚಾಲಾಕಿ ಕಳ್ಳಿಯನ್ನ ಕಲಾಸಿಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:22 am, Wed, 29 March 23

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ