ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು. ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ […]

ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?
ಸಾಧು ಶ್ರೀನಾಥ್​

Updated on: May 10, 2020 | 7:49 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು.

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಫೋಸಿಸ್ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕೊರೊನಾದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ.

Published On - 7:09 pm, Sun, 10 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us