AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infosys: ತಾಂತ್ರಿಕ ಶಿಕ್ಷಣ ಇಲಾಖೆಗೆ 15 ಸಾವಿರ ಕಂಪ್ಯೂಟರ್ ನೀಡಿದ ಇನ್ಫೋಸಿಸ್; ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು, ಬೋಧಕರಿಗೆ ಉಪಯುಕ್ತ

ಇನ್ಫೋಸಿಸ್ ಸಂಸ್ಥೆ, ರೋಟರಿ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆಯ ನಡುವೆ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸಹಿ ಮಾಡಿದ್ದಾರೆ. ಇನ್ಫೋಸಿಸ್, ತಾಂತ್ರಿಕ ಶಿಕ್ಷಣ ಇಲಾಖೆಗೆ 15 ಸಾವಿರ ಕಂಪ್ಯೂಟರ್ ದೇಣಿಗೆ ನೀಡಿದೆ.

Infosys: ತಾಂತ್ರಿಕ ಶಿಕ್ಷಣ ಇಲಾಖೆಗೆ 15 ಸಾವಿರ ಕಂಪ್ಯೂಟರ್ ನೀಡಿದ ಇನ್ಫೋಸಿಸ್; ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು, ಬೋಧಕರಿಗೆ ಉಪಯುಕ್ತ
ಡಿ.ಸಿ.ಟಿ.ಇ.-ಇನ್ಫೊಸಿಸ್ ಒಡಂಬಡಿಕೆಗೆ ಅಂಕಿತ
TV9 Web
| Updated By: ಆಯೇಷಾ ಬಾನು|

Updated on:Oct 27, 2021 | 4:01 PM

Share

ಬೆಂಗಳೂರು: ಜಗತ್ತಿನಲ್ಲಿ ಹೆಸರು ಮಾಡಿರುವ ಇನ್ಫೋಸಿಸ್ ಸಂಸ್ಥೆ 15 ಸಾವಿರ ಕಂಪ್ಯೂಟರ್ಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಗೆ ಕಾಣಿಕೆಯಾಗಿ ನೀಡಿದೆ. ಇನ್ಫೋಸಿಸ್ ಸಂಸ್ಥೆ, ರೋಟರಿ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆಯ ನಡುವೆ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸಹಿ ಮಾಡಿದ್ದಾರೆ. ಇನ್ಫೋಸಿಸ್, ತಾಂತ್ರಿಕ ಶಿಕ್ಷಣ ಇಲಾಖೆಗೆ 15 ಸಾವಿರ ಕಂಪ್ಯೂಟರ್ ದೇಣಿಗೆ ನೀಡಿದೆ.

ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಪಯುಕ್ತವಾಗುವುದರೊಂದಿಗೆ ವಿದ್ಯಾರ್ಥಿಗಳ ಕಲಿಕಾ ರೀತಿಯಲ್ಲಿ ಮಹತ್ವದ ಪರಿವರ್ತನೆ ಉಂಟುಮಾಡುವ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು (ಡಿ.ಸಿ.ಟಿ.ಇ.) ಮುಂಚೂಣಿ ಐಟಿ ಕಂಪನಿ ಇನ್ಫೋಸಿಸ್ ಜತೆ ಬುಧವಾರ ಸಹಿ ಹಾಕಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ಡಿ.ಸಿ.ಟಿ.ಇ. ಯ ‘ಹೆಲ್ಪ್ ಎಜುಕೇಟ್’ ಉಪಕ್ರಮದಡಿಯ ಈ ಒಡಂಬಡಿಕೆಯನ್ನು ವಿಧಾನಸೌಧದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು. ಸರ್ಕಾರದ ಪರವಾಗಿ ಡಿಸಿಟಿಇ ಆಯುಕ್ತ ಪಿ.ಪ್ರದೀಪ್ ಮತ್ತು ಇನ್ಫೋಸಿಸ್ ಹಿರಿಯ ಉಪಾಧ್ಯಕ್ಷ (ಶಿಕ್ಷಣ ಮತ್ತು ತರಬೇತಿ) ತಿರುಮಲ ಆರೋಹಿ ಅವರು ಒಪ್ಪಂದ ಪತ್ರಗಳಿಗೆ ಸಹಿ ಹಾಕಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಶ್ವತ್ಥ ನಾರಾಯಣ ಅವರು, “ಈ ಒಪ್ಪಂದವು ಮೂರು ಭಾಗಗಳನ್ನು ಒಳಗೊಂಡಿದೆ. ಮೊದಲಿಗೆ, ಇನ್ಫೋಸಿಸ್ ಕಂಪನಿಯು ರೂ 35 ಕೋಟಿ ವೆಚ್ಚದಲ್ಲಿ ರೂಪಿಸಿರುವ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಡಿಜಿಟಲ್ ವೇದಿಕೆಯಲ್ಲಿರುವ 3900ಕ್ಕೂ ಹೆಚ್ಚಿನ ಕೋರ್ಸ್ ಗಳು ಮತ್ತು 1.6 ಲಕ್ಷ ಕಲಿಕಾ ಸಂಪನ್ಮೂಲಗಳನ್ನು 5 ಲಕ್ಷ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಚಿತವಾಗಿ ಲಭ್ಯವಾಗಿಸಲಿದೆ. ಎರಡನೆಯದಾಗಿ, ಕಂಪನಿಯು ಬೋಧಕರ ತರಬೇತಿಯಲ್ಲಿ ಸಹಕರಿಸಲಿದೆ. ಮೂರನೆಯದಾಗಿ, ಕಂಪನಿಯು 15,000 ಕಂಪ್ಯೂಟರುಗಳನ್ನು ದೇಣಿಗೆ ಕೊಡುವ ಮೂಲಕ ಕಾಲೇಜುಗಳ ಡಿಜಿಟಲ್ ಮೂಲಸೌಕರ್ಯವನ್ನು ಸದೃಢಗೊಳಿಸಲಿದೆ” ಎಂದು ವಿವರಿಸಿದರು.

ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ತಯಾರಿಗೆ ಸಹಾಯಕ ಈ ಒಪ್ಪಂದವು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಆಶಯದಂತೆ ಸಂಯೋಜಿತ ಕಲಿಕೆಗೆ (ಬ್ಲೆಂಡೆಂಡ್ ಲರ್ನಿಂಗ್) ಮತ್ತು ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಪೂರಕವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

“ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ವೇದಿಕೆಯು ವರ್ಚುಯಲ್ ಪ್ರಯೋಗಾಲಯಗಳು, ಗೇಮಿಫಿಕೇಷನ್ ಮತ್ತಿತರ ಅಂಶಗಳನ್ನು ಒಳಗೊಂಡು ಆಸಕ್ತಿದಾಯಕವಾಗಿದೆ. ಇದು ಉದ್ಯಮ ಪರಿಣತರೊಂದಿಗೆ ಸಂಪರ್ಕ ಕಲ್ಪಿಸಲು ಅನುವು ಮಾಡಿಕೊಡುತ್ತದೆ. ಜೊತೆಗೆ ಉದ್ಯಮಕ್ಕೆ ಬೇಕಾದ ಕೌಶಲಗಳು ಹಾಗೂ ವಿದ್ಯಾರ್ಥಿಗಳು ಕೋರ್ಸ್ ಗಳಲ್ಲಿ ಕಲಿಯುವ ಕೌಶಲಗಳ ನಡುವಿನ ಕಂದಕವನ್ನು ನಿವಾರಿಸಲು ಅನುವು ಮಾಡಿಕೊಡುತ್ತದೆ. ಇದರಲ್ಲಿರುವ 1.6 ಲಕ್ಷ ಕಲಿಕಾ ಸಂಪನ್ಮೂಲಗಳು ಆಡಿಯೊ, ವಿಡಿಯೊ, ಆನಿಮೇಷನ್ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳ ಅರ್ಥಪೂರ್ಣ ಕಲಿಕೆಗೆ ಸಹಕಾರಿಯಾಗಿವೆ” ಎಂದು ಅವರು ಹೇಳಿದರು.

ಒಪ್ಪಂದದ ಪ್ರಕಾರ ಬೋಧಕರ ನಿಯಮಿತ ತರಬೇತಿಯಲ್ಲಿ ಇನ್ಫೋಸಿಸ್ ಭಾಗಿಯಾಗಲಿದ್ದು, ಈಗ ಮೊದಲನೇ ತಂಡದ 200 ಬೋಧಕರಿಗೆ ಮೈಸೂರು ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಸದ್ಯದಲ್ಲೇ ತರಬೇತಿ ಆರಂಭವಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಸರ್ಕಾರಿ ತಾಂತ್ರಿಕ ಕಾಲೇಜುಗಳಿಗೆ ಒಟ್ಟು 30,000 ಕಂಪ್ಯೂಟರುಗಳ ಅಗತ್ಯವಿತ್ತು. ಈಗ ಇನ್ಫೊಸಿಸ್ 15,000 ಕಂಪ್ಯೂಟರುಗಳನ್ನು ನೀಡುವ ಮೂಲಕ 27,000 ಕಂಪ್ಯೂಟರುಗಳು ಲಭ್ಯವಾದಂತೆ ಆಗಿವೆ. ಇದರಿಂದಾಗಿ ಸರ್ಕಾರಿ ಡಿಪ್ಲೊಮಾ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಶೇ 90ರಷ್ಟು ಕಂಪ್ಯೂಟರ್ ಅಗತ್ಯ ಪೂರೈಕೆಯಾದಂತೆ ಆಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಉತ್ತೇಜನ ಈಗ ಸ್ಪ್ರಿಂಗ್ ಬೋರ್ಡ್ ಡಿಜಿಟಲ್ ವೇದಿಕೆಗಾಗಿ 35 ಕೋಟಿ ರೂಪಾಯಿ ವೆಚ್ಚ ಮಾಡಿರುವ ಇನ್ಫೊಸಿಸ್, ಮುಂದಿನ 5ರಿಂದ 10 ವರ್ಷಗಳ ಅವಧಿಯಲ್ಲಿ ಇನ್ನೂ 750 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡುವ ಯೋಜನೆ ಹೊಂದಿದೆ ಎಂದೂ ಹೇಳಿದರು. ಈ ಒಡಂಬಡಿಕೆ ಏರ್ಪಟ್ಟಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್ ಪ್ರೋಗ್ರಾಮ್ ಮ್ಯಾನೇಜರ್ ಕಿರಣ್ ಎನ್.ಜಿ. ಅವರು, ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಇದು ಉತ್ತೇಜನ ನೀಡುತ್ತದೆ ಎಂದರು. ಜೊತೆಗೆ, ಯುವ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ರಾಷ್ಟ್ರೀಯ ಶಿಕ್ಷಣ ನೀತಿಯು ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.

“ಇನ್ಫೊಸಿಸ್ ಕಂಪನಿಯು ತನ್ನ ಸಿಬ್ಬಂದಿಯ ಸಾಮರ್ಥ್ಯ ವೃದ್ಧಿ, ಜಾಗತಿಕ ಗುಣಮಟ್ಟದ ನಿರಂತರ ಕಲಿಕೆ ಹಾಗೂ ಪ್ರತಿಭಾ ವೃದ್ಧಿಗೆ ಮೊದಲಿನಿಂದಲೂ ಒತ್ತು ಕೊಡುತ್ತಾ ಬಂದಿದೆ. ಈಗ ಒಡಂಬಡಿಕೆಯ ಮೂಲಕ ಅದನ್ನು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಅವಕಾಶವಾಗಿದೆ” ಎಂದು ಸಂಸ್ಥೆಯ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಸಿಒಒ) ಪ್ರವೀಣ್ ರಾವ್ ವಿವರಿಸಿದರು.

ಈ ಒಡಂಬಡಿಕೆಯ ಅನುಷ್ಠಾನದಲ್ಲಿ ಕೈಜೋಡಿಸಿರುವ ರೋಟರಿ ಸಂಸ್ಥೆಯು, ಕಂಪ್ಯೂಟರುಗಳನ್ನು ಕಾಲೇಜುಗಳಿಗೆ ತಲುಪಿಸಿ ಅವನ್ನು ಅಳವಡಿಸುವ ಕಾರ್ಯವನ್ನು ಮಾಡಲಿದೆ. ಜೊತೆಗೆ, ಕಂಪ್ಯೂಟರುಗಳಿಗೆ ಆಪರೇಟಿಂಗ್ ಸಿಸ್ಟಮ್ (ಕಾರ್ಯಾಚರಣೆ ವ್ಯವಸ್ಥೆ) ಹಾಗೂ ಅಗತ್ಯ ಸಾಫ್ಟ್ ವೇರ್ ಗಳನ್ನು ಒದಗಿಸಿಕೊಡಲಿದೆ. ಇದೇ ವೇಳೆ, ದೇಣಿಗೆ ಕೊಡಲಾದ 300 ಕಂಪ್ಯೂಟರ್ ಗಳನ್ನು ನಗರದ ಕೆ.ಆರ್.ಸರ್ಕಲ್ ನಲ್ಲಿರುವ ಎಸ್.ಜೆ.ಪಾಲಿಟೆಕ್ನಿಕ್ ಗೆ ಕೊಂಡೊಯ್ಯಲು ಸಿದ್ಧವಾಗಿದ್ದ ವಾಹನಕ್ಕೆ ಸಚಿವರು ಹಸಿರು ನಿಶಾನೆ ತೋರಿದರು. ರೋಟರಿ ಇಂಡಿಯಾ ಲಿಟರರಿ ಮಿಷನ್ ನ ರಾಜೇಂದ್ರ ರಾಯ್, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್, ಡಿಸಿಟಿಇ ಆಯುಕ್ತ ಪ್ರದೀಪ್ ಪಿ ಅವರು ಮಾತನಾಡಿದರು. ಡಿಸಿಟಿಯ ನಿರ್ದೇಶಕ ಮಂಜುನಾಥ್ ಆರ್. ಮತ್ತು ಜಂಟಿ ನಿರ್ದೇಶಕ ಶಿವಶಂಕರ್ ನಾಯ್ಕ್ ಎಲ್. ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Transport employees: ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

Published On - 3:54 pm, Wed, 27 October 21

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು