AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಅತಿರೇಕ ವರ್ತನೆ: ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು; ವಿಡಿಯೋ ವೈರಲ್​

ಬೆಂಗಳೂರಿನ ಕಡೆಗೆ ಬರುವ ಹೆಬ್ಬಾಳ ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ​ವಾಹನದಿಂದ ಕೆಳೆಗೆ ಇಳಿದ ಇಟಿಯಾಸ್ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಆಗ ಚಾಲಕ ಇನ್ನೋವಾ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್ ಚಾಲಕ ದಾರಿ ಬಿಟ್ಟಿಲ್ಲ. ಮುಂದೇನಾಯ್ತು? ಇಲ್ಲಿದೆ ಓದಿ..

ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Dec 04, 2023 | 12:35 PM

Share

ಬೆಂಗಳೂರು, (ಡಿಸೆಂಬರ್ 04): ವ್ಯಕ್ತಿಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕಡೆಗೆ ಬರುವ ಹೆಬ್ಬಾಳ (Hebbal) ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ಇಟಿಯಾಸ್​ ವಾಹನದ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಈ ವೇಳೆ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್​ ವಾಹನ ಚಾಲಕ ಪಕ್ಕಕ್ಕೆ ಹೋಗಿಲ್ಲ. ಆಗ ಚಾಲಕ ಇನ್ನೋವಾ ಕಾರಿನಿಂದ, ಇಟಿಯಾಸ್​ ಚಾಲಕನನ್ನು ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋಗಿದ್ದಾನೆ.

ಬಳಿಕ ಕಾರು ನಿಲ್ಲಿಸಿ ಚಾಲಕ ಇಟಿಯಾಸ್​ ವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ದೃಶ್ಯಾವಳಿಗಳು ಕಾರಿನ ಡ್ಯಾಶ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಪ್ರದೀಪ್​ ಹೆರಳೆ ಎಂಬುವರು ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿ ಬೆಂಗಳೂರು ಸಂಚಾರ ಪೊಲೀಸರಿಗೆ ಟ್ಯಾಗ್​ ಮಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

“ಈ ಬಗ್ಗೆ ಅಂದು ಟ್ರಾಫಿಕ್​ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಗಾಡಿಯಲ್ಲಿ ಪ್ಯಾಸೆಂಜರ್ ಇದ್ದರೂ ಕೂಡ ಕೆಎ 05, ಎಎಲ್ 7999 ವಾಹನ ಚಾಲಕನ ಅತಿರೇಕದ ವರ್ತನೆ ತೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:28 pm, Mon, 4 December 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ