AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಅತಿರೇಕ ವರ್ತನೆ: ಹೆಬ್ಬಾಳ ಫ್ಲೈ ಓವರ್ ಮೇಲೆ​​ ವ್ಯಕ್ತಿಯನ್ನು ನೂಕಿಕೊಂಡು ಹೋದ ಕಾರು; ವಿಡಿಯೋ ವೈರಲ್​

ಬೆಂಗಳೂರಿನ ಕಡೆಗೆ ಬರುವ ಹೆಬ್ಬಾಳ ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ​ವಾಹನದಿಂದ ಕೆಳೆಗೆ ಇಳಿದ ಇಟಿಯಾಸ್ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಆಗ ಚಾಲಕ ಇನ್ನೋವಾ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್ ಚಾಲಕ ದಾರಿ ಬಿಟ್ಟಿಲ್ಲ. ಮುಂದೇನಾಯ್ತು? ಇಲ್ಲಿದೆ ಓದಿ..

ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Dec 04, 2023 | 12:35 PM

Share

ಬೆಂಗಳೂರು, (ಡಿಸೆಂಬರ್ 04): ವ್ಯಕ್ತಿಯೋರ್ವನನ್ನು ಚಾಲಕ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕಡೆಗೆ ಬರುವ ಹೆಬ್ಬಾಳ (Hebbal) ಫ್ಲೈ ಓವರ್ ಮೇಲೆ ಇಟಿಯಾಸ್ ವಾಹನವನ್ನು ನಿಲ್ಲಿಸಲಾಗಿತ್ತು. ಇಟಿಯಾಸ್​ ವಾಹನದ ಚಾಲಕ ಇದೇ ಫ್ಲೈ ಓವರ್​ ಮೇಲೆ ಬರುತ್ತಿದ್ದ ಇನ್ನೋವಾ ಕಾರಿಗೆ ಅಡ್ಡ ಹೋಗಿದ್ದಾನೆ. ಈ ವೇಳೆ ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಆದರೂ ಕೂಡ ಇಟಿಯಾಸ್​ ವಾಹನ ಚಾಲಕ ಪಕ್ಕಕ್ಕೆ ಹೋಗಿಲ್ಲ. ಆಗ ಚಾಲಕ ಇನ್ನೋವಾ ಕಾರಿನಿಂದ, ಇಟಿಯಾಸ್​ ಚಾಲಕನನ್ನು ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋಗಿದ್ದಾನೆ.

ಬಳಿಕ ಕಾರು ನಿಲ್ಲಿಸಿ ಚಾಲಕ ಇಟಿಯಾಸ್​ ವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ದೃಶ್ಯಾವಳಿಗಳು ಕಾರಿನ ಡ್ಯಾಶ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಪ್ರದೀಪ್​ ಹೆರಳೆ ಎಂಬುವರು ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿ ಬೆಂಗಳೂರು ಸಂಚಾರ ಪೊಲೀಸರಿಗೆ ಟ್ಯಾಗ್​ ಮಾಡಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

“ಈ ಬಗ್ಗೆ ಅಂದು ಟ್ರಾಫಿಕ್​ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಗಾಡಿಯಲ್ಲಿ ಪ್ಯಾಸೆಂಜರ್ ಇದ್ದರೂ ಕೂಡ ಕೆಎ 05, ಎಎಲ್ 7999 ವಾಹನ ಚಾಲಕನ ಅತಿರೇಕದ ವರ್ತನೆ ತೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:28 pm, Mon, 4 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ