AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸೋಮಣ್ಣ ಪುತ್ರ-ನಟ ಸೃಜನ್ ಲೋಕೇಶ್ ರಾಜಿ ಸಂಧಾನ? ಬೂದಿಮುಚ್ಚಿದ ಕೆಂಡದಂತಿರುವ ಪ್ರಕರಣ

ಹೊಡೆದಾಟದ ಘಟನೆ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು, ಕೇಸ್ ಏನೂ ಅಗಿಲ್ಲಾವಾದರೂ ಸಹ ವಿಚಾರ ಬೂದಿಮುಚ್ಚಿದ ಕೆಂಡದಂತೆ ಇತ್ತು. ಇದೇ ಕಾರಣಕ್ಕೆ ಸಚಿವ ಸೋಮಣ್ಣ ಹಾಗೂ ಕಿಂಗ್ಸ್ ಕ್ಲಬ್ ನ ರವಿ ಇಬ್ಬರೂ ಚಂದ್ರಾ ಲೇಔಟ್ ನಲ್ಲಿ ಎಂಎಲ್ ಸಿ ಒಬ್ಬರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಸಂಧಾನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸೋಮಣ್ಣ ಪುತ್ರ-ನಟ ಸೃಜನ್ ಲೋಕೇಶ್ ರಾಜಿ ಸಂಧಾನ? ಬೂದಿಮುಚ್ಚಿದ ಕೆಂಡದಂತಿರುವ ಪ್ರಕರಣ
ಸಚಿವ ಸೋಮಣ್ಣ ಪುತ್ರ-ನಟ ಸೃಜನ್ ಲೋಕೇಶ್ ರಾಜಿ ಸಂಧಾನ? ಬೂದಿಮುಚ್ಚಿದ ಕೆಂಡದಂತಿರುವ ಪ್ರಕರಣ
TV9 Web
| Edited By: ಸಾಧು ಶ್ರೀನಾಥ್​|

Updated on:Nov 03, 2022 | 2:18 PM

Share

ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳದ್ದು ಬೇರೆಯದ್ದೇ ರೀತಿಯ ಸಂಬಂಧವಿರುತ್ತದೆ. ಅಲ್ಲಿ ಇದ್ದರೆ ಅತೀ ಬಾಂಧವ್ಯ ಇರುತ್ತೆ, ಇಲ್ಲಾ… ಗಲಾಟೆ ಇದ್ದೇ ಇರುತ್ತೆ! ಸದ್ಯ ಈಗ ಸಚಿವ ಸೋಮಣ್ಣ ಮಗ ಹಾಗೂ ಸೃಜನ್ ಲೋಕೇಶ್ ಟೀಮ್ ನಡುವೆ ಗಲಾಟೆ ಅಗಿದೆ ಎನ್ನಲಾಗಿದೆ.

ಈಗ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಸೆಲೆಬ್ರಿಟಿಗಳೆಲ್ಲಾ ಸೇರಿ ಅಪ್ಪು ಕಪ್ ಅನ್ನೊ ಹೆಸರಿನ ಒಂದು ಬ್ಯಾಡ್ಮಿಂಟನ್ ಟೂರ್ನಮೆಂಟ್ ಆಯೋಜನೆ ಮಾಡಿದ್ದಾರೆ. ಇಲ್ಲಿ ಸೆಲೆಬ್ರೆಟಿಗಳು ಭಾಗಿಯಾಗಿ ಆಟವಾಡಲು ಎಂಟು ತಂಡಗಳು ಇವೆ. ಈ ಎಂಟು ತಂಡಗಳ ಪೈಕಿ ನಟ ಸೃಜನ್ ಲೋಕೇಶ್ ಅವ್ರ ತಂಡವೂ ಸಹ ಒಂದು. ಈ ಟೀಮ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಮುದ್ದಿನಪಾಳ್ಯದ ಕಿಂಗ್ಸ್ ಕ್ಲಬ್ ನಲ್ಲಿ ಅಭ್ಯಾಸ ನಡೆಸುತ್ತಾರೆ. ಸೋಮವಾರ ಅಭ್ಯಾಸ ನಡೆದ ನಂತ್ರ ಕ್ಲಬ್ ನಲ್ಲಿ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ಜೋರಾಗಿ ಕೂಗಾಡಿದರು ಅನ್ನುವ ಕಾರಣಕ್ಕೆ ಅಲ್ಲಿಗೆ ಗೆಳೆಯರೊಂದಿಗೆ ಬಂದಿದ್ದ ಸಚಿವ ಸೋಮಣ್ಣ ಅವ್ರ ಮಗ ಅರುಣ್ ಸೋಮಣ್ಣ ಟೀಂ ಹಾಗೂ ಸೃಜನ್ ಟೀಮ್ ನಲ್ಲಿ ಇದ್ದ ವಿಕಾಸ್ ಮತ್ತು ಅನಿಲ್ ನಡುವೆ ಗಲಾಟೆ ಅಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. (ವರದಿ: ಪ್ರಜ್ವಲ್)

ಎಂದಿನಂತೆ ಸೋಮವಾರ ಸಹ ರಾತ್ರಿ ಪ್ರಾಕ್ಟೀಸ್ ಮುಗಿಸಿದ್ದ ನಂತ್ರ ಸೃಜನ್ ತಂಡದ ಅನಿಲ್ ವಿಕಾಸ್ ಅವರೆಲ್ಲರೂ ಸೇರಿ ಪಾರ್ಟಿ ಮಾಡಿದ್ದಾರೆ. ಆಗ ಸೃಜನ್ ಸಹ ಅಲ್ಲೆ ಇದ್ದರಂತೆ. ಈ ವೇಳೆ ಜೋರಾಗಿ ಕೂಗಾಡುತ್ತಾ ಎಲ್ಲರೂ ಎಂಜಾಯ್ ಮಾಡ್ತಿದ್ದಾರೆ. ಅದೇ ಟೈಮ್ ನಲ್ಲಿ ಅರುಣ್ ಸೋಮಣ್ಣ ಅವರೂ ಸಹ ಅವ್ರ ಗೆಳೆಯರ ಸಹಿತ ಕಿಂಗ್ಸ್ ಕ್ಲಬ್ ಗೆ ಬಂದಿದ್ದಾರೆ. ಜೋರಾಗಿ ಕೂಗಾಡುತ್ತಿದ್ದವರ ಬಳಿ ಅರುಣ್ ಸೋಮಣ್ಣ ಹುಡುಗರು ಹೋಗಿ ಸ್ವಲ್ಪ ಮೆಲ್ಲಗೆ ಮಾತಾಡ್ರಪ್ಪ ಎಂದಿದ್ದರಂತೆ.

ಕೇಸ್ ಇಲ್ಲಾ ಅದ್ರೂ ರಾಜಿ ಸಂಧಾನದ ಪ್ರಯತ್ನ:

ಈ ವೇಳೆ ವಿಕಾಸ್ ಮತ್ತು ಅನಿಲ್ ಎಂಬುವವರು ಕೆಟ್ಟದಾಗಿ ಮಾತಾಡಿದ್ರಂತೆ. ಬಳಿಕ ಅಲ್ಲಿಗೆ ಅರುಣ್ ಸೋಮಣ್ಣ ಸಹ ಬಂದಿದ್ದಾರೆ‌. ನಂತರ ಮಾತಿಗೆ ಮಾತು ಬೆಳೆದು ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಅದ್ರೆ ಯಾವಾಗ ಗಲಾಟೆ ಶುರು ಆಯ್ತೋ ಆಗ ಅಲ್ಲಿದ್ದ ಸೃಜನ್ ಸೀದಾ ಕ್ಲಬ್ ನ ರೂಮ್ ಗೆ ಹೋಗಿದ್ದಾರೆ. ಸೃಜನ್ ಗಲಾಟೆ ಟೈಮ್ ನಲ್ಲಿ ಹಾಜರು ಇರ್ಲಿಲ್ಲಾ. ಅದ್ರೆ ಈ ಬಗ್ಗೆ ಗಲಾಟೆ ಯಲ್ಲಿ ಭಾಗಿಯಾಗಿದ್ದ ಎರಡೂ ಗುಂಪುಗಳು ಪೈಕಿ ಯಾರೊಬ್ಬರೂ ಸಹ ಪೊಲೀಸ್ ಠಾಣೆ ಗೆ ದೂರು ನೀಡಿಲ್ಲ. ಹೀಗಾಗಿ ಪೊಲೀಸ್ ಠಾಣೆ ಯಲ್ಲಿ ಈ ಬಗ್ಗೆ ಯಾವುದೇ ಕೇಸ್ ದಾಖಲಾಗಿಲ್ಲಾ.

MLC ಒರ್ವರ ಮನೆಯಲ್ಲಿ ಸಂಧಾನ:

ಹೊಡೆದಾಟದ ಘಟನೆ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು, ಕೇಸ್ ಏನೂ ಅಗಿಲ್ಲಾವಾದರೂ ಸಹ ವಿಚಾರ ಬೂದಿಮುಚ್ಚಿದ ಕೆಂಡದಂತೆ ಇತ್ತು. ಇದೇ ಕಾರಣಕ್ಕೆ ಸಚಿವ ಸೋಮಣ್ಣ ಹಾಗೂ ಕಿಂಗ್ಸ್ ಕ್ಲಬ್ ನ ರವಿ ಇಬ್ಬರೂ ಚಂದ್ರಾ ಲೇಔಟ್ ನಲ್ಲಿ ಇರುವ ಎಂಎಲ್ ಸಿ ಒಬ್ಬರ ನಿವಾಸದಲ್ಲಿ ಬುಧವಾರ ಸಂಧಾನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಕೇಸ್ ಅಂತಾ ಹೋಗೊದು ಬೇಡ. ಎಲ್ಲಾರೂ ನಮ್ಮ ಹುಡುಗ್ರೆ ಎಂದು ಮಾತಾನಾಡಿಕೊಂಡು ಬಂದಿದ್ದಾರೆ ಎನ್ನಲಾಗಿದೆ. ಸದ್ಯ ಈ ಬಗ್ಗೆ ಸೋಮಣ್ಣ ಹಾಗೂ ಅರುಣ್ ಇಬ್ಬರೂ ಗಲಾಟೆ ನಡೆದಿಲ್ಲಾ ಎಂದಿದ್ದಾರೆ. ಅದ್ರೆ ಬೆಂಕಿ ಇಲ್ಲದೆ ಹೊಗೆ ಬರುತ್ತಾ ಅನ್ನೊ ಪ್ರಶ್ನೆಗೆ ಯಾರ ಬಳಿಯೂ ಉತ್ತರ ಇಲ್ಲವಾಗಿದೆ.

Published On - 2:17 pm, Thu, 3 November 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ