AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಂಕ್ ಅಂಡ್ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು

ಮೆಡಿಕಲ್ ಚೆಕ್ ಅಪ್ ಮಾಡಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದು, ತಪಾಸಣೆ ವೇಳೆ ಇನ್ಸ್ ಪೆಕ್ಟರ್ ಸಂಜೀವ್ ಮತ್ತು ಉಷಾ ಮದ್ಯಸೇವನೆ ಧೃಡಪಟ್ಟಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿ, ಒನ್ ವೇ ನಲ್ಲಿ ಡ್ರೈವ್ ಮಾಡಿ ಆಕ್ಸಿಡೆಂಡ್ ಮಾಡಿದ್ದಾರೆ.

ಡ್ರಂಕ್ ಅಂಡ್ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು
ಸಿಎಆರ್ ಇನ್ಸ್​​ಪೆಕ್ಟರ್​ ಸಂಜೀವ್​, ಪತ್ನಿ ಉಷಾ
TV9 Web
| Edited By: |

Updated on:Sep 04, 2022 | 9:22 AM

Share

ಬೆಂಗಳೂರು: ನಗರದಲ್ಲಿ ಡ್ರಂಕ್​​​ ಅಂಡ್ ಡ್ರೈವ್ ಮಾಡಿ ಕಾರು ಚಲಾಯಿಸಿ ಇನ್ಸ್​​ಪೆಕ್ಟರ್​​ ವಿರುದ್ಧ ನಿಯಮ ಉಲ್ಲಂಘನೆ ಆರೋಪ ಮಾಡಲಾಗಿದೆ. ನಿನ್ನೆ ರಾತ್ರಿ ಚಾಮರಾಜಪೇಟೆಯಲ್ಲಿ ಘಟನೆ ನಡೆದಿದ್ದು, ಒನ್​ ವೇಯಲ್ಲಿ ಕಾರು ಚಲಾಯಿಸಿ ಸಿಎಆರ್ ಇನ್ಸ್​​ಪೆಕ್ಟರ್​ ಸಂಜೀವ್​. ಪತ್ನಿ ಉಷಾರಿಂದ ಕಿರಿಕ್ ಮಾಡಲಾಗಿದೆ.​​ ನಿನ್ನೆ ರಾತ್ರಿ 12 ಗಂಟೆಯಲ್ಲಿ ಜಾಲಿ ರೈಡ್ ಬಂದಿದ್ದ ಸಂಜೀವ್ ದಂಪತಿ, ಈ ವೇಳೆ ಕಾರು ಚಲಾಯಿಸುತ್ತಿದ್ದ ಪತ್ನಿ ಉಷಾ, ಚಾಮರಾಜಪೇಟೆಯ 6ನೇ ಮುಖ್ಯರಸ್ತೆ ಬಳಿ ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಸಂಜೀವ್ ದಂಪತಿ ಜೊತೆ ಕಾರು ಚಾಲಕ, ಸ್ಥಳೀಯರಿಂದ ಗಲಾಟೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಉಷಾ ದೂರು ನೀಡಿದ್ದಾರೆ. ಸಂಜೀವ್ ದಂಪತಿ ವಿರುದ್ಧ ಸ್ಥಳೀಯರಿಂದಲೂ ಪ್ರತಿದೂರು ನೀಡಲಾಗಿದೆ.

ಡ್ರಿಂಕ್ ಅಂಡ್ ಡ್ರೈವ್:

ಮೆಡಿಕಲ್ ಚೆಕ್ ಅಪ್ ಮಾಡಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದು, ತಪಾಸಣೆ ವೇಳೆ ಇನ್ಸ್ ಪೆಕ್ಟರ್ ಸಂಜೀವ್ ಮತ್ತು ಉಷಾ ಮದ್ಯಸೇವನೆ ಧೃಡಪಟ್ಟಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿ, ಒನ್ ವೇ ನಲ್ಲಿ ಡ್ರೈವ್ ಮಾಡಿ ಆಕ್ಸಿಡೆಂಡ್ ಮಾಡಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್ ಹಿನ್ನಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ದಂಪತಿ ವಿರುದ್ದ ಡಿಡಿ ಕೇಸ್ ದಾಖಲು ಮಾಡಲಾಗಿದೆ.

ಟ್ರಾಫಿಕ್ ಪೊಲೀಸರಿಂದ ಕೆಎಸ್​ಆರ್​​ಟಿಸಿ ಚಾಲಕನ ಮೇಲೆ ಹಲ್ಲೆ:

ಬೆಂಗಳೂರು: ಟ್ರಾಫಿಕ್ ಪೊಲೀಸರಿಂದ ಕೆಎಸ್​ಆರ್​​ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಗರದ ಕಾರ್ಪೊರೇಷನ್ ಸರ್ಕಲ್​ನಲ್ಲಿ ನಡೆದಿದೆ. ಕೆಎಸ್​ಆರ್​​ಟಿಸಿ ಚಾಲಕ ಪ್ರಕಾಶ್ ಮೇಲೆ ಹಲ್ಲೆ ಆರೋಪ ಮಾಡಲಾಗಿದೆ. ಕಾರ್ಪೊರೇಷನ್ ಸರ್ಕಲ್ ಬಳಿ ಚಾಲಕ ಬಸ್​ ನಿಲ್ಲಿಸಿದ್ದ. ಈ ವೇಳೆ ಗಾಡಿ ನಿಲ್ಲಿಸಬೇಡ ಎಂದು ಟ್ರಾಫಿಕ್ ಪಿಸಿ ಹೇಳಿದ್ದಾರೆ. ವಾಹನ ತೆಗೆಯುವುದಾಗಿ ಚಾಲಕ ಹೇಳಿದ್ದು, ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದಾಗ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಪಿಸಿ ಹಲ್ಲೆಯಿಂದಾಗಿ KSRTC ಚಾಲಕ ಪ್ರಕಾಶ್​ ಮೂಗಿಗೆ ಗಾಯವಾಗಿದೆ. ಎಸ್​​.ಜೆ.ಪಾರ್ಕ್ ಠಾಣೆಗೆ ಚಾಲಕ ಪ್ರಕಾಶ್ ದೂರು ನೀಡಿದ್ದಾರೆ.

Published On - 7:14 am, Sun, 4 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ