AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಅಳವಡಿಕೆ, ಇಲ್ಲಿದೆ ಕಾರ್ಯವಿಧಾನ ಮಾಹಿತಿ

ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತ್ತಿವೆ. ಡೆಂಗ್ಯೂ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಡೆಂಗ್ಯೂ ಸೋಂಕಿತರ ಸಂಖ್ಯೆ ಈವರೆಗೆ 10 ಸಾವಿರ ಗಡಿ ದಾಟಿದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ನೂತನ ಹೆಜ್ಜೆ ಇಟ್ಟಿದೆ. ಅದೇನು ಈ ಸುದ್ದಿ ಓದಿ.

ಸೊಳ್ಳೆ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಅಳವಡಿಕೆ, ಇಲ್ಲಿದೆ ಕಾರ್ಯವಿಧಾನ ಮಾಹಿತಿ
ಓವಿ ಟ್ರ್ಯಾಪ್​ ಬಯೋ
Vinayak Hanamant Gurav
| Edited By: |

Updated on: Sep 08, 2024 | 10:40 AM

Share

ಬೆಂಗಳೂರು, ಸೆಪ್ಟೆಂಬರ್​ 08: ಡೆಂಗ್ಯೂ (Dengue), ಮಲೇರಿಯಾ ರೋಗ ಹರಡುವ ಈಡೀಸ್​ ಸೊಳ್ಳೆಗಳ (Aedes Mosquito) ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ನಗರದಲ್ಲಿ ಓವಿ ಟ್ರ್ಯಾಪ್​ ಬಯೋ (Ovitrap Bio) ಸಾಧನವನ್ನು ನಗರದಲ್ಲಿ ಅಳವಡಿಸಲು ಮುಂದಾಗಿದೆ. ಪ್ರಾಯೋಗಿಕವಾಗಿ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್​ ​ಸಾಧನಗಳನ್ನು ಮನೆಗಳಿಗೆ ಅಳವಡಿಸಲಾಗಿದೆ.

ಪ್ರಾಯೋಗಿಕ ಓವಿ ಟ್ರ್ಯಾಪ್​ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಓವಿ ಟ್ರ್ಯಾಪ್​ ಬಯೋ ಅನ್ನು ಮುಂಬೈನ ಧಾರಾವಿ ಸ್ಲಂನಲ್ಲಿ ಈಗಾಗಲೆ ಅಳವಡಿಸಲಾಗಿದ್ದು, ಯಶಸ್ಸು ಕಂಡಿದೆ. ಹೀಗಾಗಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಜಂಟಿಯಾಗಿ ನಗರದಲ್ಲಿ ಓವಿ ಟ್ರ್ಯಾಪ್ ಬಯೋ ಅಳವಡಿಸುತ್ತಿವೆ.

ಓವಿ ಟ್ರ್ಯಾಪ್ ಬಯೋ ಕಾರ್ಯ

ಓವಿ ಟ್ರ್ಯಾಪ್ ಬಯೋ ಮಡಿಕೆ ಆಕಾರದ ಸಾಧನ. ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನು ಆಕರ್ಷಿಸುತ್ತದೆ. ಈಡಿಸ್​ ಸೊಳ್ಳೆಗಳು ಮತ್ತು ಅವುಗಳ ಮೊಟ್ಟೆಗಳನ್ನು ನಾಶಪಡಿಸುತ್ತದೆ. ಓವಿ ಟ್ರ್ಯಾಪ್ ಬಯೋ ಶೇ60 ರಷ್ಟು ಸೊಳ್ಳೆಗಳನ್ನು ನಿಯಂತ್ರಿಸಬಹುದು. ಓವಿ ಟ್ರ್ಯಾಪ್ ಬಯೋ 30 ದಿನ ಕೆಲಸ ಮಾಡುತ್ತೆ.

ಇದನ್ನೂ ಓದಿ: ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ: ಸ್ವಚ್ಛತೆ ಕಾಪಾಡದವರಿಗೆ ದಂಡ

ಸದ್ಯ ಪ್ರಾಯೋಗಿಕವಾಗಿ ಗೋಪಾಲಪುರದ ನಾಲ್ಕು ಬೀದಿಗಳಲ್ಲಿ 20 ಅಡಿಗೆ ಒಂದರಂತೆ ಒಟ್ಟು 120 ಟ್ರ್ಯಾಪ್‌ ಅಳವಡಿಕೆ ಮಾಡಲಾಗಿದೆ. ಸಾಯಂಕಾಲ ಸಂದರ್ಭದಲ್ಲಿ ಸೊಳ್ಳೆಗಳ‌ ಕಾಟ ಹೆಚ್ಚಿಗೆ ಇತ್ತು ಇದೀಗ ಟ್ರ್ಯಾಪ್ ಅಳವಡಿಕೆ ಮಾಡಿದ ಒಂದು ವಾರದಲ್ಲಿಯೇ ಸೊಳ್ಳೆಗಳು ನಿಯಂತ್ರಣ ಆಗಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ಒಟ್ಟಿನಲ್ಲಿ ಪ್ರಾಯೋಗಿಕವಾಗಿ ಅಳವಡಿಸಿದ ಓವಿ ಟ್ರ್ಯಾಪ್ ಬಯೋಗಳಿಂದ ತಕ್ಕ ಮಟ್ಟಿಗೆ ಸೊಳ್ಳೆ ನಿಯಂತ್ರಣ ಆಗಿದೆ. ಒಂದು ವೇಳೆ ಇದು ಯಶಸ್ವಿಯಾದರೆ ಬೆಂಗಳೂರಿನಲ್ಲಿ ಸೊಳ್ಳೆ ನಿಯಂತ್ರಣವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ