AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಲಾ ಆಂಡ್ ಆರ್ಡರ್ ಪೊಲೀಸರ ಬಳಕೆಗೆ ಸೂಚನೆ: ಡಿಜಿ ಐಜಿಪಿ ಅಲೋಕ್ ಮೋಹನ್

Bengaluru News: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಹೆಚ್ಚುತ್ತಿರುವ ಹಿನ್ನೆಲೆ ಇದರ ನಿರ್ಹಹಣೆ ಕುರಿತು ಚರ್ಚಿಸಲು ಇಂದು ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಲಾ ಆಂಡ್ ಆರ್ಡರ್ ಪೊಲೀಸರ ಬಳಕೆಗೆ ಸೂಚನೆ: ಡಿಜಿ ಐಜಿಪಿ ಅಲೋಕ್ ಮೋಹನ್
ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 01, 2023 | 9:05 PM

Share

ಬೆಂಗಳೂರು: ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರದಲ್ಲಿ ಟ್ರಾಫಿಕ್ (Bengaluru Traffic) ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಟ್ರಾಫಿಕ್ ನಿರ್ವಹಣೆಗೆ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರ ಬಳಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಶೇಷವಾಗಿ ಟ್ರಾಫಿಕ್ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವವರ ಬಗ್ಗೆ ಚರ್ಚೆ ಮಾಡಲಾಗಿದೆ. ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ. ಸಂಚಾರ ನಿರ್ವಹಣೆಗೆ ಹೆಚ್ಚುವರಿ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗುವುದು ಎಂದರು.

ಇದನ್ನೂ ಓದಿ: New Traffic Guidelines: ಇನ್ಮುಂದೆ ನಿಮಗೆ ಟ್ರಾಫಿಕ್​ ಪೊಲೀಸರ ಕಿರಿಕಿರಿ ಇಲ್ಲ, ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ಪೀಕ್ ಟೈಮ್​ನಲ್ಲಿ ಟ್ರಾಫಿಕ್ ಹೆಚ್ಚು ಇರುತ್ತದೆ. ಈ ವೇಳೆ ಕಾನೂನು ಸುವ್ಯವಸ್ಥೆ ಪೊಲೀಸರು ಕೂಡ ಫೀಲ್ಡ್​​ನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಲಾ ಆಂಡ್ ಆರ್ಡರ್ ಪೊಲೀಸರನ್ನ ಟ್ರಾಫಿಕ್ ಕೆಲಸಕ್ಕೆ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಕೆಲವು ಸಲ ಟ್ರಾಫಿಕ್ ಪೊಲೀಸರು ಇರಬೇಕಾದರೆ ಕ್ರೈಮ್ ಆಗುತ್ತದೆ. ಈ ವೇಳೆ ಅವರು ಕೂಡಲೇ ಆ್ಯಕ್ಟಿವ್ ಆಗಬೇಕು. ಸರಗಳ್ಳತನ ಸೇರಿ ಕೆಲವು ಕೃತ್ಯಗಳು ಟ್ರಾಫಿಕ್ ಪೊಲೀಸರ ಗಮನದಲ್ಲಿರುತ್ತದೆ. ಕೂಡಲೇ ಆರೋಪಿಗಳನ್ನು ಅವರು ಬೆನ್ನತ್ತಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 1 July 23