BMTC Special Buses: ಐಪಿಎಲ್ ನೋಡಲು ಹೋಗುವವರಿಗೆ ಬಿಎಂಟಿಸಿ ವಿಶೇಷ ಬಸ್​ ಸೇವೆ: ಎಲ್ಲಿಗೆಲ್ಲ ಬಸ್? ಇಲ್ಲಿದೆ ವಿವರ

ಐಪಿಎಲ್​ಗೆ ಬಿಎಂಟಿಸಿ ವಿಶೇಷ ಬಸ್ ಸೇವೆ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಎಲ್ಲ ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಪಂದ್ಯ ವೀಕ್ಷಿಸಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿಶೇಷ ಬಸ್​ಗಳನ್ನು ಓಡಿಸಲು ಬಿಎಂಟಿಸಿ ಮುಂದಾಗಿದೆ. ಎಲ್ಲಿಂದ ಎಲ್ಲಿಗೆ ಬಸ್ ಸೇವೆ ಇರಲಿದೆ ಎಂಬ ವಿವರಗಳು ಇಲ್ಲಿವೆ.

BMTC Special Buses: ಐಪಿಎಲ್ ನೋಡಲು ಹೋಗುವವರಿಗೆ ಬಿಎಂಟಿಸಿ ವಿಶೇಷ ಬಸ್​ ಸೇವೆ: ಎಲ್ಲಿಗೆಲ್ಲ ಬಸ್? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Edited By:

Updated on: Apr 02, 2025 | 10:38 AM

ಬೆಂಗಳೂರು, ಏಪ್ರಿಲ್ 2: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ ವಿರುದ್ಧ ಇಂದು ಐಪಿಎಲ್ ಕ್ರಿಕೆಟ್  (IPL) ಪಂದ್ಯ ನಡೆಯಲಿದೆ. ಪಂದ್ಯ ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸುವುದಾಗಿ ಘೋಷಣೆ ಬೇಡಿದೆ. ಈಗಾಗಲೇ ನಮ್ಮ ಮೆಟ್ರೋ ಕಾರ್ಯಾಚರಣೆ ಸಮಯವನ್ನು ರಾತ್ರಿ 12:30 ರವರೆಗೆ ವಿಸ್ತರಣೆ ಮಾಡಿದೆ. ಇದೀಗ ಬಿಎಂಟಿಸಿ ಕೂಡ ಟಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದೆ.

ಕೇವಲ ಇಂದಿನ ಪಂದ್ಯಕ್ಕೆ ಮಾತ್ರವಲ್ಲದೆ, ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಗಳ ದಿನ ಕೂಡ ಬಿಎಂಟಿಸಿ ವಿಶೇಷ ಬಸ್ಸುಗಳು ಕಾರ್ಯಚರಣೆ ನಡೆಸಲಿವೆ.

ಐಪಿಎಲ್​ಗೆ ಬಿಎಂಟಿಸಿ ವಿಶೇಷ ಬಸ್: ಎಲ್ಲಿಂದ ಎಲ್ಲಿಗೆ ಸ್ಪೆಷಲ್ ಬಸ್?

  • ಎಂ ಚಿನ್ನಸ್ವಾಮಿ ಕ್ರೀಡಾಂಗಣ – ಕಾಡುಗೋಡಿಬಸ್‌ ನಿಲ್ದಾಣ (ಹೆಚ್.ಎ.ಎಲ್‌ರಸ್ತೆ)
  • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-2) – ಸರ್ಜಾಪುರ
  • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-3) – ಎಲೆಕ್ಟ್ರಾನಿಕ್‌ ಸಿಟಿ (ಹೊಸೂರುರಸ್ತೆ)
  • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-4) – ಬನ್ನೇರುಘಟ್ಟ ಮೃಗಾಲಯ.
  • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-7) – ಜನಪ್ರಿಯ ಟೌನ್‌ಷಿಪ್ (ಮಾಗಡಿ ರಸ್ತೆ)
  • ಚಿನ್ನಸ್ವಾಮಿ ಕ್ರೀಡಾಂಗಣ (ಜಿ-10) – ಆರ್.ಕೆ. ಹೆಗಡೆ ನಗರ ಯಲಹಂಕ (ನಾಗವಾರ, ಟ್ಯಾನರಿ ರಸ್ತೆ)
  • ಚಿನ್ನಸ್ವಾಮಿ ಕ್ರೀಡಾಂಗಣ (317 ಜಿ) – ಹೊಸಕೋಟೆ.
  • ಚಿನ್ನಸ್ವಾಮಿ ಕ್ರೀಡಾಂಗಣ (13) – ಬನಶಂಕರಿ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವಗೆಲ್ಲ ಇದೆ ಐಪಿಎಲ್ ಮ್ಯಾಚ್?

ಏಪ್ರಿಲ್ 10, 18, 24 ಮತ್ತು ಮೇ 3, 13 ಹಾಗೂ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ಆಯೋಜನೆಯಾಗಿವೆ. ಈ ಎಲ್ಲ ದಿನಗಳಲ್ಲಿಯೂ ಬಿಎಂಟಿಸಿ ವಿಶೇಷ ಬಸ್ ಸೇವೆ ಇರಲಿದೆ.

ಇದನ್ನೂ ಓದಿ
ಡೀಸೆಲ್​ ಬೆಲೆ ಹೆಚ್ಚಳ: ಕರ್ನಾಟಕದಲ್ಲೀಗ 1 ಲೀಟರ್​ ಡೀಸೆಲ್​ ಬೆಲೆ ಎಷ್ಟು?
ನಮ್ಮ ಮೆಟ್ರೋ ಗುಡ್ ನ್ಯೂಸ್: ಐಪಿಎಲ್ ಪ್ರಯುಕ್ತ ಸಂಚಾರ ಸಮಯ ವಿಸ್ತರಣೆ
ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ
ಸತತ ಎರಡು ಪಂದ್ಯ ಗೆದ್ದ RCBಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?

ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್, ಐಪಿಎಲ್ ಪಂದ್ಯ ಪ್ರಯುಕ್ತ ರಾತ್ರಿ 12.30 ರ ವರಗೆ ಸಂಚಾರ

ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಈಗಾಗಲೇ ಗುಡ್ ನ್ಯೂಸ್ ನೀಡಿದ್ದು, ಐಪಿಎಲ್ ಪಂದ್ಯ ನಡೆಯುವ ದಿನಗಳಲ್ಲಿ ಸಂಚಾರ ಸೇವೆಯನ್ನು ರಾತ್ರಿ 12.30 ರ ವರೆಗೆ ವಿಸ್ತರಣೆ ಮಾಡಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಮಂಗಳವಾರ ತಿಳಿಸಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us