AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Betting: ಇಂದಿನಿಂದ IPL ಆರಂಭ, ಬೆಟ್ಟಿಂಗ್ ತಡೆಗೆ ಪೊಲೀಸರು ಅಲರ್ಟ್

ಇಂದಿನಿಂದ IPL ಆರಂಭವಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಕಮಿಷನರ್ ಸೂಚನೆ ನೀಡಿದ್ದಾರೆ. ನಗರದಾದ್ಯಂತ ಬುಕ್ಕಿಗಳ‌ ಮೇಲೆ ತೀವ್ರ ನಿಗಾ ವಹಿಸಬೇಕು, ಹೋಟೆಲ್, ಲಾಡ್ಜ್ ಗಳ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದ್ದಾರೆ.

IPL Betting: ಇಂದಿನಿಂದ IPL ಆರಂಭ, ಬೆಟ್ಟಿಂಗ್ ತಡೆಗೆ ಪೊಲೀಸರು ಅಲರ್ಟ್
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Mar 22, 2024 | 8:59 AM

Share

ಬೆಂಗಳೂರು, ಮಾರ್ಚ್​.22: ರಾಜ್ಯದಲ್ಲಿ ಒಂದು ಕಡೆ ಲೋಕ ಸಭೆ ಚುನಾವಣೆ (Lok Sabha Election), ಮತ್ತೊಂದೆಡೆ ಐಪಿಎಲ್​ (IPL 2024) ಪಂದ್ಯದ ಕಾವು ಹೆಚ್ಚಾಗುತ್ತಿದೆ. ಸದ್ಯ ಇಂದಿನಿಂದ IPL ಆರಂಭವಾಗುತ್ತಿದ್ದು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. IPL ಪಂದ್ಯ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯುವ ಬಗ್ಗೆ ಮಾಹಿತಿ ಸಿಕ್ಕಿದೆ. ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಬೆಂಗಳೂರು ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಹೋಟೆಲ್ ಹಾಗೂ ಲಾಡ್ಜ್​​​ಗಳ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ (WPL) ಫೈನಲ್​ ಪಂದ್ಯದಲ್ಲಿ ದೆಹಲಿ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಮಹಿಳಾ ಆರ್​ಸಿಬಿ ತಂಡ ಕಪ್​ ಗೆದ್ದಿದೆ. ಹೀಗಾಗಿ ಐಪಿಎಲ್ ಪದ್ಯಗಳ ಮೇಲಿನ ಗಮನ ಹೆಚ್ಚಾಗಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯೋ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಬೆನ್ನಲ್ಲೇ ಎಲ್ಲಾ ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಕಮಿಷನರ್ ಸೂಚನೆ ನೀಡಿದ್ದಾರೆ. ನಗರದಾದ್ಯಂತ ಬುಕ್ಕಿಗಳ‌ ಮೇಲೆ ತೀವ್ರ ನಿಗಾ ವಹಿಸಬೇಕು. ಆಯಾ ಠಾಣಾ ವ್ಯಾಪ್ತಿಯಲ್ಲಿನ ಬುಕ್ಕಿಗಳ ಮೇಲೆ ನಿಗಾ ಇಡಿ. ಈ ಹಿಂದೆ ಬೆಟ್ಟಿಂಗ್ ಕೇಸ್ ಅಲ್ಲಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿರುವವರ ಮೇಲೂ ತೀವ್ರ ನಿಗಾ ಇಡಿ. ಬೆಟ್ಟಿಂಗ್ ಆಡೋಕೆ ಅಂತಾನೆ ಹೋಟೆಲ್, ಲಾಡ್ಜ್ ಗಳಲ್ಲಿ ರೂಂ ಪಡೀತಾರೆ. ಹೀಗಾಗಿ ಹೋಟೆಲ್, ಲಾಡ್ಜ್ ಗಳ ಪರಿಶೀಲನೆ ಮಾಡಬೇಕು. ಎಲ್ಲಾ ಆಯಾಮದಲ್ಲೂ ಮಾಹಿತಿ ಪಡೆಯೋದ್ರ ಜೊತೆಗೆ ಅಲರ್ಟ್ ಆಗಿ ಇರಲು ಸೂಚನೆ ನೀಡಲಾಗಿದೆ.

ಠಾಣಾ ವ್ಯಾಪ್ತಿಯ ಪೊಲೀಸರ ಜೊತೆಗೆ ಸಿಸಿಬಿಯೂ ಫುಲ್ ಅಲರ್ಟ್ ಆಗಿದೆ. ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕುವ ಸಲುವಾಗಿ ಸಿಸಿಬಿಯಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಹಳೇ ಬೆಟ್ಟಿಂಗ್ ಕೇಸಲ್ಲಿ ಬಂಧನ ಆಗಿ ಹೊರಗಡೆ ಇರೋರ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ಐಪಿಎಲ್ ಮೊದಲ ಪಂದ್ಯದಲ್ಲೇ ಆರ್​ಸಿಬಿ, ಚೆನ್ನೈ ತಂಡಗಳು ಸೆಣೆಸಾಡಲಿವೆ. ಚೆನ್ನೈ ತಂಡದ ಕ್ಯಾಪ್ಟನ್ಸಿಯಿಂದ ಚಾಂಪಿಯನ್ ಕ್ಯಾಪ್ಟನ್ ಧೋನಿ ಕೆಳಗಿಳಿದು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಐಪಿಎಲ್ ಮೊದಲ ಪಂದ್ಯ ನಡೆಯಲಿದೆ.

ಚೆನ್ನೈ ತಂಡದ ನೂತನ ನಾಯಕನಾಗಿ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಆದ್ರೂ ಮಾಜಿ ಕ್ಯಾಪ್ಟನ್ ಎಂ.ಎಸ್.ಧೋನಿಯತ್ತಲೇ ಅಭಿಮಾನಿಗಳ ಚಿತ್ತ ನೆಟ್ಟಿದೆ. ಇನ್ನು ಆರ್​ಸಿಬಿ ಮಾಜಿ ನಾಯಕ ಕಿಂಗ್ ಕೊಹ್ಲಿ, ಚೆನ್ನೈನಲ್ಲಿ ಯಾವ ರೀತಿ ಬ್ಯಾಟಿಂಗ್ ಮಾಡ್ತಾರೆ ಅನ್ನೋ ನಿರೀಕ್ಷೆ ಹೆಚ್ಚಿದೆ. ಇತ್ತ ಆರ್​ಸಿಬಿಯಲ್ಲೂ ವಿರಾಟ್ ಕೊಹ್ಲಿಯ ಬ್ಯಾಟಿಂಗ್​ನತ್ತಲೇ ಕ್ರಿಕೆಟ್ ಜಗತ್ತಿನ ಚಿತ್ತನೆಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ