AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಂಗಳೂರಿನಲ್ಲಿ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ವೇಳೆ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳಲ್ಲಿ 22,000ಕ್ಕೂ ಹೆಚ್ಚು ಅಭಿಮಾನಿಗಳು ಮೆಟ್ರೋ ಬಳಸಿದ್ದು, ಸಂಚಾರ ದಟ್ಟಣೆ ತಪ್ಪಿಸಲು ಬಿಎಂಆರ್‌ಸಿಎಲ್ 39 ಹೆಚ್ಚುವರಿ ರೌಂಡ್ ಟ್ರಿಪ್‌ಗಳನ್ನು ಯಶಸ್ವಿಯಾಗಿ ನಡೆಸಿದೆ. ಮುಂದಿನ ಪಂದ್ಯಗಳಿಗೂ ವಿಶೇಷ ಸೌಲಭ್ಯಗಳ ತಯಾರಿ ನಡೆಸಲಾಗಿದೆ.

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!
ನಮ್ಮ ಮೆಟ್ರೋImage Credit source: @OfficialBMRCL
ಕಿರಣ್​ ಸೂರ್ಯ
| Edited By: |

Updated on: Mar 30, 2026 | 9:16 AM

Share

ಬೆಂಗಳೂರು, ಮಾರ್ಚ್​ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ.

ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ ಸುರಕ್ಷಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಬಿಎಂಆರ್‌ಸಿಎಲ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿತ್ತು. ಮೆಜೆಸ್ಟಿಕ್ ಕಡೆಗೆ 13 ಹಾಗೂ ವೈಟ್‌ಫೀಲ್ಡ್ ಕಡೆಗೆ 9 ರೈಲುಗಳು ಸೇರಿದಂತೆ ಒಟ್ಟು 39 ರೌಂಡ್ ಟ್ರಿಪ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ.

ಹೆಚ್ಚುವರಿ ರೈಲುಗಳ ಸಂಚಾರ

ಪರ್ಪಲ್ ಲೈನ್‌ನಲ್ಲಿ 18, ಗ್ರೀನ್ ಲೈನ್‌ನಲ್ಲಿ 15 ಮತ್ತು ಯಲ್ಲೋ ಲೈನ್‌ನಲ್ಲಿ 6 ಹೆಚ್ಚುವರಿ ಸಂಚಾರಗಳನ್ನು ನಡೆಸುವ ಮೂಲಕ ಪ್ರಯಾಣಿಕರ ದಟ್ಟಣೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಪ್ರತಿ ಮೂರು ನಿಮಿಷಕ್ಕೊಮ್ಮೆ ರೈಲು ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳಿಗೂ ಇನ್ನಷ್ಟು ಸೌಲಭ್ಯಗಳನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಇದನ್ನೂ ಓದಿ: ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ಮೆಟ್ರೋರೈಲು ಸಂಚಾರದ ಅವಧಿಯನ್ನು ತಡರಾತ್ರಿ ವರೆಗೆ ವಿಸ್ತರಿಸುತ್ತಿದೆ. ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಗೊಳ್ಳುತ್ತಿದ್ದ ರೈಲು ಸಂಚಾರವನ್ನು ಪಂದ್ಯ ಮುಗಿದ ನಂತರ ಸಾವಿರಾರು ಅಭಿಮಾನಿಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಬರುವ ಹಿನ್ನೆಲೆಯಲ್ಲಿ ವಿಸ್ತರಿಸಲಾಗುತ್ತಿದೆ. ಐಪಿಎಲ್ ಉದ್ಘಾಟನಾ ಪಂದ್ಯದ ದಿನ ರಾತ್ರಿ 2 ಗಂಟೆ ವರೆಗೆ ಮೆಟ್ರೋ ಸಂಚಾರ ವಿಸ್ತರಣೆ ಮಾಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ