IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್ ಎಚ್ಚರಿಕೆ
ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಖಡಕ್ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದರೂ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮಾರ್ಗಸೂಚಿ ರಿಲೀಸ್ ಮಾಡಿದ್ದಾರೆ.
ಪೊಲೀಸರ ಮಾರ್ಗಸೂಚಿಯಲ್ಲಿ ಏನಿದೆ?
ದೊಡ್ಡ ಪಂದ್ಯ. ಅದಕ್ಕಿಂತಲೂ ದೊಡ್ಡ ಜವಾಬ್ದಾರಿ.
ಬೆಂಗಳೂರು ತನ್ನ ತಂಡವನ್ನು ಬೆಂಬಲಿಸಲು ಒಂದಾಗುತ್ತಿರುವಾಗ, ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಮತ್ತು ಸಹ ನಾಗರಿಕರಿಗೆ ಗೌರವ ನೀಡುತ್ತಾ ಸಂಭ್ರಮಿಸಬೇಕಾಗಿ ಬೆಂಗಳೂರು ನಗರ ಪೊಲೀಸ್ ವಿನಂತಿಸುತ್ತದೆ. ನಮ್ಮ ನಗರವನ್ನು ಸುರಕ್ಷಿತವಾಗಿ, ಶಾಂತಿಯುತವಾಗಿ ಮತ್ತು ಹೆಮ್ಮೆಯಿಂದ ಇಡುವ ಆಚರಣೆಯೇ… pic.twitter.com/r6CV4IN0EE
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) May 30, 2026
- ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ
- ಅನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್ಇಡಿ ಸ್ಕ್ರೀನ್ ಅಳವಡಿಸುವಂತಿಲ್ಲ
- ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು
- ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಂತಿ, ಶಿಸ್ತು ಪಾಲಿಸಬೇಕು
- ಸಂಚಾರ ವಿಭಾಗದ ಪೊಲೀಸರು ನೀಡುವ ಸಲಹೆ ಸೂಚನೆ ಪಾಲಿಸಬೇಕು
- ಬೈಕ್ ರ್ಯಾಲಿ, ಅತಿವೇಗದ ಚಾಲನೆ, ಸ್ಟಂಟ್, ಹಾರ್ನ್ ಮಾಡುವಂತಿಲ್ಲ
- ರಸ್ತೆ ತಡೆದು ಸಂಭ್ರಮಾಚರಣೆ ಮಾಡುವಂತಿಲ್ಲವೆಂದು ಪೊಲೀಸರ ಸೂಚನೆ
- ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಬಾರದು
- ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್ ಹಾಕುವಂತಿಲ್ಲ
- ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳಬಾರದು
- ಫಲಿತಾಂಶದ ಹೆಸರಿನಲ್ಲಿ ಬೇರೆ ತಂಡದ ಅಭಿಮಾನಿಗಳನ್ನು ನಿಂದಿಸಬಾರದು
ಇದನ್ನೂ ಓದಿ: ಫೈನಲ್ ಪ್ಲೇಯಿಂಗ್ ಇಲೆವೆನ್; RCB ಮುಂದಿದೆ 2 ಆಯ್ಕೆ
IPL ಫೈನಲ್ ಹಿನ್ನೆಲೆ ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ಪೊಲೀಸರು ಈ ಸೂಚನೆಗಳನ್ನು ಪಾಲಿಸುವಂತೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕ್ರೀಡೆಯನ್ನ ಕ್ರೀಡೆಯಾಗಿ ಸ್ವೀಕರಿಸಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಸೂಚಿಸಲಾಗಿದ್ದು, ಇದನ್ನು ಮೀರಿ ಹುಚ್ಚಾಟ ನಡೆಸಿದರೆ ಕಾನೂನು ಕ್ರಮ ಫಿಕ್ಸ್ ಎಂಬ ಎಚ್ಚರಿಕೆಯನ್ನೂ ನಗರ ಪೊಲೀಸ್ ಆಯುಕ್ತ ಸೀಂಮತ್ ಕುಮಾರ್ ಸಿಂಗ್ ನೀಡಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:53 am, Sun, 31 May 26





