AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಅಮೃತ್​ ಪಾಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ
ಐಪಿಎಸ್ ಅಧಿಕಾರಿ ಅಮೃತ್ ಪೌಲ್
TV9 Web
| Edited By: ವಿವೇಕ ಬಿರಾದಾರ|

Updated on:Jul 15, 2022 | 7:37 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಬಂಧಿತರಾಗಿರುವ ಅಮೃತ್​ ಪಾಲ್​ (IPS Amrit Paul) ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪಾಲ್ ಜುಲೈ 4ರಂದು ಅಮೃತ್​ ಪಾಲ್​ ಬಂಧಿಸಿದ್ದರು.

ಇಂದು ​ಅಮೃತ್​ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್​ ಪಾಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

14 ದಿನ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪಾಲ್  ಪರಪ್ಪನ ಅಗ್ರಹಾರದ ಕ್ವಾರಂಟೈನ್​​​ ಸೆಲ್​​​​ನಲ್ಲಿರಲಿದ್ದಾರೆ.

ಕೆಳಹಂತದ ಅಧಿಕಾರಿಗಳಿಂದ ಅಮೃತ್ ಪಾಲ್ ತನಿಖೆ ಪ್ರಯೋಜನವಿಲ್ಲ: ಹೈಕೋರ್ಟ್​

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ (Regional Forensic Science Laboratory – RFSL) ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

Published On - 5:13 pm, Fri, 15 July 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು