AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಅಮೃತ್​ ಪಾಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ
ಐಪಿಎಸ್ ಅಧಿಕಾರಿ ಅಮೃತ್ ಪೌಲ್
TV9 Web
| Edited By: |

Updated on:Jul 15, 2022 | 7:37 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಬಂಧಿತರಾಗಿರುವ ಅಮೃತ್​ ಪಾಲ್​ (IPS Amrit Paul) ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪಾಲ್ ಜುಲೈ 4ರಂದು ಅಮೃತ್​ ಪಾಲ್​ ಬಂಧಿಸಿದ್ದರು.

ಇಂದು ​ಅಮೃತ್​ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್​ ಪಾಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

14 ದಿನ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪಾಲ್  ಪರಪ್ಪನ ಅಗ್ರಹಾರದ ಕ್ವಾರಂಟೈನ್​​​ ಸೆಲ್​​​​ನಲ್ಲಿರಲಿದ್ದಾರೆ.

ಕೆಳಹಂತದ ಅಧಿಕಾರಿಗಳಿಂದ ಅಮೃತ್ ಪಾಲ್ ತನಿಖೆ ಪ್ರಯೋಜನವಿಲ್ಲ: ಹೈಕೋರ್ಟ್​

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ (Regional Forensic Science Laboratory – RFSL) ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

Published On - 5:13 pm, Fri, 15 July 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ