AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಅಮೃತ್​ ಪಾಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ.

PSI Recruitment Scam: ಐಪಿಎಸ್​ ಅಧಿಕಾರಿ ಅಮೃತ್​ ಪಾಲ್​​​ಗೆ 14 ದಿನ ನ್ಯಾಯಾಂಗ ಬಂಧನ: ಒಂದನೇ ಎಸಿಎಂಎಂ ನ್ಯಾಯಾಲಯ
ಐಪಿಎಸ್ ಅಧಿಕಾರಿ ಅಮೃತ್ ಪೌಲ್
TV9 Web
| Edited By: |

Updated on:Jul 15, 2022 | 7:37 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಬಂಧಿತರಾಗಿರುವ ಅಮೃತ್​ ಪಾಲ್​ (IPS Amrit Paul) ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶ ಹೊರಡಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪಾಲ್ ಜುಲೈ 4ರಂದು ಅಮೃತ್​ ಪಾಲ್​ ಬಂಧಿಸಿದ್ದರು.

ಇಂದು ​ಅಮೃತ್​ ಪಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಮೃತ್​ ಪಾಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ಹೇಳಿದೆ.

14 ದಿನ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪಾಲ್  ಪರಪ್ಪನ ಅಗ್ರಹಾರದ ಕ್ವಾರಂಟೈನ್​​​ ಸೆಲ್​​​​ನಲ್ಲಿರಲಿದ್ದಾರೆ.

ಕೆಳಹಂತದ ಅಧಿಕಾರಿಗಳಿಂದ ಅಮೃತ್ ಪಾಲ್ ತನಿಖೆ ಪ್ರಯೋಜನವಿಲ್ಲ: ಹೈಕೋರ್ಟ್​

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮ್ರಿತ್ ಪಾಲ್ ಅವರ ವಿಚಾರಣೆಯನ್ನು ಕೆಳಹಂತದ ಅಧಿಕಾರಿಗಳು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ನಿನ್ನೆ (ಜುಲೈ 14) ರಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಿಐಡಿ ಪರ ವಕೀಲರು, ಡಿಜಿಪಿ ಮೇಲ್ವಿಚಾರಣೆಯಲ್ಲಿಯೇ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ (Regional Forensic Science Laboratory – RFSL) ಸಿಐಡಿ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಯಿತು. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

Published On - 5:13 pm, Fri, 15 July 22

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?