AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ವೋಟರ್ ಐಡಿ ಸಂಗ್ರಹ ಆರೋಪ; ತನಿಖಾ ಲೋಪ ಪರಿಗಣಿಸಿ, ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಕೋರ್ಟ್ ಸೂಚನೆ

ಶಾಸಕ ಮುನಿರತ್ನ ವಿರುದ್ಧ ವೋಟರ್ ಐಡಿ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆಯಂತೆ IPS ಅಧಿಕಾರಿಯಿಂದ ವರದಿ ಸಲ್ಲಿಕೆಯಾಗಿದೆ. ತನಿಖೆ ಪರಾಮರ್ಶೆ ನಡೆಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗಿದೆ.

ಮುನಿರತ್ನ ವೋಟರ್ ಐಡಿ ಸಂಗ್ರಹ ಆರೋಪ; ತನಿಖಾ ಲೋಪ ಪರಿಗಣಿಸಿ, ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಕೋರ್ಟ್ ಸೂಚನೆ
ಮುನಿರತ್ನ
ಆಯೇಷಾ ಬಾನು
| Edited By: |

Updated on:Jan 20, 2021 | 5:33 PM

Share

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ವೋಟರ್ ಐ.ಡಿ. ಸಂಗ್ರಹ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪಿಐಎಲ್ ಸಲ್ಲಿಸಲಾಗಿತ್ತು. ಪೊಲೀಸರ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಆನಂದ್ ಮತ್ತು ಸಂತೋಷ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್, ಪೊಲೀಸರು ಸಲ್ಲಿಸಿದ್ದ ಚಾರ್ಜ್ ಷೀಟ್​ನ ಪರಾಮರ್ಶೆ ನಡೆಸಿ ತನಿಖೆಯ ಲೋಪದೋಷಗಳ ಬಗ್ಗೆ ವರದಿ ಸಲ್ಲಿಸಲು ಐಪಿಎಸ್ ಅಧಿಕಾರಿಯನ್ನು ನೇಮಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ  ಸೂಚಿಸಿತ್ತು.

ಅದರಂತೆ ತನಿಖೆ ಪರಾಮರ್ಶೆ ನಡೆಸಿ ಐಪಿಎಸ್ ಅಧಿಕಾರಿಯ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿತ್ತು. ಪೊಲೀಸರ ತನಿಖೆಯಲ್ಲಿ ಕೆಲ ಲೋಪವಿರುವುದು ಪರಾಮರ್ಶೆಯಲ್ಲಿ ಪತ್ತೆಯಾಗಿದೆ. ಪೊಲೀಸರ ತನಿಖೆ ಇನ್ನೂ ಪೂರ್ಣವಾಗಿಲ್ಲ. ಮುನಿರತ್ನ ವಿರುದ್ಧ ತನಿಖೆ ಇನ್ನೂ ಮುಂದುವರಿದಿದೆ. ಸಿಬಿಐ ತನಿಖೆಯನ್ನೇ ಕೋರಿರುವ ಅರ್ಜಿದಾರರು ರಾಜ್ಯ ಪೊಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂದು 51 ಪುಟಗಳ ತನಿಖೆ ಪರಾಮರ್ಶೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಶಾಸಕ ಮುನಿರತ್ನ ರಾಜ್ಯ ಪೊಲೀಸರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹೀಗಾಗಿ ತನಿಖೆ ವಿಳಂಬವಾಗಿದೆ. ಸಿಬಿಐ ತನಿಖೆಗೆ ನಾವು ಸಹಕರಿಸುತ್ತೇವೆ. ಹಾಗಾಗಿ ಸಿಬಿಐಗೆ ಪ್ರಕರಣ ಒಪ್ಪಿಸುವಂತೆ ಅರ್ಜಿದಾರರ ಪರ ವಕೀಲ ಕೆಬಿಕೆ ಸ್ವಾಮಿ ಮನವಿ ಮಾಡಿದ್ದರು.

ಸದ್ಯಕ್ಕೆ ಸಿಬಿಐ ತನಿಖೆ ಅಗತ್ಯ ಇಲ್ಲವೆಂದಿರುವ ಹೈಕೋರ್ಟ್, ತನಿಖೆ ಮುಂದುವರಿಸಲು ಪೊಲೀಸರಿಗೆ ಸೂಚಿಸಿದೆ. ಎರಡು ಪ್ರಕರಣಗಳಲ್ಲಿ ತನಿಖೆ ಇನ್ನೂ ಮುಂದುವರಿದಿದೆ. ಅಲ್ಲದೇ ಸಿಬಿಐ ಕೂಡಾ ತನಿಖೆ ನಡೆಸಲು ಅಸಹಾಯಕತೆ ವ್ಯಕ್ತಪಡಿಸಿದೆ. ಅರ್ಜಿದಾರರು ಪಕ್ಷವೊಂದರ ಕಾರ್ಯಕರ್ತರಾಗಿದ್ದು ಮುನಿರತ್ನ ಜೊತೆ ರಾಜಕೀಯ ವಿರೋಧಿಗಳಾಗಿರುವಂತಿದೆ. ತನಿಖೆ ಮುಂದುವರಿದಿರುವುದರಿಂದ ಅರ್ಜಿದಾರರು ಪೊಲೀಸರ ತನಿಖೆಗೆ ಸಹಕರಿಸಬೇಕು. ಹಾಗೇ ಅರ್ಜಿದಾರರು ಎತ್ತಿರುವ ತನಿಖಾ ಲೋಪವನ್ನು ತನಿಖಾಧಿಕಾರಿ ಪರಿಗಣಿಸಬೇಕು ಎಂದು ಸಿಜೆ ಎ.ಎಸ್.ಒಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಡಿಸಿ, ತನಿಖಾ ಪ್ರಗತಿ ವರದಿ ಸಲ್ಲಿಸಲು ಪೊಲೀಸರಿಗೆ ಸೂಚಿಸಿದೆ.

ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್​!​ ಏನದು?

Published On - 5:30 pm, Wed, 20 January 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ