AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ವೋಟರ್ ಐಡಿ ಸಂಗ್ರಹ ಆರೋಪ; ತನಿಖಾ ಲೋಪ ಪರಿಗಣಿಸಿ, ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಕೋರ್ಟ್ ಸೂಚನೆ

ಶಾಸಕ ಮುನಿರತ್ನ ವಿರುದ್ಧ ವೋಟರ್ ಐಡಿ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆಯಂತೆ IPS ಅಧಿಕಾರಿಯಿಂದ ವರದಿ ಸಲ್ಲಿಕೆಯಾಗಿದೆ. ತನಿಖೆ ಪರಾಮರ್ಶೆ ನಡೆಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಲಾಗಿದೆ.

ಮುನಿರತ್ನ ವೋಟರ್ ಐಡಿ ಸಂಗ್ರಹ ಆರೋಪ; ತನಿಖಾ ಲೋಪ ಪರಿಗಣಿಸಿ, ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಕೋರ್ಟ್ ಸೂಚನೆ
ಮುನಿರತ್ನ
ಆಯೇಷಾ ಬಾನು
| Edited By: |

Updated on:Jan 20, 2021 | 5:33 PM

Share

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ವೋಟರ್ ಐ.ಡಿ. ಸಂಗ್ರಹ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪಿಐಎಲ್ ಸಲ್ಲಿಸಲಾಗಿತ್ತು. ಪೊಲೀಸರ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಆನಂದ್ ಮತ್ತು ಸಂತೋಷ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್, ಪೊಲೀಸರು ಸಲ್ಲಿಸಿದ್ದ ಚಾರ್ಜ್ ಷೀಟ್​ನ ಪರಾಮರ್ಶೆ ನಡೆಸಿ ತನಿಖೆಯ ಲೋಪದೋಷಗಳ ಬಗ್ಗೆ ವರದಿ ಸಲ್ಲಿಸಲು ಐಪಿಎಸ್ ಅಧಿಕಾರಿಯನ್ನು ನೇಮಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ  ಸೂಚಿಸಿತ್ತು.

ಅದರಂತೆ ತನಿಖೆ ಪರಾಮರ್ಶೆ ನಡೆಸಿ ಐಪಿಎಸ್ ಅಧಿಕಾರಿಯ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿತ್ತು. ಪೊಲೀಸರ ತನಿಖೆಯಲ್ಲಿ ಕೆಲ ಲೋಪವಿರುವುದು ಪರಾಮರ್ಶೆಯಲ್ಲಿ ಪತ್ತೆಯಾಗಿದೆ. ಪೊಲೀಸರ ತನಿಖೆ ಇನ್ನೂ ಪೂರ್ಣವಾಗಿಲ್ಲ. ಮುನಿರತ್ನ ವಿರುದ್ಧ ತನಿಖೆ ಇನ್ನೂ ಮುಂದುವರಿದಿದೆ. ಸಿಬಿಐ ತನಿಖೆಯನ್ನೇ ಕೋರಿರುವ ಅರ್ಜಿದಾರರು ರಾಜ್ಯ ಪೊಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂದು 51 ಪುಟಗಳ ತನಿಖೆ ಪರಾಮರ್ಶೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಶಾಸಕ ಮುನಿರತ್ನ ರಾಜ್ಯ ಪೊಲೀಸರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹೀಗಾಗಿ ತನಿಖೆ ವಿಳಂಬವಾಗಿದೆ. ಸಿಬಿಐ ತನಿಖೆಗೆ ನಾವು ಸಹಕರಿಸುತ್ತೇವೆ. ಹಾಗಾಗಿ ಸಿಬಿಐಗೆ ಪ್ರಕರಣ ಒಪ್ಪಿಸುವಂತೆ ಅರ್ಜಿದಾರರ ಪರ ವಕೀಲ ಕೆಬಿಕೆ ಸ್ವಾಮಿ ಮನವಿ ಮಾಡಿದ್ದರು.

ಸದ್ಯಕ್ಕೆ ಸಿಬಿಐ ತನಿಖೆ ಅಗತ್ಯ ಇಲ್ಲವೆಂದಿರುವ ಹೈಕೋರ್ಟ್, ತನಿಖೆ ಮುಂದುವರಿಸಲು ಪೊಲೀಸರಿಗೆ ಸೂಚಿಸಿದೆ. ಎರಡು ಪ್ರಕರಣಗಳಲ್ಲಿ ತನಿಖೆ ಇನ್ನೂ ಮುಂದುವರಿದಿದೆ. ಅಲ್ಲದೇ ಸಿಬಿಐ ಕೂಡಾ ತನಿಖೆ ನಡೆಸಲು ಅಸಹಾಯಕತೆ ವ್ಯಕ್ತಪಡಿಸಿದೆ. ಅರ್ಜಿದಾರರು ಪಕ್ಷವೊಂದರ ಕಾರ್ಯಕರ್ತರಾಗಿದ್ದು ಮುನಿರತ್ನ ಜೊತೆ ರಾಜಕೀಯ ವಿರೋಧಿಗಳಾಗಿರುವಂತಿದೆ. ತನಿಖೆ ಮುಂದುವರಿದಿರುವುದರಿಂದ ಅರ್ಜಿದಾರರು ಪೊಲೀಸರ ತನಿಖೆಗೆ ಸಹಕರಿಸಬೇಕು. ಹಾಗೇ ಅರ್ಜಿದಾರರು ಎತ್ತಿರುವ ತನಿಖಾ ಲೋಪವನ್ನು ತನಿಖಾಧಿಕಾರಿ ಪರಿಗಣಿಸಬೇಕು ಎಂದು ಸಿಜೆ ಎ.ಎಸ್.ಒಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಡಿಸಿ, ತನಿಖಾ ಪ್ರಗತಿ ವರದಿ ಸಲ್ಲಿಸಲು ಪೊಲೀಸರಿಗೆ ಸೂಚಿಸಿದೆ.

ನಾಳೆ ಬೈಎಲೆಕ್ಷನ್,​ ಇವತ್ತು ಮುನಿರತ್ನಗೆ ಸುಪ್ರೀಂ ರಿಲೀಫ್​!​ ಏನದು?

Published On - 5:30 pm, Wed, 20 January 21

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ